ಉಗ್ರವಾದಕ್ಕೆ ಕುಮ್ಮಕ್ಕು- ಕಾಂಗ್ರೆಸ್‌ ಪ್ರಣಾಳಿಕೆ ಹಿಂಪಡೆಯಲಿ: ಸಿ.ಟಿ.ರವಿ


Team Udayavani, Apr 23, 2019, 6:20 AM IST

ct-ravi

ಮಂಗಳೂರು: ದೇಶದ ಸುರಕ್ಷೆ ದೃಷ್ಟಿಯಿಂದ ಕಾಶ್ಮೀರದಲ್ಲಿ ಸೈನಿಕರಿಗೆ ನೀಡಿರುವ ಪರಮಾಧಿಕಾರ ವನ್ನು ಹಿಂದಕ್ಕೆ ಪಡೆಯುವ ಭರವಸೆ ನೀಡಿರುವ ಕಾಂಗ್ರೆಸ್‌ ಪ್ರಣಾಳಿಕೆ ಉಗ್ರ ಚಟುವಟಿಕೆಗಳಿಗೆ ನೇರವಾಗಿ ಕುಮ್ಮಕ್ಕು ನೀಡಿದಂತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಜನರ ಕ್ಷಮೆಯಾಚಿಸಿ ತತ್‌ಕ್ಷಣ ಪ್ರಣಾಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಬಿಜೆಪಿ ಪ್ರ. ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ. ಆಗ್ರಹಿಸಿದ್ದಾರೆ.

ನಗರದ ಬಿಜೆಪಿ ಚುನಾವಣೆ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾ ಚಾರದ ವಿರುದ್ಧ ಪ್ರಧಾನಿ ಮೋದಿ ತೆಗೆದುಕೊಂಡ ಬಿಗಿ ನಿಲುವು ದೇಶವನ್ನು ಸುರಕ್ಷಿತವಾಗಿಟ್ಟಿದೆ. ಕಾಶ್ಮೀರ ಮತ್ತು ಛತ್ತೀಸ್‌ಗಢ ಹೊರತು ಪಡಿಸಿದರೆ ದೇಶದ ಬೇರೆಲ್ಲೂ ಭಯೋ ತ್ಪಾದಕರ/ನಕ್ಸಲರ ದಾಳಿ ನಡೆದಿಲ್ಲ. ಹೀಗಿರುವಾಗ ಕಾಂಗ್ರೆಸ್‌ನ ಪ್ರಣಾಳಿಕೆ ಭಯೋತ್ಪಾದನಾ ಚಟುವಟಿಕೆಗಳಿಗೆ ಪರೋಕ್ಷವಾಗಿ ಪ್ರೋತ್ಸಾಹ ನೀಡಿದಂತಾಗಲಿದೆ ಎಂದರು.

ತನಿಖೆ ನಡೆಸುತ್ತೇವೆ
ರಾಜ್ಯದಲ್ಲಿ ಐಟಿ ದಾಳಿ ನಡೆದಾಗ ಮೈತ್ರಿ ಕೂಟಗಳು ಒಟ್ಟಾಗಿ ಬೀದಿ ಗಿಳಿದು ಹೋರಾಟ ನಡೆಸಿದ್ದವು. ಐಟಿ ದಾಳಿಯನ್ನು ಭಯೋತ್ಪಾದಕ ದಾಳಿ ಯಂತೆ ಬಿಂಬಿಸಲಾಯಿತು. ರಾಜ್ಯದ 5 ಪ್ರಮುಖ ಕಾಮಗಾರಿಗಳ ಕಂಪ್ಲೀ ಷನ್‌ ಸರ್ಟಿಫಿಕೇಟ್‌ ಬಾರದೆ ಗುತ್ತಿಗೆದಾರರಿಗೆ ಹಣ ಸಂದಾಯ ಮಾಡಲಾಗಿದೆ. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಲ್ಲಿ ಈ ಬಗ್ಗೆ ಸಮಗ್ರ ತನಿಖೆ ಮಾಡಿಸುತ್ತೇವೆ ಎಂದು ಎಚ್ಚರಿಸಿದರು.

ರಾಹುಲ್‌ ಗಾಂಧಿ ಅವರ ಪೌರತ್ವ ವಿಚಾರದಲ್ಲಿ ಕಾಂಗ್ರೆಸ್‌ ಸ್ಪಷ್ಟನೆ ನೀಡಬೇಕು. ರಾಹುಲ್‌ ಭಾರತೀಯನೋ ಅಲ್ಲವೇ ಎಂಬ ಕುರಿತು ಜನರಿಗೆ ತಿಳಿಸಲು ಇಷ್ಟು ಕಾಲಾವಕಾಶ ಯಾಕೆ ತೆಗೆದುಕೊಳ್ಳುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಈ ಬಗ್ಗೆ ಜನರಿಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕುಂಕುಮ ಇಟ್ಟ ಜನರನ್ನು ಕಂಡರೆ ಭಯವಾಗುತ್ತದೆ ಎಂದು ಹೇಳಿದ್ದ ಮಾಜಿ ಮುಖ್ಯಮಂತ್ರಿ ಅವರಿಗೆ ರಾಹುಲ್‌ ಕುಂಕುಮ ಹಾಕಿಕೊಂಡು ಪ್ರಚಾರಕ್ಕೆ ತೆರಳುತ್ತಿರುವುದು ಕಾಣುತ್ತಿಲ್ಲವೇ? ಪ್ರಧಾನಿ ಅವರನ್ನು ಏಕವಚನದಲ್ಲಿ ತೆಗಳುವ ಕಾಂಗ್ರೆಸ್‌ ನಾಯಕರ ಸಂಸ್ಕಾರ ಯಾವ ಮಟ್ಟದ್ದು ಎಂದು ಪ್ರಶ್ನಿಸಿದರು.

