ಪಾಲಿಕೆ ನಿರ್ಮಿಸಿದ ಶೌಚಾಲಯಕ್ಕೆ ಬೀಗ!

ಸುರತ್ಕಲ್‌, ಬೈಕಂಪಾಡಿ, ಕೂಳೂರು: ಒಳಚರಂಡಿ ಸಂಪರ್ಕ ನೀಡದೆ ಸ್ವಚ್ಛತೆಗೆ ಧಕ್ಕೆ

Team Udayavani, Jan 10, 2022, 6:55 PM IST

TOILET

ಸುರತ್ಕಲ್‌: ಸುರತ್ಕಲ್‌ ಸುತ್ತಮುತ್ತ ಮಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕರ ಶೌಚಾಲಯ ಕಟ್ಟಿದ್ದರೂ 5 ವರ್ಷಗಳಿಂದ ಬೀಗ ಜಡಿಯಲಾಗಿದೆ. ನಿರಾಶ್ರಿತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಎಲ್ಲೆಂದ ರೆಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿರುವುದ ರಿಂದ ಸ್ವಚ್ಛತೆಗೆ ಧಕ್ಕೆ ಬರುವಂತಾಗಿದೆ.

ಸುರತ್ಕಲ್‌ ನಗರದ ಹೃದಯಭಾಗದಲ್ಲಿನ ಬಸ್‌ ನಿಲ್ದಾಣದ ಹಿಂಭಾಗದಲ್ಲಿ 8 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯ ನಿರ್ಮಿಸಲಾಗಿದೆ. ಆದರೆ ಇದಕ್ಕೆ ಮುಖ್ಯವಾಗಿ ಬೇಕಾಗಿರುವ ಒಳಚರಂಡಿ ಸಂಪರ್ಕವನ್ನೇ ನೀಡಲಾಗಿಲ್ಲ. ತರಾತುರಿ ಯಲ್ಲಿ ಶೌಚಾಲಯ ಕಟ್ಟಡ ನಿರ್ಮಿಸಿದ್ದು, ಇದೀಗ ಪಾಳು ಬೀಳುವಂತಾಗಿದೆ.

ಸುರತ್ಕಲ್‌ ಪಶು ವೈದ್ಯಕೀಯ ಕೇಂದ್ರದ ಬಳಿ ಎರಡನೇ ಶೌಚಾಲಯ ನಿರ್ಮಿಸಲಾಗಿದೆ. ಇಲ್ಲಿ ಒಳಚರಂಡಿ ಬದಲಾಗಿ ಶೌಚ ಗುಂಡಿ ನಿರ್ಮಿಸಲಾಗಿದೆ. ಸ್ಥಳೀಯ ಒಂದೆರಡು ಸಂಸ್ಥೆಯವರು ಬಿಟ್ಟರೆ ಉಳಿದವರಿಗೆ ಇದರ ಬಳಕೆ ಸಾಧ್ಯವಾಗಿಲ್ಲ. ಕಾರಣ ಈವರೆಗೆ ಇದನ್ನು ಗುತ್ತಿಗೆ ಪಡೆಯಲು ಯಾರೂ ಮುಂದೆ ಬಂದಿಲ್ಲ. ಬೈಕಂಪಾಡಿ ಕೂಳೂರು ಪ್ರದೇಶದಲ್ಲಿಯೂ ಸಾರ್ವಜನಿಕ ಶೌಚಾಲಯದ ಇದೇ ಕಥೆ.

