Mangalore: ಅಂತರ್ಜಲ ಕುಸಿಯುತ್ತಿದೆ:ನದಿ ಮೂಲಗಳಲ್ಲೇ ನೀರಿಲ್ಲ

ಕೊಳವೆ ಬಾವಿಗಳಲ್ಲಿ ನೀರು ಸಿಗಬೇಕಾದರೆ 1,000 ಅಡಿಗಿಂತಲೂ ಹೆಚ್ಚು ಆಳಕ್ಕೆ ಕೊರೆಯಬೇಕಾಗಿದೆ

Team Udayavani, Apr 28, 2023, 6:54 PM IST

Mangalore: ಅಂತರ್ಜಲ ಕುಸಿಯುತ್ತಿದೆ:ನದಿ ಮೂಲಗಳಲ್ಲೇ ನೀರಿಲ್ಲ

ಮಹಾನಗರ: ನದಿ ಮೂಲಗಳಲ್ಲೇ ಅಂತರ್ಜಲ ಕುಸಿಯುತ್ತಿರುವ ಬಗ್ಗೆ ಹಲವು ವರ್ಷಗಳಿಂದ ಚರ್ಚೆಗೆ ಗ್ರಾಸವಾಗಿರುವಂತೆಯೇ, ಜಿಲ್ಲೆಯ ನದಿ ಮೂಲ, ಪಶ್ಚಿಮ ಘಟ್ಟದ ತಪ್ಪಲಲ್ಲೇ ಭೂಮಿಯಲ್ಲಿ ನೀರಿನ ಮಟ್ಟ ಸಾವಿರಾರು ಅಡಿ ಆಳಕ್ಕೆ ಕುಸಿಯುತ್ತಿದೆ. ಜೀವಜಲಕ್ಕಾಗಿ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಪಂಚಾಯತ್‌ಗಳು ಕೊಳವೆಬಾವಿಗಳನ್ನು ಆಶ್ರಯಿಸುತ್ತಿದ್ದು,
1,000 ಅಡಿಯಷ್ಟು ಕೊರೆದರೂ ನೀರು ಸಿಗುತ್ತಿಲ್ಲ!

ದ.ಕ. ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಕೊಳವೆಬಾವಿಗಳು ನೀರಿನ ಪ್ರಮುಖ ಮೂಲಗಳು. ಸರಕಾರಿ ಅಂಕಿ-ಅಂಶಗಳ ಪ್ರಕಾರವೇ 2022ರ ಎಪ್ರಿಲ್‌ನಿಂದ 2023ರ ಮಾರ್ಚ್‌ವರೆಗೆ ಈ ತಾಲೂಕುಗಳಲ್ಲಿ ಒಟ್ಟು 848 ಬೋರ್‌ ವೆಲ್‌ಗ‌ಳನ್ನು ಕೊರೆಯಿಸಲಾಗಿದೆ. ಇವುಗಳಲ್ಲಿ 634 ಕೊಳವೆಬಾವಿಗಳಲ್ಲಿ ನೀರು ದೊರಕಿದ್ದು, 214ರಲ್ಲಿ ನೀರೇ ಇಲ್ಲ!

ಏಳೆಂಟು ವರ್ಷಗಳ ಹಿಂದೆ 350 ಅಡಿ ಆಳದ ಕೊಳವೆ ಬಾವಿನಲ್ಲಿ ಸಿಗುತ್ತಿದ್ದ ನೀರು ಇದೀಗ 1,200 ಅಡಿಯಷ್ಟು ಕೊರೆದರೂ ಸಿಗುತ್ತಿಲ್ಲ ಎಂದು ಬೋರ್‌ವೆಲ್‌ ಏಜೆನ್ಸಿಗಳವರೇ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕೊಳವೆ ಬಾವಿಗಳಲ್ಲಿ ಪ್ರದೇಶದಿಂದ ಪ್ರದೇಶಕ್ಕೆ ನೀರಿನ ಮಟ್ಟ ಬೇರೆಯಾಗಿರುತ್ತದೆ. ಬೆಳ್ತಂಗಡಿಯಂತಹ ಪ್ರದೇಶಗಳಲ್ಲಿ ಇತ್ತೀಚೆಗೆ ಕೊಳವೆ ಬಾವಿಗಳಲ್ಲಿ ನೀರು ಸಿಗಬೇಕಾದರೆ 1,000 ಅಡಿಗಿಂತಲೂ ಹೆಚ್ಚು ಆಳಕ್ಕೆ ಕೊರೆಯಬೇಕಾಗಿದೆ ಎನ್ನುವುದು ಬೆಳ್ತಂಗಡಿಯ ಕೊಳವೆಬಾವಿ ಏಜೆಂಟರೊಬ್ಬರ ಅಭಿಪ್ರಾಯ.

