ಹೊಸ ತಾಲೂಕು ರಚನೆ ಮಂಗಳೂರು ಎಪಿಎಂಸಿಗೆ ಹೊಡೆತ?

ಚುನಾವಣೆ ವಿಳಂಬ: ಆಕಾಂಕ್ಷಿಗಳಲ್ಲಿ ನಿರಾಸೆ

Team Udayavani, Jul 24, 2022, 11:39 AM IST

5

ಸುರತ್ಕಲ್‌: ಮೂಲ್ಕಿ, ಮೂಡುಬಿದಿರೆ ಹೊಸ ತಾಲೂಕು ರಚನೆಯಾಗಿದ್ದು, ಇದೀಗ ಮಂಗಳೂರು ಕೃಷಿ ಉತ್ಪನ್ನ ಮಾರಾಟ ಕೇಂದ್ರ ದುರ್ಬಲವಾಗುವ ಸಾಧ್ಯತೆ ತಲೆ ದೋರಿದೆ.

ಇದುವರೆಗೆ ಮೂಲ್ಕಿ ಮೂಡುಬಿದಿರೆ ಮಂಗಳೂರಿಗೆ ಸೇರಿದ್ದರಿಂದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡುವ ಮುನ್ನ ಉತ್ತಮ ಆದಾಯವನ್ನೂ ಹೊಂದಿತ್ತು. ಆದರೆ ಇದೀಗ ಬಹುತೇಕ ಕೃಷಿ ಪ್ರದೇಶ ಮೂಲ್ಕಿ, ಮೂಡುಬಿದಿ ರೆ ವ್ಯಾಪ್ತಿಯಲ್ಲಿದೆ. ಮಂಗಳೂರು ನಗರವಾಗಿ ಬೆಳೆದಿ ರುವುದರಿಂದ ಸ್ವಲ್ಪ ಮಟ್ಟಿಗೆ ನೀರುಮಾರ್ಗ, ಗುರು ಹೋಬಳಿ, ಬಜಪೆ ಪ್ರದೇಶದಲ್ಲಿ ಕೆಲವು ಭಾಗ ಮಾತ್ರ ಮಂಗ ಳೂರು ತಾಲೂ ಕಿ ನಲ್ಲಿ ಉಳಿಯುತ್ತದೆ. ಹೊಸ ತಾಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ನೂತನ ಎಪಿಎಂಸಿ ರಚನೆ ಪ್ರಕ್ರಿಯೆಯೂ ನಡೆದಿಲ್ಲ.

ಚುನಾವಣೆ ವಿಳಂಬ

ಕೃಷಿ ಉತ್ಪನ್ನ ಸಹಕಾರ ಸಮಿತಿಗಳ ಚುನಾವಣೆಗೆ ಅಧಿಸೂಚನೆ ಶೀಘ್ರವೇ ಪ್ರಕಟಿಸುವ ನಿರೀಕ್ಷೆಯಿತ್ತಾದರೂ ಇದೀಗ ಹುಸಿಯಾಗಿದ್ದು, ಆಕಾಂಕ್ಷಿಗಳಲ್ಲಿ ನಿರಾಸೆ ಮೂಡಿಸಿದೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಪೈಪೋಟಿಯಿದ್ದು, ಇದಕ್ಕೆ ಪೂರಕವಾಗಿ ಎಪಿಎಂಸಿಯಲ್ಲಿ ತನ್ನ ಸ್ಥಾನಗಳನ್ನು ಬಲಪಡಿಸಿಕೊಳ್ಳಲು ಕಾಂಗ್ರೆಸ್‌, ಬಿಜೆಪಿ, ಸ್ಥಳೀಯ ಮಟ್ಟದಲ್ಲಿ ಭರ್ಜರಿ ತಯಾರಿ ನಡೆಸಿತ್ತು.

