ಬಾಲ್ಯದಲ್ಲಿಸಿಕ್ಕಿದ ಶಿಸ್ತಿನ ಪಾಠಸೈನಿಕನನ್ನಾಗಿಸಿತು!


Team Udayavani, Mar 4, 2018, 5:38 PM IST

maq-1.jpg

ಮಾ. 4: ಖಾದರ್‌ಗೆ ಸಮ್ಮಾನ 
ಮುಡಿಪು: ಕುರ್ನಾಡು ಜಿ.ಪಂ. ಕ್ಷೇತ್ರಕ್ಕೆ ಸುಮಾರು ನೂರು ಕೋಟಿಗೂ ಮಿಕ್ಕಿ ಅನುದಾನ ಮಂಜೂರು ಮಾಡಿರುವ ಸಚಿವ ಯು.ಟಿ. ಖಾದರ್‌ ಅವರು ತನ್ನ ಶಾಸಕತ್ವದ ಮೂರು ಅವಧಿಯಲ್ಲಿ ಹಾಗೂ ಸಚಿವರಾಗಿ ಕ್ರಾಂತಿಕಾರಿ ಅಭಿವೃದ್ಧಿ ಕಾರ್ಯ ನಡೆಸಿದ್ದು ಆ ನಿಟ್ಟಿನಲ್ಲಿ ಕುರ್ನಾಡು ಜಿ.ಪಂ. ಕ್ಷೇತ್ರದ ಸರ್ವ ಜನಾಂಗದ ನಾಗರಿಕ ಬಂಧುಗಳಿಂದ ಮಾ. 4ರಂದು ಸಂಜೆ 4 ಗಂಟೆಗೆ ಸಚಿವ ಖಾದರ್‌ ಅವರಿಗೆ ಸಾರ್ವಜನಿಕ ಅಭಿನಂದನೆ, ಸಮ್ಮಾನ ಸಮಾರಂಭ ನಡೆಯಲಿದೆ ಎಂದು ಜಿ.ಪಂ. ಸದಸ್ಯೆ ಮಮತಾ ಡಿ.ಎಸ್‌. ಗಟ್ಟಿ ಹೇಳಿದರು.

ಮುಡಿಪುವಿನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾದರ್‌ ಅವರ ಕೊಡುಗೆ ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಅವರು ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಕ್ಕೂ ಬಹಳಷ್ಟು ಅನುದಾನ ಮಂಜೂರು ಮಾಡಿಸಿದ್ದಾರೆ. ಇಂದಿರಾ ಗಾಂಧಿ ಕ್ಯಾಂಟಿನ್‌, ಹರೀಶ್‌ ಸಾಂತ್ವನ ಯೋಜನೆ, 94ಸಿ ಹಾಗೂ 94ಸಿಸಿಯಡಿಯಲ್ಲಿ ಹಕ್ಕುಪತ್ರ ಕೊಡಿಸುವ ಮೂಲಕ
ಮಂಗಳೂರು ಕ್ಷೇತ್ರಕ್ಕೆ ಬಹುಪಾಲು ಅನುದಾನ ಒದಗಿಸಿ ಕೊಟ್ಟಿದ್ದಾರೆ. ಕುರ್ನಾಡು ಕಾಲೇಜಿಗೆ ಪದವಿ ಕಾಲೇಜು ಕೊಟ್ಟಿದ್ದಾರೆ. ಒಟ್ಟಿನಲ್ಲಿ ಚುನಾವಣಾ ಪೂರ್ವ ಅವರು ಜನತೆಗೆ ಕೊಟ್ಟ ಭರವಸೆಗಳಲ್ಲಿ ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ 95ಶೇ. ಅಭಿವೃದ್ಧಿ ಕಾಮಗಾರಿ ನಡೆಸಿದ್ದಾರೆ ಎಂದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಹತ್ತು ವರ್ಷಗಳ ಬೇಡಿಕೆ ಇದ್ದ ಪಡಿತರ ಚೀಟಿ ವಿತರಣೆ ಸಮಸ್ಯೆ, ಸರಕಾರಿ ಗೋಮಾಳ ಜಾಗದಲ್ಲಿ ಮನೆ ಕಟ್ಟಿ ಕುಳಿತವರಿಗೆ ಹಕ್ಕುಪತ್ರ, ನೀರಾವರಿ ಇಲಾಖೆಯಿಂದ ಕಿಂಡಿ ಅಣೆಕಟ್ಟು ನಿರ್ಮಾಣ, ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಗ್ರಾಮೀಣ ಭಾಗದಲ್ಲಿ ಬಹಳಷ್ಟು ರಸ್ತೆ ನಿರ್ಮಾಣವಾಗಿದ್ದು, ಈ ನಿಟ್ಟಿನಲ್ಲಿ ಕ್ಷೇತ್ರದ ಜನತೆ ಬಹಳ ಪ್ರೀತಿಯಿಂದ ಸಚಿವರನ್ನು ಸಮ್ಮಾನಿಸಲು ಮುಂದಾಗಿದ್ದು, ಸಾರ್ವಜನಿಕರು ಯಶಸ್ವಿಗೊಳಿಸಬೇಕು ಎಂದರು.

