ಲಾಕ್‌ಡೌನ್‌: ಹೊಟೇಲ್‌ಗ‌ಳಲ್ಲಿ ಪಾರ್ಸೆಲ್‌ಗೆ ಬೇಡಿಕೆ ಇಳಿಕೆ


Team Udayavani, Jul 18, 2020, 11:53 AM IST

ಲಾಕ್‌ಡೌನ್‌: ಹೊಟೇಲ್‌ಗ‌ಳಲ್ಲಿ ಪಾರ್ಸೆಲ್‌ಗೆ ಬೇಡಿಕೆ ಇಳಿಕೆ

ಸಾಂದರ್ಭಿಕ ಚಿತ್ರ

ಮಹಾನಗರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.23ರ ವರೆಗೆ ಲಾಕ್‌ಡೌನ್‌ ಘೋಷಿಸಿದ್ದು, ಹೊಟೇಲ್‌ಗ‌ಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಸದ್ಯ ಪಾರ್ಸೆಲ್‌ಗೆ ಬೇಡಿಕೆ ಕಡಿಮೆಯಾಗಿದ್ದು, ಬಹಳಷ್ಟು ಹೊಟೇಲ್‌ಗ‌ಳು ಮುಚ್ಚುವ ಭೀತಿಯಲ್ಲಿವೆ.

ಜಿಲ್ಲೆಯ ಕೆಲವು ಹೊಟೇಲ್‌ಗ‌ಳು ನಾಲ್ಕು ತಿಂಗಳುಗಳಿಂದ ತೆರೆದಿಲ್ಲ. ಕೆಲವು ಹೊಟೇಲುಗಳಲ್ಲಿ ಕೇವಲ ಉಪಾಹಾರ ಮಾತ್ರ ಇದ್ದು, ಊಟದ ವ್ಯವಸ್ಥೆ ಮಾಡಿಲ್ಲ. ಪಾರ್ಸೆಲ್‌ ಅವಕಾಶ ನೀಡಿದ ಕಾರಣ ಲಾಭಕ್ಕಿಂತ ನಷ್ಟವೇ ಹೆಚ್ಚು ಎನ್ನುತ್ತಿದ್ದಾರೆ ಮಾಲಕರು. ಸಾರ್ವಜನಿಕರು ಸಾಮಾನ್ಯವಾಗಿ ಯಾವ ರೀತಿಯ ತಿಂಡಿಯನ್ನು ಬಯಸುತ್ತಾರೆ ಎಂಬುದನ್ನು ತಿಳಿಯುವಲ್ಲಿ ಮಾಲಕರು ಸೋಲುತ್ತಿದ್ದು, ಪ್ರತಿದಿನ ಹೆಚ್ಚಿನ ಉಪಾಹಾರ ಹಾಳಾಗುತ್ತಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ರಾತ್ರಿ ಸುಮಾರು 8 ಗಂಟೆಯವರೆಗೆ ಮಾತ್ರ ಹೊಟೇಲುಗಳನ್ನು ತೆರೆದಿಡಲು ಅವಕಾಶ ನೀಡಲಾಗಿದೆ. ಸಾಮಾನ್ಯವಾಗಿ ರಾತ್ರಿ 9 ಗಂಟೆಯ ವೇಳೆಗೆ ಊಟಕ್ಕೆ ಬೇಡಿಕೆ ಬರುವ ಕಾರಣ 8 ಗಂಟೆಗೆ ಮುಚ್ಚುವುದರಿಂದ ಕಷ್ಟವಾಗುತ್ತಿದೆ ಎನ್ನುತ್ತಿದ್ದಾರೆ ಮಾಲಕರು. ಜಿಲ್ಲೆಯಲ್ಲಿ ಸುಮಾರು 1,000ಕ್ಕೂ ಮಿಕ್ಕಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಹೊಟೇಲುಗಳಿವೆ. ಸಾವಿರಾರು ಮಂದಿ ಇದನ್ನೇ ಅವಲಂಬಿಸಿಕೊಂಡಿದ್ದಾರೆ. ಕೊರೊನಾ ಸಂದರ್ಭದಲ್ಲೂ ಕೆಲವು ಮಾಲಕರು ಕಾರ್ಮಿಕರಿಗೆ ತಿಂಗಳು ಪೂರ್ತಿ ಸಂಬಳ ನೀಡಿದ್ದಾರೆ.

ಮಂಗಳೂರಿನ ಕೆಲವು ಹೊಟೇಲ್‌ ಮಾಲಕರು ಉತ್ತರ ಭಾರತದ ಕಾರ್ಮಿಕರನ್ನು ಅವಲಂಬಿಸಿಕೊಂಡಿದ್ದಾರೆ. ಕ್ಲೀನಿಂಗ್‌, ಚೈನೀಸ್‌ ಫುಡ್‌, ಚಾಟ್ಸ್‌ ತಿಂಡಿ ತಯಾರಿಯಲ್ಲಿ ಹೆಚ್ಚಾಗಿ ಅವರೇ ಕೆಲಸ ಮಾಡುತ್ತಿದ್ದಾರೆ. ಆದರೆ ಸದ್ಯ ಶೇ. 70ರಷ್ಟು ಕಾರ್ಮಿಕರು ಊರುಗಳಿಗೆ ತೆರಳಿದ್ದಾರೆ. ಅವರು ಸದ್ಯಕ್ಕೆ ಮಂಗಳೂರಿಗೆ ಬರುವುದೂ ಅನುಮಾನವಾದ್ದರಿಂದ ಹೊಟೇಲುಗಳನ್ನು ತೆರೆದರೂ, ಕಾರ್ಮಿಕರ ಕೊರತೆ ಉಂಟಾಗಬಹುದು ಎನ್ನುತ್ತಾರೆ ಮಾಲಕರು.

ಹೊಟೇಲ್‌ ಉದ್ಯಮ ನಷ್ಟದಲ್ಲಿ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಹೊಟೇಲ್‌ ಉದ್ಯಮ ನಷ್ಟ ಅನುಭವಿಸುತ್ತಿದೆ. ಸದ್ಯ ಕೆಲವು ಹೋಟೆಲುಗಳಷ್ಟೇ ತೆರೆದಿವೆ. ಸಾರ್ವಜನಿಕರಿಗೆ ಬೆಳಗ್ಗೆ 11 ಗಂಟೆವರೆಗೆ ಮಾತ್ರ ಪಾರ್ಸೆಲ್‌ಗೆ ಅವಕಾಶ ನೀಡಲಾಗಿದೆ. ಆಹಾರ ಸರಬರಾಜು ಸಂಸ್ಥೆಗಳಿಗೆ ಅವಕಾಶ ಇದ್ದರೂ, ಜನರು ಪಾರ್ಸೆಲ್‌ಗೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.
ಕುಡ್ಪಿ ಜಗದೀಶ ಶೆಣೈ, ಅಧ್ಯಕ್ಷರು, ಹೊಟೇಲ್‌ ಮಾಲಕರ ಸಂಘ

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.