ಜಿಲ್ಲಾಧಿಕಾರಿಗಳು ಮೀಸಲು ನಿಗದಿ ಪಡಿಸಿದ ಬಳಿಕ ಸರಕಾರಕ್ಕೆ ಕಳುಹಿಸಿದ ಬಳಿಕವೇ ಅಧಿಸೂಚನೆ ಹೊರಬಿದ್ದು ಚುನಾವಣೆ ಘೋಷಣೆಯಾಗುತ್ತದೆ. ಬಹುತೇಕ ಜಿಲ್ಲೆಗಳ ಮತದಾರರ ಪಟ್ಟಿ ಸಹಿತ ಎಲ್ಲ ಚುನಾವಣಾ ಪೂರ್ವ ತಯಾರಿ ಮುಗಿದಿದ್ದರೂ ಚುನಾವಣೆ ನಡೆಯದ ಬಗ್ಗೆ ಮತ್ತೆ ಚುನಾವಣೆ ಎದುರಿಸಲು ಸಜ್ಜಾಗಿದ್ದ ನಿಕಟಪೂರ್ವ ಎಪಿಎಂಸಿ ಸದಸ್ಯರಲ್ಲಿ, ಆಕಾಂಕ್ಷಿಗಳ ಬೇಸರಕ್ಕೆ ಕಾರಣವಾಗಿದೆ.

ಆಡಳಿತ ಯಾವಾಗ ಕೊನೆಗೊಂಡಿತ್ತು?

ಎಪಿಎಂಸಿಯ ಅಧಿಕಾರಾವಧಿ ಫೆಬ್ರವರಿ ತಿಂಗಳಲ್ಲಿ ಕೊನೆಗೊಂಡಿತ್ತು. ಆದರೆ ಸರಕಾರವು ಅವರ ಚಟುವಟಿಕೆಗಳ ಮೇಲ್ವಿಚಾರಣೆಗೆ ಆಡಳಿತಾಧಿಕಾರಿಗಳನ್ನು ನೇಮಿಸಿತ್ತು. ಇದೀಗ 6 ತಿಂಗಳುಗಳಿಂದ ಚುನಾಯಿತ ಪ್ರತಿನಿಧಿಗಳಿಲ್ಲ.

ಒಟ್ಟು 18 ಮಂದಿ ಸದಸ್ಯರು ಮಂಗಳೂರು ಎಪಿಎಂಸಿಯ ಆಡಳಿತ ಮಂಡಳಿಯಲ್ಲಿರುತ್ತಾರೆ. 11 ಸದಸ್ಯರು ರೈತರಿಂದ ಚುನಾಯಿತರಾಗಲು ಸರಕಾರ ಮೀಸಲಾತಿಯನ್ನು ಘೋಷಿಸಬೇಕಿದೆ. ತೋಟಗಾರಿಕೆ, ವ್ಯಾಪಾರಿಗಳು ಮತ್ತು ತಾಲೂಕು ಕೃಷಿ ಉತ್ಪನ್ನ ಸಹಕಾರ ಸಂಘಗಳಿಂದ ತಲಾ ಒಬ್ಬರು ಆಯ್ಕೆಯಾಗುತ್ತಾರೆ. ಸರಕಾರವು ಮೂರು ಸದಸ್ಯರನ್ನು ನಾಮನಿರ್ದೇಶನ ಮಾಡಬಹುದು. ಎಪಿಎಂಸಿಯ ಒಬ್ಬರು ಅಧಿಕಾರಿ ಸದಸ್ಯರಾಗಿ ಇರುತ್ತಾರೆ.

ಸೂಕ್ತ ಕ್ರಮ ಕೈಗೊಳ್ಳಲಿದೆ: ರಾಜ್ಯದಲ್ಲಿ ಹೊಸ ತಾಲೂಕು ರಚನೆಯಾಗಿದ್ದು, ಆಯಾ ತಾಲೂಕಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ರಚನೆಯಾಗಬೇಕಿದೆ. ಸರಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡ ಬಳಿಕ ನಿರ್ಧಾರವಾಗಲಿದೆ. – ಡಾ| ಭರತ್‌ ಶೆಟ್ಟಿ ವೈ., ಶಾಸಕರು

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.