ತೋಡುಗೋಳಿ ಮಹಾಬಲೇಶ್ವರ ಭಟ್‌, ಬೇಕಲ ಉಸ್ತಾದ್‌ ಸೇರಿದಂತೆ ಧಾರ್ಮಿಕ ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮುಡಿಪು ಬ್ಲಾಕ್‌ ಕಾಂಗ್ರೆಸ್‌ ಪ್ರ.ಕಾ. ಅಬ್ದುಲ್‌ ಜಲೀಲ್‌ ಮೋಂಟುಗೋಳಿ, ವಕ್ಫ್ ಜಿಲ್ಲಾ ಸಮಿತಿ ಸದಸ್ಯ ಉಮರ್‌ ಪಜೀರು, ಡಾ| ಸುರೇಖ, ಉದ್ಯಮಿ ಇಮಿಯಾಝ್ ಹಾಗೂ ರಹ್‌ಮಾನ್‌ ಉಪಸ್ಥಿತರಿದ್ದರು.

ಅವಿನಾಶ್‌ ವಿ. ಅವರಿಗೆ ಪಿಎಚ್‌.ಡಿ.
ಮಹಾನಗರ: ಮಂಗಳೂರು ವಿಶ್ವ ವಿದ್ಯಾಲಯ ಇತಿಹಾಸ ವಿಭಾಗ ಸಂಶೋಧನ ವಿದ್ಯಾರ್ಥಿ ಅವಿನಾಶ್‌ ವಿ. ಅವರು ಮಂಡಿಸಿದ “ವಸಾ ಹತುಶಾಹಿ ಕೊಡಗಿನಲ್ಲಿ ಕಮಿಷನರ್‌ ಗಳ ಆಡಳಿತ ಮತ್ತು ಸಾಮಾಜಿಕ, ಆರ್ಥಿಕ ಪರಿವರ್ತನೆಗಳು (ಕ್ರಿ.ಶ. 1834 ರಿಂದ 1947)’ ಎಂಬ ವಿಷಯದ ಕುರಿತ ಸಂಶೋಧನ ಮಹಾಪ್ರಬಂಧಕ್ಕೆ ಮಂಗಳೂರು ವಿವಿ ಪಿಎಚ್‌.ಡಿ. ಪ್ರದಾನ ಮಾಡಿದೆ. ಅವಿನಾಶ್‌ ಅವರು ಇತಿಹಾಸ ವಿಭಾಗದ ಪ್ರಾಧ್ಯಾಪಕ ಲೋಕೇಶ್‌ ಕೆ. ಎಂ. ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆ ನಡೆಸಿದ್ದಾರೆ.

