ಅಕ್ರಮ ಗೋಮಾಂಸ ಮಾರಾಟ-ಕಲಬೆರಕೆ ಕಂಡುಬಂದಲ್ಲಿ ಪರವಾನಗಿ ರದ್ದು: ಮಂಗಳೂರು ಮೇಯರ್ ಖಡಕ್ ಸೂಚನೆ
ಅಕ್ರಮ ಗೋಮಾಂಸ ಮಾರಾಟ ಮತ್ತು ಕಲಬೆರಕೆ ಆರೋಪ: ಮಾಂಸದಂಗಡಿಗಳಿಗೆ ಮೇಯರ್ ಭೇಟಿ-ಪರಿಶೀಲನೆ
Team Udayavani, Oct 14, 2020, 11:31 AM IST
ಮಂಗಳೂರು: ಸಾರ್ವಜನಿಕ ದೂರಿನ ಹಿನ್ನೆಲೆ ಹಾಗೂ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುವ ವಾಹನಗಳನ್ನು ಪೊಲೀಸರು ತಡೆಹಿಡಿದ ಘಟನೆಗಳನ್ನು ಪರಿಗಣಿಸಿ ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ್ ಹಾಗೂ ಮನಪಾ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಮಾಂಸದ ಅಂಗಡಿಗಳನ್ನು ಪರಿಶೀಲಿಸಿದ್ದಾರೆ.
ಮಂಗಳೂರು ಮನಪ ವ್ಯಾಪ್ತಿಯ ಕಸಾಯಿಖಾನೆ ಹಾಗೂ ಮಟನ್ ಸ್ಟಾಲ್ ನಲ್ಲಿ ಬೀಫ್ ಬೆರಕೆ ಆರೋಪ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮೇಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇವರೊಂದಿಗೆ ಮನಪಾ ಅಧಿಕಾರಿಗಳು ಕೂಡ ಹಾಜರಿದ್ದರು.
ಉರ್ವಸ್ಟೋರ್, ಉರ್ವ ಮಾರ್ಕೆಟ್, ಕಸಾಯಿಖಾನೆ ಮುಂತಾದೆಡೆ ಮಾಂಸದ ಅಂಗಡಿಗಳನ್ನು ಪರಿಶೀಲಿಸಿ, ಅಕ್ರಮವಾಗಿ ಜಾನುವಾರು ಮಾಂಸ ಮಾರಾಟ ಕಂಡುಬಂದಲ್ಲಿ ಪರವಾನಿಗೆ ರದ್ದು ಮಾಡುವ ಎಚ್ಚರಿಕೆ ನೀಡಿದರು. ದಾಳಿ ವೇಳೆ ಕಸಾಯಿ ಖಾನೆ ಮತ್ತು ಮಾರಾಟ ಮಳಿಗೆಗಳ ಪರವಾನಗಿ ಮತ್ತು ಬಿಲ್ ಪರಿಶೀಲನೆ ನಡೆಸಲಾಯಿತು.
ಇದನ್ನೂ ಓದಿ: ಕುಡಿದು ಗಲಾಟೆ ಮಾಡುತ್ತಿದ್ದ ಎಂದು ರೊಚ್ಚಿಗೆದ್ದ ತಮ್ಮನಿಂದ ಅಣ್ಣನ ಬರ್ಬರ ಹತ್ಯೆ
ಈ ವೇಳೆ ಅಕ್ರಮ ಮಾರಾಟ ಮತ್ತು ವಧೆಗಳ ಬಗ್ಗೆ ನಿಗಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಮಾತ್ರವಲ್ಲದೆ ಮಳಿಗೆಗಳಲ್ಲಿ ಮಾರಾಟವಾಗುವ ಮಾಂಸದಲ್ಲಿ ಕಡ್ಡಾಯ ಸೀಲ್ ಮತ್ತು ಬಿಲ್ ಇರುವಂತೆ ಮೇಯರ್ ಸೂಚನೆ ನೀಡಿದ್ದಾರೆ.
ಅ. 13ರ ಮಂಗಳವಾರ ಕೂಡ ಹಾಲು ಸಾಗಾಟ ಮಾಡುವ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಬಳಿ ನಡೆದಿತ್ತು.
ಇದನ್ನೂ ಓದಿ: ಜಮ್ಮು-ಕಾಶ್ಮೀರ: 13 ವಿದ್ಯಾರ್ಥಿಗಳು ಉಗ್ರ ಸಂಘಟನೆಗೆ ಸೇರ್ಪಡೆ, ಮೂವರು ಶಿಕ್ಷಕರ ಬಂಧನ
ಆರೋಪಿಗಳು ಹಾಸನದಿಂದ ಕುದ್ರೋಳಿಗೆ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರು ಎಂದು ಮಾಹಿತಿ ತಿಳಿದು ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ
ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’
D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್ ನಲ್ಲಿ 6 ಬೆಡ್ ಮೀಸಲು
May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್ ಯಾತ್ರೆ
Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ
MUST WATCH
ಹೊಸ ಸೇರ್ಪಡೆ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