ಮಂಗಳೂರು: ಮಂಗಳಾ ಕ್ರೀಡಾಂಗಣ: ವಾಕಿಂಗ್‌ ಟ್ರ್ಯಾಕ್‌

ಚರಂಡಿ ವ್ಯವಸ್ಥೆಯೊಂದಿಗೆ ಸ್ಟೇಡಿಯಂಗೆ ಸಿಗಲಿದೆ ಹೊಸ ಸ್ವರೂಪ

Team Udayavani, Nov 10, 2022, 10:55 AM IST

4

ಮಹಾನಗರ: ನಗರದ ಮಂಗಳಾ ಕ್ರೀಡಾಂಗಣದಲ್ಲಿ ಮುಂಜಾನೆ- ಸಂಜೆ ವೇಳೆ ವಾಕಿಂಗ್‌, ಜಾಗಿಂಗ್‌ ಮಾಡುವವರಿಗಾಗಿ ಪ್ರತ್ಯೇಕ ಟ್ರ್ಯಾಕ್‌ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಶೀಘ್ರ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ.

ಕ್ರೀಡಾಂಗಣದಲ್ಲಿ ವಾಕಿಂಗ್‌ ಟ್ರ್ಯಾಕ್‌ನಿರ್ಮಿಸಬೇಕು ಎಂಬುವುದು ಹಿರಿಯ ನಾಗರಿಕರ, ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿತ್ತು. ಅದರಂತೆ ಶಾಸಕ ವೇದವ್ಯಾಸ ಕಾಮತ್‌ ಅವರು ತಮ್ಮ ಶಾಸಕರ ನಿಧಿಯಿಂದ 2 ಕೋ.ರೂ. ಅನುದಾನ ಬಿಡುಗಡೆಗೊಳಿಸಿದ್ದಾರೆ.

ಇದರಲ್ಲಿ ವಾಕಿಂಗ್‌ ಟ್ರ್ಯಾಕ್‌, ಮೈದಾನದ ನೀರು ಹೊರಗೆ ಹರಿದು ಹೋಗಲು ಚರಂಡಿ ವ್ಯವಸ್ಥೆ ಮತ್ತು ಸೇಫ್ಟಿಗಾಗಿ ಕೆಲವೊಂದು ವ್ಯವಸ್ಥೆಗಳನ್ನು ಆಳವಡಿಸಲಾಗುತ್ತದೆ. ಜತೆಗೆ ಕ್ರೀಡಾಂಗಣದ ಮೆಟ್ಟಿಲುಗಳನ್ನು ಕೆಳಭಾಗದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತದೆ. ಸದ್ಯ ಮೈದಾನದಲ್ಲಿರುವ ಸಿಂಥೆಟಿಕ್‌ ಟ್ರ್ಯಾಕ್‌ ಹೊರತುಪಡಿಸಿದ ಪ್ರದೇಶದಲ್ಲಿ ಈ ಕಾಮಗಾರಿ ನಡೆಯುಲಿದೆ. ಆ ಮೂಲಕ ಮೈದಾನಕ್ಕೆ ಹೊಸ ರೂಪ ಸಿಗಲಿದೆ. ಜತೆಗೆ ಕ್ರೀಡಾಂಗಣದ ಹೊರಭಾಗದಲ್ಲಿರುವ ವಾಲಿಬಾಲ್‌ ಕೋರ್ಟ್‌ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ.

ಈ ಮೊದಲು ಮೈದಾನದ ಹೊರ ಭಾಗದಲ್ಲಿ ಹೊಸ ಸ್ಮಾರ್ಟ್‌ ಸಿಟಿಯಿಂದ ನಿರ್ಮಿಸಲಾದ ಪೆವಿಲಿಯನ್‌ ಬದಿಯಿಂದಾಗಿ ಇಂಡೋರ್‌ ಸ್ಟೇಡಿಯಂ, ಕರಾವಳಿ ಉತ್ಸವ ಮೈದಾನದವರೆಗೆ ವಾಕಿಂಗ್‌ಗೆ ಮಣ್ಣಿನ ರಸ್ತೆ ಇತ್ತು. ಅನೇಕರು ಇದನ್ನು ವಾಕಿಂಗ್‌ಗೆ ಬಳಸುತ್ತಿದ್ದರು. ಆದರೆ ಪೆವಿಲಿಯನ್‌ ಕಾಮಗಾರಿ ವೇಳೆ ಅಲ್ಲಿ ಮಣ್ಣು ರಾಶಿ ಹಾಕಿದ್ದರಿಂದ ವಾಕಿಂಗ್‌ ಮಾಡಲು ಆಡ್ಡಿಯಾಗಿತ್ತು. ಸದ್ಯ ಮಣ್ಣು ತೆರವುಗೊಳಿಸಿದ್ದು, ವಾಕಿಂಗ್‌ ಹಾಗೂ ಇತರ ಉದ್ದೇಶಕ್ಕೆ ಒಳಾಂಗಣ ಕ್ರೀಡಾಂಗಣಕ್ಕೆ ತೆರಳಲು ಅವಕಾಶ ಮಾಡಿಕೊಡಲಾಗಿದೆ.

