“ಮಕ್ಕಳನ್ನು ಪ್ರಜ್ಞಾವಂತ ಪ್ರಜೆಗಳನ್ನಾಗಿಸಿ’


Team Udayavani, Aug 4, 2019, 5:00 AM IST

x-18

ಮಹಾನಗರ: ಮಕ್ಕಳಲ್ಲಿ ನಾಯಕತ್ವ, ನಾಗರಿಕ ಜ್ಞಾನ, ಕಾನೂನು, ಸ್ವಯಂ ಶಿಸ್ತು, ಧೈರ್ಯ, ನೈತಿಕ ಮೌಲ್ಯಗಳು ಹಾಗೂ ಸಾಮಾಜಿಕ ದುಷ್ಪಾರಿಣಾಮಗಳಿಗೆ ಪ್ರತಿರೋಧ, ಸಾಕಾರಾತ್ಮಕ ಚಿಂತನೆಗಳನ್ನು ಮೂಡಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ ಯೋಜನೆಗೆ ಆ. 3ರಂದು ನಗರದ ಎಕ್ಕೂರು 2ನೇ ಕೇಂದ್ರೀಯ ವಿದ್ಯಾಲಯದಲ್ಲಿ ಚಾಲನೆ ನೀಡಲಾಯಿತು.

ಯೋಜನೆಗೆ ಚಾಲನೆ ನೀಡಿದ ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯಕ್‌, ವಿದ್ಯಾರ್ಥಿ ದೆಸೆ ಯಿಂದಲೇ ಮಕ್ಕಳನ್ನು ಪ್ರಜ್ಞಾವಂತ ಪ್ರಜೆ ಗಳನ್ನಾಗಿ ರೂಪಿಸುವ ಉದ್ದೇಶದಿಂದ ಹಾಗೂ ಭಾರತದ ಮಾಜಿ ರಾಷ್ಟ್ರಪತಿ ದಿ| ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂ ಅವರ ಕನಸಿನಂತೆ ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ ಯೋಜನೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಈ ಬಾರಿ 10 ಶಾಲೆ ಆಯ್ಕೆ
ಪ್ರಸ್ತಾವನೆಗೈದ ಮಂಗಳೂರಿನ ಕೆಎಸ್‌ಆರ್‌ಪಿ 7ನೇ ಬೆಟಾಲಿಯನ್‌ ಕಮಾಂಡೆಂಟ್‌ ಹಾಗೂ ಯೋಜನೆಯ ಮಂಗಳೂರು ನೋಡಲ್‌ ಅಧಿಕಾರಿ ಜನಾರ್ದನ ಆರ್‌., ಈ ಯೋಜನೆ ಕೇರಳದಲ್ಲಿ ಪ್ರಥಮವಾಗಿ ಜಾರಿಗೆ ಬಂದಿದ್ದು, ರಾಜ್ಯದಲ್ಲಿ ಬೆಂಗಳೂರು ಹಾಗೂ ಇತರ ಕೆಲವು ಜಿಲ್ಲೆಗಳಲ್ಲಿ 2015ರಲ್ಲಿ ಆರಂಭವಾಗಿದೆ. ಈಗ ರಾಜ್ಯದ 97 ಶಾಲೆಗಳಲ್ಲಿ ಅನುಷ್ಠಾನದಲ್ಲಿದೆ. ದ.ಕ. ಜಿಲ್ಲೆಯಲ್ಲಿ ಕಳೆದ ವರ್ಷ 3 ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಯೋಜನೆ ಅನುಷ್ಠಾನಿಸಲಾಯಿತು.

ಈ ಸಾಲಿನಲ್ಲಿ ಜಿಲ್ಲೆಯಲ್ಲಿ 10 ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಒಟ್ಟು 300 ಶಾಲೆಗಳಲ್ಲಿ ಈ ಯೋಜನೆ ಈ ವರ್ಷ ಜಾರಿಗೊಳ್ಳುತ್ತಿದೆ ಎಂದು ಹೇಳಿದರು.