ಲಕ್ಷಾಂತರ ರೂ. ಪೋಲು
ತಲಾ 8 ಲಕ್ಷ ರೂ.ಯಂತೆ 32 ಲಕ್ಷ ರೂ. ಶೌಚಾಲಯಕ್ಕೆ ಬಳಕೆಯಾಗಿದೆ ಎಂಬುದು ಲೆಕ್ಕಾಚಾರ. ಆದೇ ಸಂದರ್ಭದಲ್ಲಿ ಇದಕ್ಕೆ ಬೇಕಾದ ಮೂಲಸೌಕರ್ಯ ನೀಡಲು ಕಡೆಗಣಿಸಲಾಗಿದೆ. ಇಷ್ಟೊಂದು ತರಾತುರಿ ಯಲ್ಲಿ ಕೇವಲ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಿದ್ದು ಯಾಕೆ. ತೆರಿಗೆ ಹಣವನ್ನು ವೃಥಾ ಪೋಲು ಮಾಡುವ ಬದಲು ಇತರ ಯೋಜನೆಗೆ ಬಳಕೆ ಮಾಡಬಹುದಿತ್ತು. ಇಲ್ಲವೇ ಸುಸಜ್ಜಿತ ಶೌಚಾಲಯ ನಿರ್ಮಿಸಿ ಬಿಟ್ಟುಕೊಡಬೇಕಿತ್ತು ಎಂಬುದು ಸ್ಥಳೀಯರ ಅಭಿಪ್ರಾಯ.

ಸಾರ್ವಜನಿಕರ ಪರದಾಟ
ಪಶು ವೈದ್ಯಕೀಯ ಕಟ್ಟಡದ ಬಳಿ ಇರುವ ಶೌಚಾಲಯ ಸುರತ್ಕಲ್‌ ಬಸ್‌ ನಿಲ್ದಾಣದ ಸಮೀಪವಿರುವುದರಿಂದ ಹಣ ಪಾವತಿಸಿ ಬಳಸುವ ಬಗ್ಗೆ ಪಾಲಿಕೆ ಕ್ರಮ ಕೈಗೊಳ್ಳಬಹುದಿತ್ತು.

ಈಗಿನ ಬಸ್‌ ನಿಲ್ದಾಣದ ಬಳಿ ಯಾವುದೇ ಸೌಲಭ್ಯವಿಲ್ಲ. ಮಕ್ಕಳು, ಹಿರಿಯರು, ಮಹಿಳೆಯರು ಸಹಿತ ನೂರಾರು ಮಂದಿ ನಿತ್ಯ ಉಡುಪಿ, ಮಂಗಳೂರು ಬಸ್‌ಗಾಗಿ ಇಲ್ಲೇ ಕಾಯ ಬೇಕಿದೆ. ಇಲ್ಲಿನ ಶೌಚಾಲಯ ಬಾಗಿಲು ತೆಗೆದೇ ಇಲ್ಲ. ಬಂದವರು ಶೌಚಾಲಯ ವಿಲ್ಲದೆ ಪರದಾಡುವಂತಾಗಿದೆ.

ಅಧಿಕಾರಿಗಳಲ್ಲಿ ಚರ್ಚಿಸಿ ಕ್ರಮ
ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಿಸಿದ ಸುಲಭ ಶೌಚಾಲಯಗಳನ್ನು ಸಾರ್ವಜನಿಕರ ಉಪಯೋಗಕ್ಕೆ ಬಿಟ್ಟು ಕೊಡುವ ಬಗ್ಗೆ ಆಧಿಕಾರಿಗಳಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
– ಪ್ರೇಮಾನಂದ ಶೆಟ್ಟಿ, ಮೇಯರ್‌ ಮನಪಾ,

ಮೂಲಸೌಕರ್ಯ ಒದಗಿಸಿ ಬಳಕೆಗೆ
ಬಜೆಟ್‌ ಪೂರ್ವಭಾವಿ ಸಭೆ ಸಂದರ್ಭ ಶೌಚಾಲಯಕ್ಕೆ ಬೀಗ ಹಾಕಿರುವ ಬಗ್ಗೆ ಆಯುಕ್ತರ ಗಮನಕ್ಕೆ ಬಂದಿದೆ. ಮೂಲಸೌಕರ್ಯ ಒದಗಿಸಿ ಸ್ಥಳೀಯವಾಗಿ ಯಾರಾದರೂ ನಿರ್ವಹಣೆಗೆ ಸಿಕ್ಕಿದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ನೀಡುವ ಬಗ್ಗೆ ಚಿಂತಿಸಲಾಗುವುದು.
– ಸುಶಾಂತ್‌, ಹಿ.ಆ. ನಿರೀಕ್ಷಕರು, ಪಾಲಿಕೆ ಉಪ ಕಚೇರಿ, ಸುರತ್ಕಲ್‌

- ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.