ಮಂಗಳೂರು, ಮಾ.3: ಬಾಲ್ಯದಲ್ಲಿ ಸಿಕ್ಕಿದ ಶಿಸ್ತಿನ ಪಾಠ ಮನುಷ್ಯನನ್ನು ರೂಪಿಸುವುದು ಮಾತ್ರವಲ್ಲ ದೇಶಸೇವೆಗೆ ಹೆಗಲು ನೀಡುವ
ಸೈನಿಕನನ್ನಾಗಿಯೂ ಮಾಡಬಹುದು. ಇದಕ್ಕೊಂದು ಉದಾಹರಣೆ ಬೆಳ್ತಂಗಡಿಯ ವೇಣೂರು ಪಾಂಚಜನ್ಯ ದೋಟ ಮನೆಯ ರಾಧಾಕೃಷ್ಣ ಡಿ. ಶಾಲಾ-ಕಾಲೇಜು ದಿನಗಳಲ್ಲಿ ಆರೆಸ್ಸೆಸ್‌ ಶಾಖೆಗೆ ತೆರಳುತ್ತಿದ್ದ ಅವರಿಗೆ ಅಲ್ಲಿ ಸಿಕ್ಕಿದ ದೇಶಾಭಿಮಾನದ
ಪಾಠ, ಭಾರತೀಯತೆಯ ಶ್ರೇಷ್ಠತೆ ಕುರಿತ ಮಾತುಗಳು, ಅವರನ್ನು ಸೈನಿಕನನ್ನಾಗಿಸುವಲ್ಲಿ ಪ್ರೇರೇಪಿಸಿತು.

ಸೇನೆಗೆ ಸೇರುವ ಛಲ ಲೋಕಯ್ಯ ಪೂಜಾರಿ, ತಾಯಿ ಸುನಂದಾ ಅವರ ಪುತ್ರರಾದ ರಾಧಾಕೃಷ್ಣ ಅವರು ಉಂಬೆಟ್ಟು ಸರಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ವೇಣೂರು ಸ.ಪ.ಪೂ. ಕಾಲೇಜಿನಲ್ಲಿ ಪ್ರೌಢ ಮತ್ತು ಪಿಯುಸಿ ಶಿಕ್ಷಣವನ್ನು ಪೂರೈಸಿದರು. ಬಳಿಕ ಮೂಡಬಿದಿರೆ ಮಹಾವೀರ ಕಾಲೇಜಿನಲ್ಲಿ 9 ತಿಂಗಳು ಐಟಿಐ ತರಬೇತಿಯಲ್ಲಿರುವಾಗಲೇ ಸೇನಾ ನೇಮಕಾತಿಗೆ ಅರ್ಜಿ ಸಲ್ಲಿಸಿ
ವಿಫ‌ಲರಾಗಿದ್ದರು. ಆದರೂ ಛಲಬಿಡದೆ ಮತ್ತೂಮ್ಮೆ ಪ್ರಯತ್ನಿಸಿದ್ದರು.

ಪರಿಣಾಮ 2001, ಎಪ್ರಿಲ್‌ನಲ್ಲಿ ಸೇನೆಗೆ ಆಯ್ಕೆಯಾದರು. ಹಿರಿಯರ ಮಾರ್ಗದರ್ಶನ ಆರೆಸ್ಸೆಸ್‌ನ ಸಂಪರ್ಕ ದಿಂದ ಶಿಸ್ತುಗಳನ್ನು ಕಲಿತಿದ್ದ ರಾಧಾಕೃಷ್ಣ ಅವರಿಗೆ ರಾಷ್ಟ್ರರಕ್ಷಣೆಯ ಸೈನಿಕನಾಗಲು ಮಾರ್ಗದರ್ಶನವೂ ಸಿಕ್ಕಿತ್ತು. ಸಂಘದ ಹಿರಿಯರಾದ ಮಾಧವ್‌
ಕಾರಂತ್‌ ಮತ್ತು ಸುರೇಶ್‌ ಘೋರೆ ಅವರಿಂದಾಗಿ ನಾನಿಂದು ಸೈನಿಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎನ್ನುತ್ತಾರೆ ರಾಧಾಕೃಷ್ಣ