ಅನುಷ್ಠಾನ ಎಲ್ಲೆಲ್ಲಿ
ಬೈಕಂಪಾಡಿಯ ಕೇಂದ್ರೀಯ ವಿದ್ಯಾಲಯ, ಕೇಂದ್ರೀಯ ವಿದ್ಯಾಲಯ ನಂ-2 ಮಂಗಳೂರು, ಪುತ್ತೂರು ಕೊಂಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜು, ಸರಕಾರಿ ಪ.ಪೂ. ಕಾಲೇಜು ಸವಣೂರು, ಬಂಟ್ವಾಳ ತಾಲೂಕಿನ ಮಂಚಿ ಕೋಳ್ನಾಡು ಸರಕಾರಿ ಪ್ರೌಢಶಾಲೆ, ಸರಕಾರಿ ಪ.ಪೂ. ಕಾಲೇಜು ಕುರ್ನಾಡು, ಸುಳ್ಯ ತಾಲೂಕಿನ ಸರಕಾರಿ ಪ್ರೌಢ ಶಾಲೆ ಎಲಿಮಲೆ, ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಬೆಳ್ಳಾರೆ, ಸರಕಾರಿ ಪ್ರೌಢಶಾಲೆ ಅಳಿಯೂರು ಮೂಡುಬಿದಿರೆಯಲ್ಲಿ ಸ್ಟೂಡೆಂಟ್‌ ಕೆಡೆಟ್‌ ಯೋಜನೆ ಆರಂಭಗೊಳ್ಳುತ್ತಿದೆ ಎಂದರು.
ದ.ಕ. ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಡಾ| ವಿಕ್ರಂ ಅಮ್ಟೆ ಅವರು ವಿದ್ಯಾರ್ಥಿಗಳಿಗೆ ಕಿಟ್‌ಗಳನ್ನು ವಿತರಿಸಿದರು. ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಎನ್‌.ಎಸ್‌. ಯಾದವ ಸ್ವಾಗತಿಸಿದರು.

ಮಂಗಳೂರಿನ ಕೆಎಸ್‌ಆರ್‌ಪಿ 7ನೇ ಬೆಟಾಲಿಯನ್‌ ಸಹಾಯಕ ಕಮಾಂಡೆಂಟ್‌ಗಳಾದ ಶರತ್‌, ರಾಜು, ಅಧಿಕಾರಿಗಳಾದ ರಾಜು, ಪ್ರಮೋದ್‌ ಕುಮಾರ್‌, ಗಣೇಶ್‌, ದಿನೇಶ್‌ ಮತ್ತಿತರರು ಉಪಸ್ಥಿತರಿದ್ದರು. ಅಧಿಕಾರಿ ರಾಜರಾಮ್‌ ಭಟ್‌ ವಂದಿಸಿದರು.

ಒಟ್ಟು 23 ತರಗತಿ
ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ ಯೋಜನೆಯಲ್ಲಿ ಹೊರಾಂಗಣ ಮತ್ತು ಒಳಾಂಗಣ ವಿಷಯಗಳ ಕುರಿತು ಪ್ರತಿತಿಂಗಳು ಮೂರು ತರಗತಿಗಳಂತೆ ಒಟ್ಟು 23 ತರಗತಿಗಳನ್ನು ನಡೆಸಲಾಗುತ್ತಿದೆ. ಶನಿವಾರ ತರಗತಿ ನಡೆಯುತ್ತದೆ. ಅಪರಾಧ ತಡೆಗಟ್ಟುವಿಕೆ ಮತ್ತು ನಿಯಂತ್ರಣ, ರಸ್ತೆ ಸುರಕ್ಷತೆ ಮತ್ತು ಸಂಚಾರ ಅರಿವು, ವಿಪತ್ತು ನಿರ್ವಹಣೆ, ತಾಳ್ಮೆ, ಸಹಿಷ್ಣುತೆ, ಹಿರಿಯರ ಬಗ್ಗೆ ಗೌರವ, ಭಾರತದ ಸಂವಿಧಾನ, ಬಾಲ ನ್ಯಾಯ ಕಾಯ್ದೆ-2000, ಸಮುದಾಯ ಪೊಲೀಸಿಂಗ್‌ ಮತ್ತು ವಿದ್ಯಾರ್ಥಿಗಳು, ಮಾನವ ಹಕ್ಕುಗಳು ಮತ್ತು ಸಂರಕ್ಷಣೆ, ನೈತಿಕ ಮೌಲ್ಯಗಳು, ಪ್ರಥಮ ಚಿಕಿತ್ಸೆ, ಸಾಮಾಜಿಕ ಪಿಡುಗುಗಳು, ದುಶ್ಚಟಗಳ ವಿರುದ್ದ ಹೋರಾಟ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.