ಮೂಡುಬಿದಿರೆ: ಐತಿಹಾಸಿಕ ಕಟ್ಟಡ ಉಳಿಯಲಿ

ಮೂಡುಬಿದಿರೆ: ಶತಮಾನ ದಾಟಿದ ಪ್ರವಾಸಿ ಬಂಗ್ಲೆ

Team Udayavani, Sep 12, 2022, 11:48 AM IST

5

ಮೂಡುಬಿದಿರೆ: ನೂರ ಹದಿನೈದು ವರ್ಷಗಳ ಹಿಂದೆ ಬ್ರಿಟಿಷರ ಕಾಲದಲ್ಲಿ ಮೂಡುಬಿದಿರೆಯಲ್ಲಿ ನಿರ್ಮಾಣವಾಗಿದ್ದ ಸರ್‌ ಆರ್ಥರ್‌ ಲಾಲಿ ಬಂಗಲೆ (ಪ್ರವಾಸಿ ಬಂಗ್ಲೆ/ ತನಿಖಾಧಿಕಾರಿಗಳ ತಂಗುದಾಣ)ಯ ಬದಲಿಗೆ ಹೊಸ ಕಟ್ಟಡ ನಿರ್ಮಾಣವಾಗುವ ಸಾಧ್ಯತೆ ಇದೆ. ಅದೇ ವೇಳೆ ಹಳೆ ಕಟ್ಟಡವನ್ನು ಕೆಡವಿ ಅದೇ ಸ್ಥಳದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುವುದು ಎಂಬ ವರದಿಯಿಂದ ನಾಗರಿಕರು ಕಳವಳ ಕ್ಕೀಡಾಗಿದ್ದಾರೆ.

ಬ್ರಿಟಿಷರ ಕಾಲದಲ್ಲಿ ಮಂಗಳೂರಿನಿಂದ ಕುದುರೆ ಸಾರೋಟಿನಲ್ಲಿ ಹೊರಡುವ ಜಿಲ್ಲಾ ಕಲೆಕ್ಟರ್‌ ಸಾಹೇಬರು ಹಾಗೂ ಬ್ರಿಟಿಷ್‌ ಅಧಿಕಾರಿಗಳಿಗೆ ತಂಗಲು ಮಂಗಳೂರಿನಿಂದ ಗುರುಪುರ, ಮೂಡುಬಿದಿರೆ, ಕಾರ್ಕಳ ಹೀಗೆ ಸುಮಾರು ಹನ್ನೆರಡರಿಂದ ಹದಿನೆಂಟು ಕಿ.ಮೀ. ಅಂತರದಲ್ಲಿ ತನಿಖಾಧಿಕಾರಿಗಳ ಬಂಗ್ಲೆ ನಿರ್ಮಿಸಲಾಗಿತ್ತು. ಆಗಿನ ಮದ್ರಾಸ್‌ ಪ್ರಾಂತದ ಗವರ್ನರ್‌ ಆಗಿದ್ದ ಸರ್‌ ಆರ್ಥರ್‌ ಲಾಲಿ ಅವರು ಮೂಡುಬಿದಿರೆಗೆ ಭೇಟಿ ನೀಡಿದ್ದುದರ ನೆನಪಿಗಾಗಿ ಈ ಬಂಗ್ಲೆ 1907ರ ನವೆಂಬರ್‌ 8ರಂದು ನಿರ್ಮಾಣವಾಗಿತ್ತು. ಆಗಿನ ಜಿಲ್ಲಾ ಕಲೆಕ್ಟರ್‌ ಮತ್ತು ಡಿಸ್ಟ್ರಿಕ್ಟ್ ಬೋರ್ಡ್‌ ಪ್ರಸಿಡೆಂಟ್‌ ಅಝೀಝುದ್ದೀನ್‌ ಅವರು ಈ ಬಂಗ್ಲೆ ನಿರ್ಮಿಸಿದವರು.