ಅಂತರ್ಜಲ ಅಪಾಯದಲ್ಲಿ !
ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯಲು, ತೋಟ, ಬೆಳೆಗಳಿಗೂ ಅಂತರ್ಜಲವನ್ನೇ ಆಶ್ರಯಿಸಲಾಗುತ್ತದೆ. ಬಾವಿ, ಕೆರೆ ಹೊರತುಪಡಿಸಿ ನೀರಿಗಾಗಿ ಕೊಳವೆಬಾವಿ ಅನಿವಾರ್ಯ. ಆದರೆ ಮಳೆ ಕಾಡುಗಳ ನಾಶ, ಪಶ್ಚಿಮ ಘಟ್ಟಗಳಲ್ಲಿ ಹೆಚ್ಚುತ್ತಿರುವ ಭೂಮಾಫಿಯಾ, ಅತಿಯಾದ ಮರಳುಗಾರಿಕೆ, ಕಾಳ್ಗಿಚ್ಚು ಮೊದಲಾದ ಕಾರಣಗಳಿಂದ ನೀರು ಭೂಮಿಯಲ್ಲಿ ಇಂಗಲು ಸಾಧ್ಯವಾಗುತ್ತಿಲ್ಲ ಎನ್ನುವುದು ಪರಿಸರ ತಜ್ಞರ ಅಭಿಪ್ರಾಯ. ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿದ್ದರೂ ನೇತ್ರಾವತಿ, ಪಯಸ್ವಿನಿ, ಫ‌ಲ್ಗುಣಿ, ನಂದಿನಿ,  ಕುಮಾರಧಾರಾ, ಶಾಂಭವಿ ಮೊದಲಾದ ಜೀವನದಿಗಳ ಜತೆಗೆ ಅಣಿಯೂರು ಹೊಳೆ, ಗುಂಡ್ಯ ಹೊಳೆ, ಕೆಂಪು ಹೊಳೆ, ಅಡ್ಡಹೊಳೆ ಮೊದಲಾದ ಹಲವು ನದಿ ಕವಲುಗಳಲ್ಲಿ ಎಪ್ರಿಲ್‌ ತಿಂಗಳಲ್ಲೇ ನೀರು ಬರಿದಾಗಿದ್ದು,
ಅಂತರ್ಜಲ ಅಪಾಯದಲ್ಲಿರುವ ಸೂಚಕವಾಗಿದೆ.

ಎಚ್ಚರಿಕೆ ವಹಿಸುವುದು ಅಗತ್ಯ
ಮಳೆ ನೀರು ಪ್ರಾಕೃತಿಕವಾಗಿ ಇಂಗಿ ಇಳೆ ಸೇರಿದಾಗ ಮಾತ್ರ ಅಂತರ್ಜಲ ಹೆಚ್ಚಲು ಸಾಧ್ಯ. ಆದರೆ ಪ್ರಾಕೃತಿಕ ನೀರಿನ ಹರಿವಿಗೆ ಅಡೆತಡೆಗಳನ್ನು ಉಂಟು ಮಾಡಿದಾಗ ಅದೆಷ್ಟು ಮಳೆಯಾದರೂ ನೀರು ಭೂಮಿಗೆ ಇಂಗಲು ಸಾಧ್ಯವಾಗುವುದಿಲ್ಲ. ಹಿಂದೆಲ್ಲ ಕೊಳವೆ ಬಾವಿ 200ರಿಂದ 300 ಅಡಿಗಳಲ್ಲಿ ಸಿಗುತ್ತಿತ್ತು. ನಮ್ಮ ನೀರಿನ ಬೇಡಿಕೆ ಅತಿಯಾದಂತೆ ಕೊಳವೆಬಾವಿಗಳ ಕೊರೆತ ಹೆಚ್ಚಿದೆ. ಭೂಮಿಯಲ್ಲಿ ಪದರಗಳಲ್ಲಿ ಹರಿಯುವ ಅಂತರ್ಜಲಕ್ಕೆ ಅಡ್ಡಿ ಪಡಿಸುವುದರಿಂದ ನೀರು ಮೇಲೆತ್ತಿದ್ದಂತೆ ನೀರಿನ ಪದರಗಳು ಕುಸಿದು ಹರಿವಿಗೆ ತಡೆಯಾಗುತ್ತದೆ. ಇದರಿಂದ ಅಂತರ್ಜಲ ಕ್ಷೀಣಿಸುವುದು ಮಾತ್ರವಲ್ಲ, ಮಳೆಗಾಲದಲ್ಲಿ ಭೂಕುಸಿತಕ್ಕೂ ಕಾರಣವಾಗುತ್ತಿದೆ. ಅಂತರ್ಜಲ ಆಳಕ್ಕೆ ಹೋದಷ್ಟು ವಿಷಪೂರಿತವಾಗಿರುತ್ತದೆ. ಅದನ್ನು ಬಳಸುವಾಗ ಎಚ್ಚರಿಕೆ ವಹಿಸುವುದು ಕೂಡ ಅತೀ ಅಗತ್ಯ.
ಡಾ| ಕೆ.ವಿ. ರಾವ್‌, ಹಿರಿಯ ವಿಜ್ಞಾನಿ, ಪಿಲಿಕುಳ 
ಪ್ರಾದೇಶಿಕ ವಿಜ್ಞಾನ ಕೇಂದ್ರ

ಸತ್ಯಾ ಕೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.