ಕ್ರೀಡಾಂಗಣದಲ್ಲಿ ಹೆಚ್ಚಿದ ಚಟುವಟಿಕೆ

ಎರಡು ವರ್ಷದ ಬಳಿಕ ಕ್ರೀಡಾಂಗಣದಲ್ಲಿ ಕ್ರೀಡಾ ಚಟುವಟಿಕೆ ಮತ್ತೆ ಚುರುಕುಗೊಂಡಿದೆ. ಶಾಲಾ ಕಾಲೇಜುಗಳಿಗೆ ಸಂಬಂಧಿಸಿದ ಕ್ರೀಡಾ ಚಟುವಟಿಕೆಗಳು ಪ್ರತಿದಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದರಿಂದ ಮೈದಾನದ ಬಳಕೆ ಹೆಚ್ಚಾಗಿದ್ದು, ಸಿಂಥೆಟಿಕ್‌ ಟ್ರ್ಯಾಕ್‌ನಲ್ಲಿ ಕೂಡ ಹೆಚ್ಚು ಬಳಕೆಯಾಗುತ್ತಿದೆ.

ವಾಕಿಂಗ್‌ ಟ್ರ್ಯಾಕ್‌ ಮಾಡುವಂತಿಲ್ಲ?

ಒಂದು ಕಡೆಯಲ್ಲಿ ವಾಕಿಂಗ್‌ ಟ್ರ್ಯಾಕ್‌ ನಡೆಯುತ್ತಿದ್ದರೆ ಇನ್ನೊಂದು ಕಡೆಯಲ್ಲಿ ಇದಕ್ಕೆ ಅಪಸ್ವರವೂ ಕೇಳಿ ಬಂದಿದೆ. ಕ್ರೀಡಾಂಗಣವನ್ನು ಕೇವಲ ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಬಳಸಬೇಕು. ಅಲ್ಲಿ ಇತರ ಚಟುವಟಿಕೆಗಳಿಗೆ ಅವಕಾಶವಿಲ್ಲ. ಕ್ರೀಡೆಗೆ ಸಂಬಂಧ ಪಡದವರು ಕ್ರೀಡಾಂಗಣದೊಳಗೆ ಬಂದು ವಾಕಿಂಗ್‌-ಜಾಗಿಂಗ್‌ ಮಾಡಲು ಅವಕಾಶ ನೀಡಬಾರದು. ಕ್ರೀಡಾಂಗಣದ ಬಳಕೆಗೆ ಕೆಲವೊಂದು ನಿಯಮಾವಳಿಗಳಿದ್ದು, ವಾಕಿಂಗ್‌ ಗೆ ಪಾರ್ಕ್‌ ಅಥವಾ ಬೇರೆ ಯಾವುದಾದರೂ ಸ್ಥಳವನ್ನು ಬಳಸಬಹುದು. ಯಾವುದೇ ಕ್ರೀಡಾಂಗಣದಲ್ಲಿ ಜಾಗಿಂಗ್‌ ಟ್ರ್ಯಾಕ್‌ ಇಲ್ಲ ಎನ್ನುವ ಮಾತುಗಳೂ ಇಲ್ಲಿ ಕೇಳಿ ಬಂದಿದೆ.

ಅನುದಾನ ಬಿಡುಗಡೆ: ಮಂಗಳಾ ಕ್ರೀಡಾಂಗಣದ ಅಭಿವೃದ್ಧಿಯ ಭಾಗವಾಗಿ ವಾಕಿಂಗ್‌ ಟ್ರ್ಯಾಕ್‌, ನೀರು ಹರಿದು ಹೋಗುವ ಚರಂಡಿ ಹಾಗೂ ಇತರ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ. ಬೆಳಗ್ಗೆ – ಸಂಜೆ ವೇಳೆ ಹಿರಿಯ ನಾಗರಿಕರಿಗೆ ವಾಕಿಂಗ್‌ ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅನುದಾನ ಬಿಡುಗಡೆಗೊಳಿಸಲಾಗಿದೆ. – ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.