ಕದ್ರಿ ಶೌಚಾಲಯಕ್ಕೆ ಮತ್ತೆ ಬೀಗ!
Team Udayavani, May 25, 2022, 12:52 PM IST
ಕದ್ರಿ: ಕಳೆದ ಕೆಲವು ತಿಂಗಳಿನಿಂದ ನಿರ್ವಹಣೆಯಿಲ್ಲದೆ ಗಬ್ಬು ನಾರುತ್ತಿದ್ದ ಕದ್ರಿ ಶೌಚಾಲಯಕ್ಕೆ ಮತ್ತೆ ಬೀಗ ಜಡಿಯಲಾಗಿದ್ದು, ಸದ್ಯ ಸಾರ್ವಜನಿಕರಿಗೆ ಶೌಚಾಲಯ ಪ್ರವೇಶ ನಿರ್ಬಂಧಿಸಲಾಗಿದೆ.
ಕಳೆದ ವರ್ಷ ಉದ್ಘಾಟನೆ ಗೊಂಡಿದ್ದ ಕದ್ರಿ ಶೌಚಾಲಯದ ಟೆಂಡರ್ ವಹಿಸಿಕೊಂಡ ಸಂಸ್ಥೆ ಅದನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿರಲಿಲ್ಲ. ಇದೇ ಕಾರಣಕ್ಕೆ ಈ ಹಿಂದೆ ಬೀಗ ಜಡಿಯಲಾಗಿತ್ತು. ಆದರೆ, ಕೆಲವರು ಬೀಗ ಮುರಿದು ಶೌಚಾಲಯ ಪ್ರವೇಶಿಸುತ್ತಿದ್ದರು, ಇದರ ಪರಿಣಾಮ ಶೌಚಾಲಯ ಮಲಿನವಾಗುತ್ತಿತ್ತು. ಶೌಚಾಲಯದಲ್ಲಿ ನಿಗದಿತ ಶುಲ್ಕ ಪಾವತಿಸಿ ಶೌಚಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಶುಲ್ಕ ಸಂಗ್ರಹ ಕಡಿಮೆ ಆದ ಕಾರಣ ಸಮರ್ಪಕ ನಿರ್ವಹಣೆ ಆಗುತ್ತಿರಲಿಲ್ಲ. ಇದೇ ಕಾರಣಕ್ಕೆ ಟೆಂಡರ್ ವಹಿಸಿದವರೂ ಆಸಕ್ತಿ ತೋರುತ್ತಿರಲಿಲ್ಲ.
ಕದ್ರಿ ಬಳಿಯ ಶೌಚಾಲಯ ನಿರ್ವಹಣೆ ಇಲ್ಲದ ಕುರಿತಂತೆ ‘ಉದಯವಾಣಿ ಸುದಿನ’ ಮೇ 24 ರಂದು ವಿಶೇಷ ವರದಿ ಪ್ರಕಟಿಸಿತ್ತು.
ಈ ಭಾಗದಲ್ಲಿ ಹಲವು ತಿಂಗಳುಗಳಿಂದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ನೌಕರರು, ರಿಕ್ಷಾ ಚಾಲಕರು ಸೇರಿದಂತೆ ಹಲವು ಮಂದಿ ಈ ಶೌಚಾಲಯವನ್ನು ಬಳಕೆ ಮಾಡುತ್ತಿದ್ದರು.
ಕದ್ರಿ, ಮಲ್ಲಿಕಟ್ಟೆ, ಕದ್ರಿ ಕಂಬಳ ಸೇರಿದಂತೆ ಸುತ್ತಮುತ್ತಲು ಯಾವುದೇ ಶೌಚಾಲಯ ಇಲ್ಲದ ಕಾರಣ ಇದು ಉಪಯೋಗ ಆಗುತ್ತಿತ್ತು. ಸದ್ಯದಲ್ಲೇ ಶೌಚಾಲಯ ನಿರ್ವಹಣೆಗೆ ಆದ್ಯತೆ ನೀಡಿ, ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು