ಮಂಗಳೂರು: ಮಂಗಳಾ ಕ್ರೀಡಾಂಗಣ: ವಾಕಿಂಗ್‌ ಟ್ರ್ಯಾಕ್‌

ಚರಂಡಿ ವ್ಯವಸ್ಥೆಯೊಂದಿಗೆ ಸ್ಟೇಡಿಯಂಗೆ ಸಿಗಲಿದೆ ಹೊಸ ಸ್ವರೂಪ

Team Udayavani, Nov 10, 2022, 10:55 AM IST

4

ಮಹಾನಗರ: ನಗರದ ಮಂಗಳಾ ಕ್ರೀಡಾಂಗಣದಲ್ಲಿ ಮುಂಜಾನೆ- ಸಂಜೆ ವೇಳೆ ವಾಕಿಂಗ್‌, ಜಾಗಿಂಗ್‌ ಮಾಡುವವರಿಗಾಗಿ ಪ್ರತ್ಯೇಕ ಟ್ರ್ಯಾಕ್‌ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಶೀಘ್ರ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ.

ಕ್ರೀಡಾಂಗಣದಲ್ಲಿ ವಾಕಿಂಗ್‌ ಟ್ರ್ಯಾಕ್‌ನಿರ್ಮಿಸಬೇಕು ಎಂಬುವುದು ಹಿರಿಯ ನಾಗರಿಕರ, ಸಾರ್ವಜನಿಕರ ಬಹುಕಾಲದ ಬೇಡಿಕೆಯಾಗಿತ್ತು. ಅದರಂತೆ ಶಾಸಕ ವೇದವ್ಯಾಸ ಕಾಮತ್‌ ಅವರು ತಮ್ಮ ಶಾಸಕರ ನಿಧಿಯಿಂದ 2 ಕೋ.ರೂ. ಅನುದಾನ ಬಿಡುಗಡೆಗೊಳಿಸಿದ್ದಾರೆ.

ಇದರಲ್ಲಿ ವಾಕಿಂಗ್‌ ಟ್ರ್ಯಾಕ್‌, ಮೈದಾನದ ನೀರು ಹೊರಗೆ ಹರಿದು ಹೋಗಲು ಚರಂಡಿ ವ್ಯವಸ್ಥೆ ಮತ್ತು ಸೇಫ್ಟಿಗಾಗಿ ಕೆಲವೊಂದು ವ್ಯವಸ್ಥೆಗಳನ್ನು ಆಳವಡಿಸಲಾಗುತ್ತದೆ. ಜತೆಗೆ ಕ್ರೀಡಾಂಗಣದ ಮೆಟ್ಟಿಲುಗಳನ್ನು ಕೆಳಭಾಗದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತದೆ. ಸದ್ಯ ಮೈದಾನದಲ್ಲಿರುವ ಸಿಂಥೆಟಿಕ್‌ ಟ್ರ್ಯಾಕ್‌ ಹೊರತುಪಡಿಸಿದ ಪ್ರದೇಶದಲ್ಲಿ ಈ ಕಾಮಗಾರಿ ನಡೆಯುಲಿದೆ. ಆ ಮೂಲಕ ಮೈದಾನಕ್ಕೆ ಹೊಸ ರೂಪ ಸಿಗಲಿದೆ. ಜತೆಗೆ ಕ್ರೀಡಾಂಗಣದ ಹೊರಭಾಗದಲ್ಲಿರುವ ವಾಲಿಬಾಲ್‌ ಕೋರ್ಟ್‌ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ.

ಈ ಮೊದಲು ಮೈದಾನದ ಹೊರ ಭಾಗದಲ್ಲಿ ಹೊಸ ಸ್ಮಾರ್ಟ್‌ ಸಿಟಿಯಿಂದ ನಿರ್ಮಿಸಲಾದ ಪೆವಿಲಿಯನ್‌ ಬದಿಯಿಂದಾಗಿ ಇಂಡೋರ್‌ ಸ್ಟೇಡಿಯಂ, ಕರಾವಳಿ ಉತ್ಸವ ಮೈದಾನದವರೆಗೆ ವಾಕಿಂಗ್‌ಗೆ ಮಣ್ಣಿನ ರಸ್ತೆ ಇತ್ತು. ಅನೇಕರು ಇದನ್ನು ವಾಕಿಂಗ್‌ಗೆ ಬಳಸುತ್ತಿದ್ದರು. ಆದರೆ ಪೆವಿಲಿಯನ್‌ ಕಾಮಗಾರಿ ವೇಳೆ ಅಲ್ಲಿ ಮಣ್ಣು ರಾಶಿ ಹಾಕಿದ್ದರಿಂದ ವಾಕಿಂಗ್‌ ಮಾಡಲು ಆಡ್ಡಿಯಾಗಿತ್ತು. ಸದ್ಯ ಮಣ್ಣು ತೆರವುಗೊಳಿಸಿದ್ದು, ವಾಕಿಂಗ್‌ ಹಾಗೂ ಇತರ ಉದ್ದೇಶಕ್ಕೆ ಒಳಾಂಗಣ ಕ್ರೀಡಾಂಗಣಕ್ಕೆ ತೆರಳಲು ಅವಕಾಶ ಮಾಡಿಕೊಡಲಾಗಿದೆ.

