Mangalore: ನೀರಿನ ಅಭಾವವಿದ್ದರೂ ಅಗ್ನಿಶಾಮಕ ದಳ ಸನ್ನದ್ಧ

ಮಂಗಳೂರು ನಗರ ವ್ಯಾಪ್ತಿಯಲ್ಲಿ ಅಲ್ಲಲ್ಲಿ ನೀರಿನ ಪಂಪಿಂಗ್‌ ಪಾಯಿಂಟ್‌ಗಳಿವೆ.

Team Udayavani, Apr 26, 2023, 2:58 PM IST

Mangalore: ನೀರಿನ ಅಭಾವವಿದ್ದರೂ ಅಗ್ನಿಶಾಮಕ ದಳ ಸನ್ನದ್ಧ

ಮಹಾನಗರ: ಈ ಬಾರಿ ನೀರಿನ ಸಮಸ್ಯೆ ವ್ಯಾಪಕವಾಗಿದ್ದು, ಜನರು ಮಳೆಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಇದರ ಬಿಸಿ ಅಗ್ನಿ ಶಾಮಕ ದಳಕ್ಕೆ ಮಾತ್ರ ಸದ್ಯ ತಟ್ಟಿಲ್ಲ. ನೀರಿನ ಸಮಸ್ಯೆಯಿಲ್ಲದೆ, ಎಲ್ಲ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ನಿರ್ವಹಿಸಲಾಗುತ್ತಿದೆ.

ಜಿಲ್ಲೆಯಲ್ಲಿ ಬಿಸಿಲಿನ ಧಗೆಯೂ ಹೆಚ್ಚಾಗಿರುವುದರಿಂದ ಅಲ್ಲಲ್ಲಿ ಅಗ್ನಿ ಅವಘಡಗಳೂ ಸಂಭವಿಸುತ್ತಿದೆ. ಇದೇ ವೇಳೆ ನೀರಿನ ಅಭಾವವೂ ಎಲ್ಲೆಡೆ ಕಾಡುತ್ತಿದೆ. ಆದರೆ ಅಗ್ನಿ ಶಾಮಕ ದಳಕ್ಕೆ ಇಲ್ಲಿನ ವರೆಗೆ ಯಾವುದೇ ರೀತಿಯಲ್ಲಿ ನೀರಿನ ಸಮಸ್ಯೆ ಉಂಟಾಗಿಲ್ಲ. ಠಾಣೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿರುವ ಅಗ್ನಿ ಶಾಮಕ ವಾಹನಗಳ ಟ್ಯಾಂಕ್‌ಗಳಲ್ಲಿ ನೀರು ಭರ್ತಿಯಾಗಿಯೇ ಇರುತ್ತದೆ. ಇದರಿಂದ ಕರೆಗಳು ಬಂದ ತತ್‌ಕ್ಷಣ ತಡ ಮಾಡದೆ ಕಾರ್ಯಾಚರಣೆ ನಡೆಸಬಹುದಾಗಿದೆ ಎನ್ನುತ್ತಾರೆ ಇಲಾಖೆಯ ಅಧಿಕಾರಿಗಳು.

ನೀರು ಸಿಕ್ಕಲ್ಲಿ ಭರ್ತಿ
ಬೆಂಕಿ ನಂದಿಸುವ ಕಾರ್ಯಾಚರಣೆಗೆ ಹೋದ ಸಂದರ್ಭದಲ್ಲಿ ಕಾರ್ಯಾಚರಣೆ ಮುಗಿದ ಬಳಿಕ ವಾಪಸಾಗುವ ವೇಳೆ ನೀರು ಭರ್ತಿ ಮಾಡಿಯೇ ವಾಹನಗಳು ಠಾಣೆಗೆ ಹಿಂದಿರುಗುತ್ತವೆ. ಇದಕ್ಕಾಗಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಅಲ್ಲಲ್ಲಿ ನೀರಿನ ಪಂಪಿಂಗ್‌ ಪಾಯಿಂಟ್‌ಗಳಿವೆ.

