ಕಲಾ ಪ್ರಕಾರಗಳ ಅಧ್ಯಯನಕ್ಕೆ ಆಸ್ಥೆ ವಹಿಸಲಿ: ಅನಸೂಯ ಪಾವಂಜೆ


Team Udayavani, Apr 7, 2018, 4:46 PM IST

7-April-20.jpg

ಮಹಾನಗರ: ಯುವ ಸಮುದಾಯವು ಕಲಾ ಪ್ರಕಾರಗಳ ಅಧ್ಯಯನದ ಬಗ್ಗೆ ವಿಶೇಷ ಆಸ್ಥೆ ವಹಿಸುವುದು ಇಂದಿನ ಅಗತ್ಯ ಎಂದು ಕರ್ನಾಟಕ ಕ್ರಾಫ್ಟ್ಸ್ ಕೌನ್ಸಿಲ್‌ ನ ಮಾಜಿ ಕಾರ್ಯದರ್ಶಿ ಅನಸೂಯ ಪಾವಂಜೆ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯ, ಎನ್‌ಜಿ ಪಾವಂಜೆ ಲಲಿತಕಲಾ ಪೀಠ ಮತ್ತು ರಾಜ್ಯ ಲಲಿತಕಲಾ ಅಕಾಡೆಮಿ ಸಹಯೋಗದಲ್ಲಿ ನಗರದ ರೋಶನಿ ನಿಲಯದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ‘ಕರಾವಳಿ ಪರಂಪರೆ ಮತ್ತು ಕಲೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಆಧುನಿಕ ಕಲೆಯ ವಿಕಾಸ’ ಎಂಬ ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

 ಕಲೆ ಬೆಳೆಯಲಿ
ಆಧುನಿಕ ಕಲೆ ತನಗೆ ಅರ್ಥವಾಗದಿದ್ದರೂ ಅಲ್ಲಿನ ಬಣ್ಣಗಳ ಸಂಯೋಜನೆ ಉತ್ತಮವಾಗಿದೆ. ತನ್ನ ತಂದೆ ಎನ್‌ಜಿ ಪಾವಂಜೆ ಅವರು ಚಿತ್ರಕಲೆಯ ಬೆಳವಣಿಗೆಗಾಗಿ ಶ್ರಮಿಸಿದವರು. ಮೈಸೂರು ಅರಸರ ಆಸ್ಥಾನದಲ್ಲಿ ಚಿತ್ರಕಲೆ ಬಿಡಿಸುತ್ತಿದ್ದ ಬಗ್ಗೆ ತನಗೆ ನೆನಪುಗಳಿವೆ. ಕಲೆ ಬೆಳೆಯಬೇಕು ಎಂದರು.

ಅಧ್ಯಯನ ನಡೆಯಲಿ
ಹಿರಿಯ ಸಂಶೋಧಕ ಡಾ| ಪುಂಡಿಕಾಯಿ  ಗಣಪಯ್ಯ ಭಟ್‌ ಮಾತನಾಡಿ, ಕರಾವಳಿಯಲ್ಲಿ ಚಿತ್ರಕಲೆಗೆ ಇನ್ನೂರು ವರ್ಷಗಳ ಇತಿಹಾಸವಿದ್ದರೂ, ಪರಂಪರೆಯ ಚಿತ್ರ ಕತೆಯ ಕುರಿತ ಸರಿಯಾದ ಮಾಹಿತಿ ನಮಗೆ ಸಿಗುತ್ತಿಲ್ಲ. ಮೂಡಬಿದಿರೆಯಲ್ಲಿ ಲಭ್ಯವಿರುವ ತಾಳೆಗರಿಗಳಲ್ಲಿ ಇರುವ ಚಿತ್ರಗಳು ಶ್ರವಣಬೆಳಗೊಳ, ಬಂಕಾಪುರದಿಂದ ಬಂದವುಗಳು ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಜಾನಪದ, ಯಕ್ಷಗಾನ, ಭೂತಾರಾಧನೆ ಬಣ್ಣಗಾರಿಕೆಯನ್ನೂ ಚಿತ್ರಕಲೆ ಎಂದು ಪರಿಗಣಿಸಬಹುದು. ಈ ನಿಟ್ಟಿನಲ್ಲಿ ಇನ್ನಷ್ಟು ಹೆಚ್ಚಿನ ಅಧ್ಯಯನವಾಗಬೇಕು ಎಂದರು.ಹಿರಿಯ ಕಲಾವಿದ ಪಿ.ಎಸ್‌. ಪುಣಿಚಿತ್ತಾಯ ಕಾಸರಗೋಡು, ಉಡುಪಿ ಆರ್ಟಿಸ್ಟ್ಸ್ ಫೋರಂ ಅಧ್ಯಕ್ಷ ರಮೇಶ್‌ ರಾವ್‌ ಅತಿಥಿಗಳಾಗಿದ್ದರು. ರಾಜ್ಯ ಲಲಿತ ಕಲಾ ಅಕಾಡೆಮಿ ಅಧ್ಯಕ್ಷೆ ಪ್ರೊ| ಎಂ.ಜೆ. ಕಮಲಾಕ್ಷಿ ಆಶಯ ನುಡಿಗಳನ್ನಾಡಿದರು. 

ಮಂಗಳೂರು ವಿವಿ ಕುಲಪತಿ ಪ್ರೊ| ಕೆ. ಬೈರಪ್ಪ ಅಧ್ಯಕ್ಷತೆ ವಹಿಸಿದ್ದರು. ಲಲಿತಕಲಾ ಅಕಾಡೆಮಿ ರಿಜಿಸ್ಟ್ರಾರ್‌ ಇಂದ್ರಮ್ಮ, ಎನ್‌.ಜಿ. ಪಾವಂಜೆ ಲಲಿತಕಲಾ ಪೀಠ ಸಂಯೋಜಕ ಪ್ರೊ| ಕೆ. ಕೃಷ್ಣ ಶರ್ಮ ಮುಖ್ಯ ಅತಿಥಿಗಳಾಗಿದ್ದರು. ಪ್ರೊ| ರವಿಶಂಕರ ರಾವ್‌ ಸ್ವಾಗತಿಸಿ, ಡಾ| ನೇಮಿರಾಜ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಕಲಾಕೃತಿ ಪ್ರದರ್ಶನ
ವಿಚಾರ ಸಂಕಿರಣ ಅಂಗವಾಗಿ ನಡೆದ ಕಲಾ ಪ್ರದರ್ಶನದಲ್ಲಿ 29 ಮಂದಿ ಕಲಾವಿದರ ಕಲಾಕೃತಿ ಪ್ರದರ್ಶನಗೊಂಡಿತು. ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆಯಲಿದ್ದು, ಕಲಾವಿದರು ವಿವಿಧ ವಿಚಾರಗಳ ಬಗ್ಗೆ ವಿಷಯ ಮಂಡಿಸಲಿದ್ದಾರೆ. ಶನಿವಾರ ಸಂಜೆ ಸಮಾರೋಪ ನಡೆಯಲಿದೆ. ಕರಾವಳಿಯ ಯುವ ಆಧುನಿಕ ಚಿತ್ರ ಕಲಾವಿದರ ಚಿತ್ರ ಪ್ರದರ್ಶನ ಇಲ್ಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.