ಮಂಗಳೂರು: ಮತ್ತೆ 800ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಸ್ವಗ್ರಾಮಕ್ಕೆ
Team Udayavani, May 5, 2020, 6:30 AM IST
ಮಂಗಳೂರು: ಮಂಗಳೂರು ನಗರ, ಹೊರವಲಯದಲ್ಲಿದ್ದು, ಊರಿಗೆ ಹೋಗಲು ಆಕಾಂಕ್ಷಿಗಳಾಗಿದ್ದ ಸುಮಾರು 800ಕ್ಕೂ ಹೆಚ್ಚು ವಲಸೆ ಕಾರ್ಮಿಕರನ್ನು ಸೋಮವಾರ ಅವರ ಸ್ವಗ್ರಾಮಗಳಿಗೆ ಕಳುಹಿಸಿ ಕೊಡಲಾಯಿತು. ರವಿವಾರದವರೆಗೆ 10,000ಕ್ಕೂ ಹೆಚ್ಚು ಮಂದಿಯನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಗಿತ್ತು.
ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ ಮತ್ತು ಕೆಎಸ್ಆರ್ಟಿಸಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ | ವೈ.ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಅವರ ಮಾರ್ಗದರ್ಶನದಲ್ಲಿ ಕೂಳೂರಿನ ಗೋಲ್ಡ್ಫಿಂಚ್ ಸಿಟಿ ಮೈದಾನದಲ್ಲಿ ವಲಸೆ ಕಾರ್ಮಿಕರನ್ನು ಕೆಎಸ್ಆರ್ಟಿಸಿ ಬಸ್ಗಳ ಮೂಲಕ ಕಳುಹಿಸಿ ಕೊಡುವ ಪ್ರಕ್ರಿಯೆ ನಡೆಯಿತು. ಕಾರ್ಮಿಕರ ಹೆಸರು, ಮೊಬೈಲ್ ನಂಬರ್ಗಳನ್ನು ನೋಂದಾಯಿಸಿಕೊಳ್ಳಲಾಯಿತು.
26ಕ್ಕೂ ಹೆಚ್ಚು ಬಸ್ಗಳ ಬಳಕೆ
ಬಾಗಲಕೋಟೆ, ಬಾದಾಮಿ, ಕೊಪ್ಪಳ, ಕುಷ್ಟಗಿ, ಮೈಸೂರು, ಬೆಂಗಳೂರು, ಹಾಸನ, ಚಿಕ್ಕಮಗಳೂರು, ಮಡಿಕೇರಿ, ಬಳ್ಳಾರಿ ಮೊದಲಾದ ಜಿಲ್ಲೆಗಳಿಗೆ 26ಕ್ಕೂ ಹೆಚ್ಚು ಬಸ್ಗಳಲ್ಲಿ ಕಾರ್ಮಿಕರನ್ನು ಕಳುಹಿಸಿಕೊಡಲಾಯಿತು. ಒಂದು ಬಸ್ನಲ್ಲಿ 25 ಮಂದಿಗೆ ಅವಕಾಶ ನೀಡಲಾಗಿತ್ತು. ಮಕ್ಕಳಿದ್ದ ಸಂದರ್ಭ ಹೆಚ್ಚುವರಿಯಾಗಿ 5 ಮಂದಿ ಮಕ್ಕಳಿಗೆ ಅವಕಾಶ ನೀಡಲಾಯಿತು. ರಾತ್ರಿವರೆಗೂ ಪ್ರಕ್ರಿಯೆ ಮುಂದುವರಿದಿತ್ತು. ಪ್ರಯಾಣಿಕರಿಗೆ ನೀರು, ಬಿಸ್ಕತ್, ಹಣ್ಣು ಹಂಪಲುಗಳನ್ನು ನೀಡಲಾಯಿತು.
ಹೊರ ರಾಜ್ಯದವರ ನೋಂದಣಿ
ಮಂಗಳೂರು ನಗರ ವ್ಯಾಪ್ತಿಯಲ್ಲಿರುವ ಹೊರ ರಾಜ್ಯಗಳ ಕಾರ್ಮಿಕರಿಗೂ ತಮ್ಮ ಊರುಗಳಿಗೆ ಕಳುಹಿಸಿಸುವ ಪ್ರಕ್ರಿಯೆ ಆರಂಭವಾಗಿದೆ. ಸೋಮವಾರ ಬೆಳಗ್ಗಿನಿಂದ ಮಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಎದುರು ಹೊರ ರಾಜ್ಯ ಗಳಿಗೆ ತೆರಳುವ ಕಾರ್ಮಿಕರು ತಮ್ಮ ಹೆಸರು ನೋಂದಣಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಸರಕಾರದ ಮಾರ್ಗಸೂಚಿಯಂತೆ ಹೊರ ರಾಜ್ಯ ಗಳಿಗೆ ತೆರಳುವ ಕಾರ್ಮಿಕರು ಅಗತ್ಯ ದಾಖಲೆ ನೀಡಿ ಹೆಸರು ನೋಂದಾಯಿಸಿದ ಬಳಿಕ ಅವರನ್ನು ಕಳುಹಿಸಿ ಕೊಡುವ ಪ್ರಕ್ರಿಯೆ ನಡೆಯಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
MUST WATCH
ಹೊಸ ಸೇರ್ಪಡೆ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.