ಲಾಕ್ಡೌನ್ ಉಲ್ಲಂಘನೆ ಪ್ರಕರಣ ದಾಖಲು
Team Udayavani, Apr 18, 2020, 8:31 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ನಗರದ ಲಾಲ್ಬಾಗ್ ಬಳಿ ಗುರುವಾರ ಸಂಜೆ ಲಾಕ್ಡೌನ್ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸಿದ ಹಿರಿಯ ನಾಗರಿಕರೊಬ್ಬರು ಟ್ರಾಫಿಕ್ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳೀಯ ನಿವಾಸಿ ಸುರೇಶ್ ರಾವ್ ಆರೋಪಿ. ಎ. 16ರಂದು ಅವರು ಲೇಡಿಹಿಲ್ ಕಡೆಯಿಂದ ಲಾಲ್ಬಾಗ್ನತ್ತ ಕಾರು ಚಲಾಯಿಸಿಕೊಂಡು ಬಂದಿದ್ದು, ಮುಖ್ಯರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಟ್ರಾಫಿಕ್ ಪೊಲೀಸರು ತಡೆದು ನಿಲ್ಲಿಸಿದರು. ತಮ್ಮ ಬಳಿ ಪಾಸ್ ಇದೆಯೇ ಎಂದು ಪ್ರಶ್ನಿಸಿದಾಗ ಏಕಾಏಕಿ ಆಕ್ರೋಶಗೊಂಡ ಆತ ಪೊಲೀಸರ ಜತೆಗೆ ವಾಗ್ವಾದ ನಡೆಸಿದ್ದರು. ಕರ್ತವ್ಯಕ್ಕೆ ಅಡ್ಡಿಪಡಿಸಿದರು ಎಂದು ಆರೋಪಿಸಲಾಗಿದೆ.
ಆರೋಪಿಯ ವಿರುದ್ಧ ಐಪಿಸಿ 504, 269, 353ರ ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಘಟನೆಗೆ ಸಂಬಂಧಿಸಿದ ವೀಡಿಯೋ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
129 ವಾಹನ ಮುಟ್ಟುಗೋಲು
ಮಂಗಳೂರು ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಲಾಕ್ಡೌನ್ ಉಲ್ಲಂ ಸಿ ಸಂಚರಿಸುತ್ತಿದ್ದ 129 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಶುಕ್ರವಾರ ಮುಟ್ಟುಗೋಲು ಹಾಕಿದ್ದಾರೆ.