ಕ್ರೀಡಾಂಗಣದಲ್ಲಿ ಹೆಚ್ಚಿದ ಚಟುವಟಿಕೆ

ಎರಡು ವರ್ಷದ ಬಳಿಕ ಕ್ರೀಡಾಂಗಣದಲ್ಲಿ ಕ್ರೀಡಾ ಚಟುವಟಿಕೆ ಮತ್ತೆ ಚುರುಕುಗೊಂಡಿದೆ. ಶಾಲಾ ಕಾಲೇಜುಗಳಿಗೆ ಸಂಬಂಧಿಸಿದ ಕ್ರೀಡಾ ಚಟುವಟಿಕೆಗಳು ಪ್ರತಿದಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದರಿಂದ ಮೈದಾನದ ಬಳಕೆ ಹೆಚ್ಚಾಗಿದ್ದು, ಸಿಂಥೆಟಿಕ್‌ ಟ್ರ್ಯಾಕ್‌ನಲ್ಲಿ ಕೂಡ ಹೆಚ್ಚು ಬಳಕೆಯಾಗುತ್ತಿದೆ.

ವಾಕಿಂಗ್‌ ಟ್ರ್ಯಾಕ್‌ ಮಾಡುವಂತಿಲ್ಲ?

ಒಂದು ಕಡೆಯಲ್ಲಿ ವಾಕಿಂಗ್‌ ಟ್ರ್ಯಾಕ್‌ ನಡೆಯುತ್ತಿದ್ದರೆ ಇನ್ನೊಂದು ಕಡೆಯಲ್ಲಿ ಇದಕ್ಕೆ ಅಪಸ್ವರವೂ ಕೇಳಿ ಬಂದಿದೆ. ಕ್ರೀಡಾಂಗಣವನ್ನು ಕೇವಲ ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಬಳಸಬೇಕು. ಅಲ್ಲಿ ಇತರ ಚಟುವಟಿಕೆಗಳಿಗೆ ಅವಕಾಶವಿಲ್ಲ. ಕ್ರೀಡೆಗೆ ಸಂಬಂಧ ಪಡದವರು ಕ್ರೀಡಾಂಗಣದೊಳಗೆ ಬಂದು ವಾಕಿಂಗ್‌-ಜಾಗಿಂಗ್‌ ಮಾಡಲು ಅವಕಾಶ ನೀಡಬಾರದು. ಕ್ರೀಡಾಂಗಣದ ಬಳಕೆಗೆ ಕೆಲವೊಂದು ನಿಯಮಾವಳಿಗಳಿದ್ದು, ವಾಕಿಂಗ್‌ ಗೆ ಪಾರ್ಕ್‌ ಅಥವಾ ಬೇರೆ ಯಾವುದಾದರೂ ಸ್ಥಳವನ್ನು ಬಳಸಬಹುದು. ಯಾವುದೇ ಕ್ರೀಡಾಂಗಣದಲ್ಲಿ ಜಾಗಿಂಗ್‌ ಟ್ರ್ಯಾಕ್‌ ಇಲ್ಲ ಎನ್ನುವ ಮಾತುಗಳೂ ಇಲ್ಲಿ ಕೇಳಿ ಬಂದಿದೆ.

ಅನುದಾನ ಬಿಡುಗಡೆ: ಮಂಗಳಾ ಕ್ರೀಡಾಂಗಣದ ಅಭಿವೃದ್ಧಿಯ ಭಾಗವಾಗಿ ವಾಕಿಂಗ್‌ ಟ್ರ್ಯಾಕ್‌, ನೀರು ಹರಿದು ಹೋಗುವ ಚರಂಡಿ ಹಾಗೂ ಇತರ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ. ಬೆಳಗ್ಗೆ – ಸಂಜೆ ವೇಳೆ ಹಿರಿಯ ನಾಗರಿಕರಿಗೆ ವಾಕಿಂಗ್‌ ಮಾಡಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅನುದಾನ ಬಿಡುಗಡೆಗೊಳಿಸಲಾಗಿದೆ. – ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ: ಮಂಗಳೂರು ಕಮಿಷನರ್

ಕಾರಾಗೃಹದಲ್ಲಿ ಬೀಡಿ, ಸಿಗರೇಟ್, ತಂಬಾಕು ಮಾತ್ರ ಸಿಕ್ಕಿದೆ: ಮಂಗಳೂರು ಕಮಿಷನರ್

ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ

ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ತಪಾಸಣೆ

ಮೀನುಗಾರ ಅಭ್ಯರ್ಥಿಗೆ ಬಿಜೆಪಿ ಟಿಕೆಟ್‌: ಆಗ್ರಹ

ಮೀನುಗಾರ ಅಭ್ಯರ್ಥಿಗೆ ಬಿಜೆಪಿ ಟಿಕೆಟ್‌: ಆಗ್ರಹ

police siren

ನ್ಯಾಯವಾದಿ,ಅವರ ಗರ್ಭಿಣಿ ಪತ್ನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ

missing

ಔಷಧ ಅಂಗಡಿಗೆಂದು ಹೋದ ವಿವಾಹಿತೆ ನಾಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