ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಸೆರೆ; ಸೊತ್ತು ವಶ
Team Udayavani, Oct 31, 2017, 10:12 AM IST
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಕಿನ್ನಿಕಂಬಳದ ಮಹಮ್ಮದ್ ಶಾಕೀರ್ (23) ನನ್ನು ಮಂಗಳೂರು ಕೇಂದ್ರ ಉಪವಿಭಾಗದ ರೌಡಿ ನಿಗ್ರಹದಳದ ಮತ್ತು ಉರ್ವ ಠಾಣೆಯ ಪೊಲೀಸರು ಸೋಮವಾರ ನಗರದ ಕೋಡಿಕಲ್ 10ಬಿ ಕ್ರಾಸ್ನಲ್ಲಿ ಬಂಧಿಸಿ 1.80 ಕೆ.ಜಿ ಗಾಂಜಾ, 2 ಮೊಬೈಲ್ ಫೋನ್, ಬಜಾಜ್ ಪಲ್ಸರ್ ಬೈಕ್ ಮತ್ತು ನಗದು ಸೇರಿದಂತೆ ಒಟ್ಟು 1,19,450 ರೂ. ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
ಆರೋಪಿ ಮಹಮದ್ ಶಾಕಿರ್ ಗಾಂಜಾ ಮಾರಾಟ ಮಾಡಲು ಸೋಮವಾರ ಮಂಗಳೂರಿಗೆ ಬಂದಿದ್ದಾನೆ ಎಂಬ ಖಚಿತ ಮಾಹಿತಿ ಅನ್ವಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಈತ ನಗರದ ವಿವಿಧೆಡೆ ವಿದ್ಯಾರ್ಥಿಗಳಿಗೆ ಹಾಗೂ ಇತರರಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಆರೋಪಿ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಡಿಸಿಪಿಗಳಾದ ಹನುಮಂತ ರಾಯ ಮತ್ತು ಉಮಾ ಪ್ರಶಾಂತ್ ಹಾಗೂ ಎಸಿಪಿ ಉದಯ ನಾಯಕ್ ಅವರ ಮಾರ್ಗದರ್ಶನದಲ್ಲಿ ರೌಡಿ ನಿಗ್ರಹದಳದ ಪೊಲೀಸ್ ಇನ್ಸ್ಪೆಕ್ಟರ್ ರವೀಶ್ ಎಸ್.ನಾಯಕ್, ಪಿಎಸ್ಐ ಕೃಷ್ಣ ಬಿ., ಎಎಸ್ಐಗಳಾದ ಬಾಲಕೃಷ್ಣ, ದಾಮೋದರ್, ಹೆಡ್ಕಾನ್ಸ್ಟೆಬಲ್ಗಳಾದ ಸಂತೋಷ್ ಕುಮಾರ್ ಸಸಿಹಿತ್ಲು, ಸಿದ್ದಾರ್ಥ್, ದಯಾನಂದ, ಲೋಕೇಶ್, ಕಾನ್ಸ್ಟೆಬಲ್ಗಳಾದ ಪ್ರಮೋದ್, ವಿನೋದ್, ಯೋಗೀಶ್, ಕಾಂತರಾಜು, ಹೇಮಂತ್ ಕುಮಾರ್, ಶಂಕರಪ್ಪ ಲಮಾಣಿ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!