ಮಂಗಳೂರು: ಅಸ್ವಸ್ಥಗೊಂಡಿದ್ದ ಬಹುತೇಕ ವಿದ್ಯಾರ್ಥಿಗಳು ಗುಣಮುಖ
Team Udayavani, Feb 7, 2023, 5:26 PM IST
ಸೋಮವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವಿದ್ಯಾರ್ಥಿಗಳು
ಮಂಗಳೂರು: ಫುಡ್ ಪಾಯ್ಸನ್ ನಿಂದಾಗಿ ಅಸ್ವಸ್ಥಗೊಂಡಿದ್ದ ನಗರದ ಹೊರವಲಯದಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ನ ಬಹುತೇಕ ವಿದ್ಯಾರ್ಥಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಸೋಮವಾರ ಒಟ್ಟು 116 ಮಂದಿ ವಾಂತಿ ಬೇಧಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳವಾರ ಮತ್ತೆ 13 ಮಂದಿ ವಿದ್ಯಾರ್ಥಿನಿಯರಲ್ಲಿ ಹೊಟ್ಟೆನೋವು, ಜ್ವರದ ಲಕ್ಷಣ ಕಂಡುಬಂದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಒಟ್ಟು 38 ಮಂದಿ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿದ್ದಾರೆ. ಉಳಿದ ಎಲ್ಲ ವಿದ್ಯಾರ್ಥಿಗಳು ಬಿಡುಗಡೆಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದ ಎಲ್ಲ ಬ್ರಾಹ್ಮಣರು ಒಂದೇ..; ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ತಿರುಗೇಟು
ಹಾಸ್ಟೆಲ್ ನಲ್ಲಿ ಒಟ್ಟು 782 ವಿದ್ಯಾರ್ಥಿಗಳಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಹಾಸ್ಟೆಲ್ ನಲ್ಲಿ ತಜ್ಞ ವೈದ್ಯರ ತಂಡ ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
ಜಿಲ್ಲೆಯಲ್ಲಿ 60 ಚೆಕ್ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು
ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