ಮಳವೂರು ಸೇತುವೆ ಮೇ ತಿಂಗಳಲ್ಲಿ ಪೂರ್ಣ

ಸುಮಾರು 50 ಕೋ.ರೂ. ಅನುದಾನದ ಕಾಮಗಾರಿ

Team Udayavani, Apr 26, 2022, 10:25 AM IST

bajpe

ಬಜಪೆ: ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಬಹು ಬೇಡಿಕೆ ಮಳವೂರು ಹೊಸ ಸೇತುವೆಯ ಕಾಮಗಾರಿಯು ಶೇ. 90ರಷ್ಟು ಪೂರ್ಣಗೊಂಡಿದ್ದು, ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ.

ಲೋಕೋಪಯೋಗಿ ಇಲಾಖೆಯ ಸುಮಾರು 50 ಕೋ.ರೂ. ಅನುದಾನದಲ್ಲಿ ಮಂಗಳೂರು ತಾಲೂಕಿನ ಮಂಗಳೂರು ಅತ್ರಾಡಿ ರಾಜ್ಯ ಹೆದ್ದಾರಿ 67 ಚತುಷ್ಪಥ ರಸ್ತೆ ನಿರ್ಮಾಣ ಹಾಗೂ ನೂತನ ಸೇತುವೆಯ ನಿರ್ಮಾಣ ಕಾರ್ಯಕ್ಕೆ 2021ರಲ್ಲಿ ಫೆ. 7ರಂದು ಶಂಕುಸ್ಥಾಪನೆ ನೆರೆವೇರಿತ್ತು. ಮಂಗಳೂರು ನಗರ ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಈ ಹೊಸ ಸೇತುವೆ ಸುಮಾರು 10 ಮೀಟರ್‌ ರಸ್ತೆ ಮತ್ತು ಒಂದು ಬದಿ (ಪಶ್ವಿ‌ಮ ದಿಕ್ಕಿನಲ್ಲಿ) 1.5ಮೀ. ಪುಟ್‌ಪಾತ್‌ ಇದ್ದು ಒಟ್ಟು 12 ಮೀ. ಅಗಲ, 200 ಮೀ. ಉದ್ದವಾಗಿದೆ. 8 ಆಧಾರ ಸ್ತಂಭಗಳ ನಿರ್ಮಾಣ ಕಾಮಗಾರಿ ಮುಗಿದು ಸ್ಲ್ಯಾಬ್‌ನ ಮುಕ್ತಾಯ ಹಂತದ ಕಾಮಗಾರಿಗಳು ನಡೆಯುತ್ತಿವೆ. ಸೇತುವೆಗೆ ಸುಮಾರು 13 ಕೋ.ರೂ. ಅನುದಾನ ಮೀಸರಿಸಲಾಗಿದೆ.

ಇದಕ್ಕೆ ಸಂಪರ್ಕಿಸುವ ಚತುಷ್ಪಥ ರಸ್ತೆ ಸುಮಾರು 14 ಮೀ. ಅಗಲವಾಗಿದ್ದು ಇದರಲ್ಲಿ ಇಕ್ಕೆಲದಲ್ಲಿ 1.5ಮೀ. ಪುಟ್‌ಪಾತ್‌, ಮಧ್ಯೆ 1.5 ಮೀ. ಡಿವೈಡರ್‌ಗಳ ಕಾಮಗಾರಿಗಳು ಸೇರಿಕೊಂಡಿವೆ. ರಸ್ತೆ, ತಡೆಗೋಡೆ, ಕಾಲುವೆ, ರೈಲ್ವೇ ಅಂಡರ್‌ ಪಾಸ್‌, ಕಾಂಕ್ರೀಟ್‌ ಮೋರಿ, ವಿಮಾನ ನಿಲ್ದಾಣದ ವಿದ್ಯುತ್‌ ತಂತಿ ಹಾಗೂ ಕಂಬ ವರ್ಗಾವಣೆಗಳ ಕಾಮಗಾರಿ ನಡೆಯಬೇಕಿದೆ.

