ಮಂಗಳೂರು- ಮುಂಬಯಿ ವಿಮಾನ ಯಾನ ಸಂಖ್ಯೆಯಲ್ಲಿ ಇಳಿಕೆ

ಉಭಯ ಜಿಲ್ಲೆಗಳ ಪ್ರಯಾಣಿಕರಿಗೆ ದುಪಟ್ಟು ದರದ ಪೆಟ್ಟು

Team Udayavani, Oct 28, 2019, 9:35 PM IST

flight

ಬಜಪೆ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುವ ಯಾನಿಗಳ ಸಂಖ್ಯೆ ವರ್ಷದಿಂದ ವರ್ಷ ಹೆಚ್ಚಳವಾಗುತ್ತಿದೆ. ಬಸ್‌, ರೈಲು ಯಾನದ ಬದಲು ವಿಮಾನಯಾನಕ್ಕೆ ಹೆಚ್ಚಿನ ಒಲವು ತೋರಿಸುವುದು ಇದಕ್ಕೆ ಕಾರಣವಿರಬಹುದು. ಆದರೆ ಇದೀಗ ಯಾನ ಸಂಖ್ಯೆಯಲ್ಲಿ ಇಳಿತ ಮತ್ತು ದುಪ್ಪಟ್ಟು ದರದಿಂದಾಗಿ ವಿಮಾನದ ಮೂಲಕ ಪ್ರಯಾಣಿಸಲು ಯಾನಿಗಳು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಮಂಗಳೂರು ವಿಮಾನ ನಿಲ್ದಾಣದ ಪ್ರಗತಿಗೆ ದೊಡ್ಡ ಪೆಟ್ಟು ಬೀಳುವ ಸಾಧ್ಯತೆಯಿದೆ.

ಕಳೆದ ವರ್ಷ ಮಂಗಳೂರು -ಮುಂಬಯಿ ನಡುವೆ ಏರ್‌ ಇಂಡಿಯಾ ಸಂಸ್ಥೆಯ ಒಂದು, ಜೆಟ್‌ ಏರ್‌ವೆàಸ್‌ನ ಮೂರು, ಇಂಡಿಗೊ ಸಂಸ್ಥೆಯ ಎರಡು ಹಾಗೂ  ಸ್ಪೈಸ್ ಜೆಟ್‌ನ ಒಂದು ಸಹಿತ ಒಟ್ಟು ಏಳು ಯಾನ ದಿನಂಪ್ರತಿ ಕೈಗೊಳ್ಳುತ್ತಿತ್ತು. ಆಗ 5ರಿಂದ 6 ಸಾವಿರ ರೂ. ದರ ವಿಧಿಸಲಾಗುತ್ತಿತ್ತು.

ಏಳರಿಂದ ಮೂರಕ್ಕೆ ಇಳಿಕೆ, ದರ ದುಪ್ಪಟ್ಟು
ಈಗ ಏರ್‌ ಇಂಡಿಯಾ ಸಂಸ್ಥೆಯು ಮುಂಬಯಿಗೆ ನೇರ ಯಾನವನ್ನು ಕೈಬಿಟ್ಟಿದೆ. ಬದಲಾಗಿ ವಯಾ ಕೊಯಮುತ್ತೂರು ