ಪಾಲಿಕೆ ಕಟ್ಟಡದ ಮುಂದೆಯೇ ಅಪಾಯಕಾರಿ ಕಟ್ಟೆ !


Team Udayavani, Sep 13, 2022, 1:17 PM IST

9

ಲಾಲ್‌ಬಾಗ್‌: ಮಂಗಳೂರು ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ಕಟ್ಟೆಯು ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ!

ಪಾಲಿಕೆ ಕಟ್ಟಡದ ಮುಂಭಾಗದಲ್ಲಿರುವ ಕಟ್ಟೆಯಲ್ಲಿ ಅನೇಕರು ಪ್ರಯಾಣಿಕರು – ಪಾದಚಾರಿಗಳು ಕೆಲವೊಮ್ಮೆ ಕುಳಿತುಕೊಳ್ಳುತ್ತಾರೆ. ಈ ವೇಳೆ ಸ್ವಲ್ಪ ಎಚ್ಚರ ತಪ್ಪಿದರೂ ಇಲ್ಲಿ ಕೆಳಕ್ಕೆ ಬೀಳುವ ಪ್ರಮೇಯವಿದೆ. ಆದರೆ ಕುಳಿತುಕೊಳ್ಳುವ ಸಮಯದಲ್ಲಿ ಕೆಲವರು ಇದನ್ನು ಗಮನಿಸುವುದಿಲ್ಲ. ಹೀಗಾಗಿ ಅಪಾಯ ಎದುರಾಗುವ ಸಾಧ್ಯತೆ ಇದೆ.

ಪಾಲಿಕೆಯ ಮುಂಭಾಗದಲ್ಲಿರುವ ಕಟ್ಟೆಯಲ್ಲಿ ಕುಳಿತ ವ್ಯಕ್ತಿಯೊಬ್ಬರು ಕೆಲವು ತಿಂಗಳ ಹಿಂದೆ ಆಯ ತಪ್ಪಿ ಸುಮಾರು 10-12 ಅಡಿ ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು. ಅವರು ಬಿದ್ದು ಸುಮಾರು 1 ಗಂಟೆ ಕಾಲ ಯಾರಿಗೂ ಗೊತ್ತಾಗಿರಲಿಲ್ಲ. ಬಳಿಕ ಅಲ್ಲಿನ ಸಿಬಂದಿ ಸೇರಿ 108 ಆ್ಯಂಬುಲೆನ್ಸ್‌ಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ಕಳುಹಿಸಿದ್ದರು.

ಪಾಲಿಕೆ ಮುಂಭಾಗ ರಸ್ತೆಗಿಂತ 10-12 ಅಡಿಯಷ್ಟು ಕೆಳಗಿದೆ. ಇಲ್ಲಿ ರಸ್ತೆಯಿಂದ ನೇರವಾಗಿ ಮೊದಲ ಮಹಡಿಗೆ ಪ್ರವೇಶ ದ್ವಾರವಿದೆ. ಬಲಭಾಗದಲ್ಲಿ ಕೆನರಾ ಬ್ಯಾಂಕ್‌ ಪಕ್ಕದಲ್ಲಿ ಕೂಡ ಬಂದು ಪಾಲಿಕೆ ಮುಂಭಾಗ ಸೇರಬಹುದು. ತಳ ಅಂತಸ್ತಿನಲ್ಲಿ ಮಂಗಳೂರು ಒನ್‌, ದಾರಿದೀಪ ಇತ್ಯಾದಿ ವಿಭಾಗಗಳಿವೆ. ಮನಪಾ ಕಟ್ಟಡದ ಮುಂದಿನ ಜಾಗಕ್ಕೆ ತಡೆಗೋಡೆ ಕಟ್ಟಲಾಗಿದ್ದು, ಅದುವೇ ಈ ಕಟ್ಟೆ. ರಸ್ತೆಯ ಪಕ್ಕದಲ್ಲೇ ಫ‌ುಟ್‌ ಪಾತ್‌, ಅದಕ್ಕೆ ತಾಗಿಕೊಂಡು ಸುಮಾರು 150 ಮೀಟರ್‌ ಉದ್ದಕ್ಕೆ ಈ ಕಟ್ಟೆ ಇದೆ. ಈ ಕಟ್ಟೆಯೇ ಸದ್ಯ ಅಪಾಯಕಾರಿ.

ಮನಪಾ ಮುಂಭಾಗದಲ್ಲಿ ಅನೇಕ ಮಂದಿ ಬರುವುದು ಸಾಮಾನ್ಯ. ಅದರಲ್ಲೂ ಪ್ರತಿಭಟನೆ, ಸಭೆ ಇತ್ಯಾದಿ ನಡೆಯುತ್ತಿರುತ್ತದೆ. ಅಲ್ಲದೆ ಮುಂಭಾಗ ಮರ ಇರುವ ಕಾರಣ ನೆರಳಿಗೆ ಅನೇಕರು ಕಟ್ಟೆಯಲ್ಲಿ ಕುಳಿತುಕೊಂಡಿರುತ್ತಾರೆ. ರಾತ್ರಿ ವೇಳೆಯೂ ಕೆಲವರು ಇರುತ್ತಾರೆ.

ಬೇಲಿ ಹಾಕುವುದು ಉತ್ತಮ: ಸುದಿನ ಕಾಳಜಿ

ಜನರು ಗೊತ್ತಾಗದೆ ಕುಳಿತು ಇಲ್ಲಿ ಬೀಳುವ ಸಾಧ್ಯತೆ ಇರುವುದರಿಂದ 150 ಮೀಟರ್‌ನಷ್ಟು ಉದ್ದಕ್ಕೆ ಕನಿಷ್ಠ 2-3 ಅಡಿಯಷ್ಟು ಎತ್ತರಕ್ಕೆ ರೈಲಿಂಗ್‌ ರೀತಿಯಲ್ಲಿ ಬೇಲಿ ಹಾಕುವುದು ಉತ್ತಮ. ನಿತ್ಯ ನೂರಾರು ಮಂದಿ ಇಲ್ಲಿ ಓಡಾಡುವ ಜಾಗವಾದ್ದರಿಂದ ಎಲ್ಲರಿಗೂ ಭದ್ರತೆ-ಎಚ್ಚರಿಕೆ ನೀಡುವುದು ಕಷ್ಟ ಸಾಧ್ಯ. ಹೀಗಾಗಿ ಮುನ್ನೆಚ್ಚರಿಕೆ ಕೈಗೊಳ್ಳುವ ಅನಿವಾರ್ಯ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.