100 ಮಂದಿ ಕಾಂಕ್ರೀಟ್‌, ಸೆಂಟ್ರಿಂಗ್‌, ಬಾರ್‌ಬ್ಯಾಂಡಿಂಗ್‌ ಕಾರ್ಮಿಕರು, ಜೆಸಿಬಿ, ಇಟಾಚಿ, ಟಿಪ್ಪರ್‌ನ ಒಟ್ಟು 25 ಚಾಲಕರು ಬೆಳಗ್ಗಿನಿಂದ ರಾತ್ರಿ 11 ತನಕ ಸೇತುವೆ ಕಾಮಗಾರಿ ಗಳಲ್ಲಿ ನಿರತರಾಗಿದ್ದಾರೆ. ಮಳೆಗಾಲ ಆರಂಭದ ಮೊದಲೇ ಕಾಮಗಾರಿ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ. ರಸ್ತೆಯ ತಡೆಗೋಡೆಗಳು, ಕೆಲವೆಡೆ ಮಣ್ಣು ತುಂಬಿಸುವ ಕಾರ್ಯ ಮಳೆಯ ಬರುವ ಮುಂಚೆ ಮಾಡಲಾಗುವುದು.

ಮಂಗಳೂರು ಬದಿಯ ಸೇತುವೆಯ ಸಂಪರ್ಕ ರಸ್ತೆಯ ಮಣ್ಣು ತುಂಬಿಸುವ ಕಾರ್ಯ ಈಗಾಗಲೇ ನಡೆದಿದೆ. ಮರವೂರು ಬದಿಯ ಸೇತುವೆಯ ಸಂಪರ್ಕ ರಸ್ತೆಯ ಮಣ್ಣು ತುಂಬಿಸುವ ಕಾರ್ಯ ಪ್ರಗತಿಯಲ್ಲಿದೆ. ಕೆಂಜಾರಿನಲ್ಲಿ ರಸ್ತೆ ವಿಸ್ತರಣೆ ವೇಳೆ ಬಂಡೆಗಳು ಸಿಕ್ಕಿದ ಕಾರಣ ಕಾಮಗಾರಿ ಸ್ವಲ್ಪ ನಿಧಾನ ಗತಿಯಲ್ಲಿ ಸಾಗುತ್ತಿದೆ. ಹೊಸ ಸೇತುವೆ ಕಾಮಗಾರಿ ಪ್ರಗತಿಯಲ್ಲಿ ಮರವೂರು ಹೊಸ ಸೇತುವೆಯ ಕಾಮಗಾರಿಗಳು ವೇಗವಾಗಿ ಸಾಗುತ್ತಿದೆ.

ಹೊಸ ಸೇತುವೆ ಕಾಮಗಾರಿ ಪ್ರಗತಿಯಲ್ಲಿ

ಮರವೂರು ಹೊಸ ಸೇತುವೆಯ ಕಾಮಗಾರಿಗಳು ವೇಗವಾಗಿ ಸಾಗುತ್ತಿದೆ. ಮೇ ತಿಂಗಳಲ್ಲಿ ಸೇತುವೆ ಕಾಮಗಾರಿಗಳು ಪೂರ್ಣಗೊಳ್ಳಲಿದೆ. ಅದರೆ ಅದಕ್ಕೆ ಸಂಪರ್ಕಿಸುವ ಚತುಷ್ಪಥ ರಸ್ತೆ ಮಾತ್ರ ಈ ಸಾಲಿನಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಕೆಲವೊಂದು ತಾಂತ್ರಿಕ ಕಾರಣ, ರೈಲ್ವೇ ಅಂಡರ್‌ ಪಾಸ್‌, ವಿದ್ಯುತ್‌ ತಂತಿ ಹಾಗೂ ಕಂಬಗಳ ವರ್ಗಾವಣೆ, ತಡೆಗೋಡೆಗಳ ನಿರ್ಮಾಣದಿಂದ ಮುಂದಿನ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ಮಹಾನಗರ ಪಾಲಿಕೆಯ ಸ್ವಾಗತ ದ್ವಾರದಿಂದ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ತನಕ ರಸ್ತೆ ಚತುಷ್ಪಥ ಕಾಮಗಾರಿಗಳು ನಡೆಯಲಿದೆ. ಯಶವಂತ್‌, ಎಕ್ಸಿಕ್ಯೂಟಿವ್‌ ಎಂಜಿನಿಯರ್‌, ಲೋಕೋಯೋಗಿ ಇಲಾಖೆ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.