ಮನೆಯವರ ಪ್ರೋತ್ಸಾಹ ಸೇನೆಗೆ ಸೇರ್ಪಡೆಯಾಗುವ ಸಂದರ್ಭ  ಮನೆಯವರಿಂದ ಸಿಕ್ಕ ಪ್ರೋತ್ಸಾಹವನ್ನೂ ರಾಧಾಕೃಷ್ಣ ಅವರು ಮರೆಯುವುದಿಲ್ಲ. ಸಹೋದರರಾದ ಲಕ್ಷ್ಮಣ, ಕರುಣಾಕರ, ಪ್ರಭಾಕರ, ಶೇಖರ ಪೂಜಾರಿ, ತಂಗಿ ಶೋಭಾ ಬೆಂಬಲಕ್ಕೆ ನಿಂತಿದ್ದಾರೆ. ಕಾರ್ಕಳ ಭುವನೇಂದ್ರ ಪ್ರೌಢಶಾಲೆ ಯಲ್ಲಿ ಶಿಕ್ಷಕಿಯಾಗಿರುವ ಪತ್ನಿ ಶುಭಲಕ್ಷ್ಮೀ ಮತ್ತು ಮಗಳು ಶ್ರೀಯಾ ದೇಶಸೇವೆಯ ಕೆಲಸಕ್ಕೆ ಬೆಂಗಾವಲಾಗಿದ್ದಾರೆ. ಸೇನಾ ಸಮವಸ್ತ್ರದಲ್ಲಿ ರಾಧಾಕೃಷ್ಣ. ಪಠಾಣ್‌ಕೋಟ್‌ನಲ್ಲಿ ನಿಗಾ ಪಠಾಣ್‌ಕೋಟ್‌ ಉಗ್ರ ದಾಳಿ ಸಂದರ್ಭ ಆ ಪ್ರದೇಶದ ಪಕ್ಕದಲ್ಲೇ ರಾಧಾಕೃಷ್ಣ ಅವರೂ ಕರ್ತವ್ಯ ನಿರತರಾಗಿದ್ದರು. ಈ ವೇಳೆ ಸುತ್ತಮುತ್ತಲಿನ ಭಾಗಗಳಲ್ಲಿ ಹೈ ಅಲರ್ಟ್‌ ಘೋಷಣೆಯಾದ ಬಳಿಕದ ದಿನಗಳು ಮರೆಯಲಾಗದ್ದು. ತೀವ್ರತರವಾದ ನಿಗಾ ವಹಿಸಿ ಎಚ್ಚರಿಕೆಯಿಂದ ಕಳೆದ ದಿನಗಳವು ಎನ್ನುತ್ತಾರೆ ರಾಧಾಕೃಷ್ಣ. ವಾಜಪೇಯಿ ಸರಕಾರ ಇದ್ದ ಸಂದರ್ಭ ಮುಜಾಫರಾಬಾದ್‌ನಲ್ಲಿ ಅಮನ್‌ಸೇತು ಲೋಕಾರ್ಪಣೆಯಾದ ಸಂದರ್ಭದಲ್ಲೂ
ಅವರು ಅಲ್ಲಿ ಕೆಲಸ ಮಾಡಿದ್ದರು. 

ಸುವರ್ಣಾವಕಾಶ ದಕ್ಷಿಣ ಕನ್ನಡ ಜಿಲ್ಲೆಯಿಂದ ಸೇನೆಗೆ ಸೇರುವವರ ಸಂಖ್ಯೆ ತೀರಾ ಕಡಿಮೆ ಇದೆ. ಆದರೆ ಸೇನೆಯಲ್ಲಿ ಸೇವೆ ಸಲ್ಲಿಸುವುದು ಸುವರ್ಣಾವಕಾಶ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇನಾ ಕರ್ತವ್ಯದ ಒಲವು ಹೊಂದಬೇಕು. 
-ರಾಧಾಕೃಷ್ಣ

ದೋಟ ಪತಿ ಬಗ್ಗೆ ಖುಷಿ ಪತಿ ದೇಶ ಸೇವೆ ಮಾಡುತ್ತಿರುವುದರ ಬಗ್ಗೆ ನನಗೆ ತುಂಬ ಹೆಮ್ಮೆ ಇದೆ. ಅವರು ಸೇವೆಯಲ್ಲಿ ಮುಂದುವರಿಯಬೇಕೆಂಬ ಇಚ್ಛೆ ನನಗಿತ್ತು. ಆದರೆ ಕಾರಣಾಂತರಗಳಿಂದ ಮುಂದಿನ ಮೇಯಲ್ಲಿ ನಿವೃತ್ತಿಯಾಗಲಿದ್ದಾರೆ. ಆದರೂ 17 ವರ್ಷಗಳ ಸೇವೆಯ ಬಗ್ಗೆ ಖುಷಿ ಇದೆ. 
-ಶುಭಲಕ್ಷ್ಮೀ, ಪತ್ನಿ

ಧನ್ಯಾ ಬಾಳೆಕಜ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.