ಸಚಿವೆ ಜಯಮಾಲಾ ಅವರು ನನ್ನ ನಾಲಗೆಯನ್ನು ಚಪ್ಪಲಿಗೆ ಹೋಲಿಸಿದ್ದರು ಆದರೆ ಸಂಸ್ಕಾರವಿಲ್ಲದೆ ಮಾತನಾಡುವ ಕಾಂಗ್ರೆಸ್‌ ನಾಯಕರ ಬಗ್ಗೆ ಯಾಕೆ ಅವರು ದನಿ ಎತ್ತುತ್ತಿಲ್ಲ. ಜಯಮಾಲಾ ಅವರು ನನ್ನ ನಾಲಗೆಗೆ ಬಜೆ ಮುಟ್ಟಿಸಲು ಹೇಳಿದ್ದಾರೆ. ಆದರೆ ನನ್ನ ನಾಲಗೆ ಸರಿಯಾಗಿಯೇ ಇದೆ.

ಸ್ಪಷ್ಟವಾಗಿ ಕನ್ನಡ ಮಾತನಾಡುತ್ತೇನೆ. ಪತ್ರದಲ್ಲಿ ಬರೆದ ವಿಶ್ವೇಶ್ವರಯ್ಯ, ಬಸವೇಶ್ವರ ಅವರ ಹೆಸರನ್ನು ಸರಿಯಾಗಿ ಉಚ್ಚರಿಸಲು ಸಾಧ್ಯವಾಗದ ರಾಹುಲ್‌ ಗಾಂಧಿ ಅವರಿಗೆ ಬಜೆ ಮುಟ್ಟಿಸಲು ಕಳುಹಿಸಿಕೊಡಲಿ ಎಂದರು.

ಮೋದಿ ಅಲ್ಪಸಂಖ್ಯಾಕರನ್ನು ಅವಗಣಿಸುತ್ತಿದ್ದಾರೆ ಎಂಬುದಾಗಿ ಕಾಂಗ್ರೆಸ್‌
ನಾಯಕರು ಹೇಳುತ್ತಾರೆ. ಆದರೆ ಕೇಂದ್ರ ಸರಕಾರದ ಉತ್ತಮ ಯೋಜನೆಗಳ ಬಗ್ಗೆ ಮಾತನಾಡುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಹಿಟ್ಲರ್‌ ಮನಃಸ್ಥಿತಿ ಇದೆ.

ಅದರಿಂದಾಗಿ ಕಳೆದ 60 ವರ್ಷಗಳಿಂದ ದೇಶ ಅಭಿವೃದ್ಧಿಯಾಗದೆ ಉಳಿದಿದೆ ಎಂದರು.

ವ್ಯಕ್ತಿ ಪೂಜೆಯಲ್ಲ; ವ್ಯಕ್ತಿತ್ವದ ಪೂಜೆ
ಮೋದಿ ಹೆಸರಲ್ಲಿ ಮತ ಕೇಳುವುದು ಅಪಾಯ ಎಂದು ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರು ಹೇಳಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆ ಭಾಷಣದಲ್ಲಿ ಕಲ್ಲಡ್ಕ ಭಟ್‌ ಅವರು ಮೋದಿ ಅವರ ಕಾರ್ಯವೈಖರಿ ಬಗ್ಗೆ ಹೊಗಳಿದ್ದಾರೆ. ಬಿಜೆಪಿ ಯಾವತ್ತೂ ವ್ಯಕ್ತಿ ಪೂಜೆ ಮಾಡಿಲ್ಲ. ವ್ಯಕ್ತಿತ್ವದ ಪೂಜೆ ಮಾಡುತ್ತದೆ. ಮೋದಿ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಬಾರಿ ಮತ್ತೆ ಮೋದಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೇಳಿದರು.

ಶಾಸಕರಾದ ವೇದವ್ಯಾಸ್‌ ಕಾಮತ್‌, ಡಾ| ವೈ. ಭರತ್‌ ಶೆಟ್ಟಿ, ನಿತಿನ್‌ ಕುಮಾರ್‌, ಕಿಶೋರ್‌, ಸಂಜಯ್‌ ಪ್ರಭು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.