ಸಾಧ್ಯತೆಗಳಿವೆ

1. ವಿದೇಶಗಳಲ್ಲಿ ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವ ಪರಂಪರೆಯ ಕುರಿತಾದ ಕಾಳಜಿ ಇರುವಂತೆ ಇಲ್ಲೂ ಇಂಥ ಕಟ್ಟಡಗಳನ್ನು ಉಳಿಸಿಕೊಳ್ಳಬೇಕಾಗಿದೆ. ಈ ಕಟ್ಟಡ ತಕ್ಕ ಮಟ್ಟಿಗೆ ಸದೃಢ, ಸುಂದರವಾಗಿಯೇ ಇರುವ ಕಾರಣ, ಅಲ್ಪ ಸ್ವಲ್ಪ ದುರಸ್ತಿ ನಡೆಸಿ ಇದನ್ನು ಇದ್ದಲ್ಲೇ ಉಳಿಸಿಕೊಳ್ಳಬಹುದು.

  1. ಹತ್ತಿರದಲ್ಲೇ ಇರುವ ಈಗಿನ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮೊದಲು “ವಿಜ್ಞಾನ ಮಂದಿರ’ವಾಗಿತ್ತು. ಅಲ್ಲಿನ ಪ್ರಯೋಗಾಲಯ, ವಿಜ್ಞಾನ ವಸ್ತು ಸಂಗ್ರಹಾಲಯಕ್ಕೆ ಶಾಲಾ ಮಕ್ಕಳು ಭೇಟಿ ನೀಡಿ ತಮ್ಮ ಜ್ಞಾನವರ್ಧಿಸಿಕೊಳ್ಳುವ ಜತೆಗೆ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳುತ್ತಿದ್ದರು. ಈಗ, ಪ್ರವಾಸಿ ಬಂಗ್ಲೆಯನ್ನು ಸದೃಢಗೊಳಿಸಿ ಈ ಉದ್ದೇಶಕ್ಕೆ ಬಳಸಬಹುದು.
  2. ಹಳೆಯ ಕಟ್ಟಡವನ್ನು ಹಾಗೆಯೇ ಉಳಿಸಿಕೊಳ್ಳುವ ಜತೆಗೆ ಹಿಂಭಾಗದಲ್ಲಿ ಹೊಸ ಕಟ್ಟಡ ಎಬ್ಬಿಸುವುದು. ಅಗತ್ಯವಿದ್ದರೆ ಚಿಕ್ಕ ಕಟ್ಟಡಗಳನ್ನು ನಿವಾರಿಸಬಹುದು.
  3. ಪೇಟೆಯ ಹೃದಯ ಭಾಗಕ್ಕೇ ಎಲ್ಲ ಕಟ್ಟಡಗಳನ್ನು ದಟ್ಟೆ$çಸಿ, “ಒತ್ತಡ’ ಹಾಕಿ “ಹೃದಯಾಘಾತ’ ವಾಗುವ ಬದಲು ಪ್ರಸ್ತಾವಿತ ನೂತನ ಬಂಗ್ಲೆಯನ್ನು ಅತ್ಯಾಕರ್ಷಕವಾಗಿ ಮೈದಳೆಯುತ್ತಿರುವ ಹತ್ತಿರದ ಕಡಲಕೆರೆ ಪ್ರದೇಶದಲ್ಲಿ ನಿರ್ಮಿಸಬಹುದು.

ಪಾರಂಪರಿಕ ಕಟ್ಟಡ ಉಳಿಸಿ: ದ.ಕ. ಜಿಲ್ಲೆ ಯ 32 ಪಾರಂಪರಿಕ ಪ್ರಾಚೀನ ಪಟ್ಟಣಗಳಲ್ಲಿ ಜೈನ ಕಾಶಿ ಮೂಡುಬಿದಿರೆಯೂ ಒಂದಾಗಿದೆ. ಇಲ್ಲಿನ ಪಾರಂಪರಿಕ ಕಟ್ಟಡಗಳನ್ನು ಉಳಿಸುವ, ಕಾಯಕಲ್ಪ ನೀಡುವ ಕಾರ್ಯ ನಡೆಯಬೇಕಾಗಿದೆ. ಅಂತೆಯೇ ಶತಮಾನ ಕಂಡ ಐತಿಹಾಸಿಕ ಕಟ್ಟಡ ಪ್ರವಾಸಿ ಬಂಗ್ಲೆಗೆ ಅವಶ್ಯವಿದ್ದರೆ ಕಾಯಕಲ್ಪ ನೀಡಲು ಸರಕಾರ ಮುಂದಾಗಬೇಕಾಗಿದೆ. – ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಮೂಡುಬಿದಿರೆ ಶ್ರೀ ಜೈನ ಮಠಾಧೀಶರು

„ಧನಂಜಯ ಮೂಡುಬಿದಿರೆ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.