ಮಂಗಳೂರು: ಡ್ರೈವಿಂಗ್ ಲೈಸೆನ್ಸ್ ಸೇವೆ ಆರಂಭ
Team Udayavani, May 29, 2020, 5:16 AM IST
ಮಂಗಳೂರು: ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಂಗಳೂರು ಕಚೇರಿಯಲ್ಲಿ ಚಾಲನಾ ಪರವಾನಿಗೆ ಸಂಬಂಧಿಸಿದ ಕಚೇರಿ ಕೆಲಸಗಳನ್ನು ಮಾ. 22ರಿಂದ ಸ್ಥಗಿತಗೊಳಿಸಲಾಗಿತ್ತು. ಇದೀಗ ಮೇ 29ರಿಂದ ಪ್ರಾಯೋಗಿಕವಾಗಿ ಚಾಲನಾ ಪರವಾನಿಗೆ ಸೇವೆಗಳು ಪ್ರಾರಂಭವಾಗಲಿದ್ದು, ಸಾರ್ವಜನಿಕರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಜೂ. 1ರಿಂದ ಸೇವೆಗಳು ಲಭ್ಯವಾಗಲಿವೆ.
ಕಲಿಕಾ ಲೈಸೆನ್ಸ್ ನೀಡುವಿಕೆ (ಎಲ್.ಎಲ್. ಪರೀಕ್ಷೆ), ಚಾಲನಾ ಅನುಜ್ಞಾ ಪತ್ರ ನೀಡುವಿಕೆ (ಡಿ.ಎಲ್. ಪರೀಕ್ಷೆ), ಚಾಲನಾ ಅನುಜ್ಞಾ ಪತ್ರ ನವೀಕರಣ, ವಿಳಾಸ ಬದಲಾವಣೆ, ನಿರ್ವಾಹಕ ಲೈಸೆನ್ಸ್ ನೀಡುವಿಕೆ/ ನವೀಕರಣ, ಇಂಟರ್ ನ್ಯಾಶನಲ್ ಡ್ರೈವಿಂಗ್ ಹಾಗೂ ಇತರ ಸೇವೆಗಳು ಲಭ್ಯವಿವೆ.
ಕೋವಿಡ್-19 ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಪ್ರಾದೇಶಿಕ ಸಾರಿಗೆ ಕಚೇರಿಯ ಲೈಸೆನ್ಸ್ ವಿಭಾಗದ ಸೇವೆಗಳನ್ನು ಶೇ.50ರಷ್ಟು ಕಡಿತ ಮಾಡಲಾಗಿದೆ. ಪ್ರತಿ ದಿನ 50 ಕಲಿಕಾ ಲೈಸೆನ್ಸ್ ನೀಡುವಿಕೆ (ಎಲ್.ಎಲ್.ಪರೀಕ್ಷೆ), 50 ಚಾಲನಾ ಅನುಜ್ಞಾ ಪತ್ರ ನೀಡುವಿಕೆ (ಡಿ.ಎಲ್. ಪರೀಕ್ಷೆ) 50, ಚಾಲನಾ ಅನುಜ್ಞಾ ಪತ್ರ ನವೀಕರಣ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುವುದು.
ಸಾರ್ವಜನಿಕರು ಅರ್ಜಿಯೊಂದಿಗೆ ಮಾಸ್ಕ್ ಧರಿಸಿ, ಥರ್ಮಲ್ ಸ್ಕ್ರೀನಿಂಗ್ ಆದ ಮೇಲೆ ಕಚೇರಿ ಒಳಗಡೆ ಪ್ರವೇಶ ನೀಡಲಾಗುವುದು. ಅರ್ಜಿದಾರರ ಜತೆ ಬೇರೆ ಯಾರಿಗೂ ಪ್ರವೇಶವಿರುವುದಿಲ್ಲ. ಜೂನ್-30ರ ವರೆಗೆ ಚಾಲನಾ ಅನುಜ್ಞಾ ಪತ್ರ ಅವಧಿ ಚಾಲ್ತಿ ಇರುವುದರಿಂದ ಸಾರ್ವಜನಿಕರು ಚಾಲನಾ ಅನುಜ್ಞಾ ಪತ್ರದ ಅವಧಿ ಮುಗಿದಿದೆ ಎಂದು ಭಯ ಪಡುವ ಅಗತ್ಯವಿಲ್ಲ. ಹೊಸ ಕಲಿಕಾ ಲೈಸೆನ್ಸ್ ಪರೀಕ್ಷೆಗಳ ಸ್ಲಾಟ್ ಜೂ. 15ರ ಅನಂತರ ನೀಡಲಾಗುವುದು. ಹಳೆ ಸ್ಲಾಟ್ ದಿನಾಂಕದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್. ಎಂ. ವರ್ಣೇಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