ಮಾತ್ರವಲ್ಲದೆ ಠಾಣೆಯಲ್ಲೂ ತುರ್ತು ಉಪಯೋಗಕ್ಕಾಗಿ 1 ಲಕ್ಷ ಲೀ. ಸಾಮರ್ಥ್ಯದ ಟ್ಯಾಂಕ್‌ ಇದೆ. ಹಾಗಾಗಿ ಯಾವುದೆ ಸಮಸ್ಯೆ ಇಲ್ಲ. ಎಲ್ಲ ಠಾಣೆಗಳಲ್ಲೂ ಈ ರೀತಿ ಟ್ಯಾಂಕ್‌ ಗಳಲ್ಲಿ ನೀರು ಶೇಖರಿಸಿ ಇರಿಸಲಾಗುತ್ತದೆ ಎನ್ನುತ್ತಾರೆ ಕದ್ರಿ ಅಗ್ನಿ ಶಾಮಕ ಠಾಣೆಯ ಠಾಣಾಧಿಕಾರಿ ಸುನೀಲ್‌ ಕುಮಾರ್‌.

ಈ ಬಾರಿ ನೀರಿನ ಹೆಚ್ಚು ಬಳಕೆ
ಹಿಂದಿನ ವರ್ಷಗಳಿಗೆ ಹೋಲಿಸಿದರೆ ಅಗ್ನಿ ಶಾಮಕ ಠಾಣೆಗಳಿಗೆ ಅಗ್ನಿ ಅವಘಡಗಳಿಗೆ ಸಂಬಂಧಿಸಿದಂತೆ ಅತೀ ಹೆಚ್ಚು ಕರೆಗಳು ಬಂದಿವೆ. ಇದರಿಂದಾಗಿ ಬೆಂಕಿ ನಂದಿಸಲು ಬಳಸಿದ ನೀರಿನ ಪ್ರಮಾಣವೂ ಹೆಚ್ಚಾಗಿದೆ. ಪಚ್ಚನಾಡಿಯಲ್ಲಿ ತ್ಯಾಜ್ಯಕ್ಕೆ ಬಿದ್ದ ಬೆಂಕಿ ನಂದಿಸಲು ಲಕ್ಷಾಂತರ ಲೀ. ನೀರು ಬಳಕೆಯಾಗಿದೆ. ಕೆಲವು ಸ್ಥಳಗಳಿಗೆ ಬೆಂಕಿ ನಂದಿಸಲು ಹೋದಾಗ ವಾಹನದಲ್ಲಿ ಇದ್ದ ನೀರು ಸಾಕಾಗದೆ ಸ್ಥಳೀಯ ಮೂಲಗಳಿಂದ ನೀರು ಪಡೆದು ಬೆಂಕಿ ನಂದಿಸಿದ ಉದಾಹರಣೆಗಳೂ ಇವೆ. ಶೀಘ್ರ ಮಳೆಯಾದಲ್ಲಿ ಯಾವುದೇ ಸಮಸ್ಯೆಯಾಗದು. ಇಲ್ಲದವಾದಲ್ಲಿ ಅಗ್ನಿ ಶಾಮಕ ಇಲಾಖೆಗೂ ಬಿಸಿತಟ್ಟುವ ಸಾಧ್ಯತೆಯಿದೆ.

ನೀರಿಗೆ ಸಮಸ್ಯೆಯಾಗಿಲ್ಲ
ಅಗ್ನಿಶಾಮಕ ವಾಹನಗಳಿಗೆ ಈ ಬಾರಿ ಇಲ್ಲಿಯವರೆಗೆ ನೀರಿಗೆ ಸಮಸ್ಯೆಯಾಗಿಲ್ಲ, ಮುಂದಿನ ದಿನಗಳಲ್ಲೂ ಆಗುವ ಸಾಧ್ಯತೆ ಕಡಿಮೆ. ಠಾಣೆಯಲ್ಲಿ ಎಲ್ಲ ವಾಹನಗಳಲ್ಲೂ ನೀರು ತುಂಬಿಸಿ ಸನ್ನದ್ಧ ಸ್ಥಿತಿಯಲ್ಲಿ ಇರುತ್ತವೆ. ಠಾಣಾ ಮಟ್ಟದಲ್ಲಿ ನೀರಿನ ಟ್ಯಾಂಕ್‌ ಗಳಿದ್ದು, ತುರ್ತು ಸಂದರ್ಭಗಳಿಗಾಗಿ ಅವುಗಳನ್ನು ಭರ್ತಿ ಮಾಡಿ ಇರಿಸಲಾಗುತ್ತದೆ.
ಭರತ್‌ ಕುಮಾರ್‌, ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ, ಪಾಂಡೇಶ್ವರ ಠಾಣೆ

*ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.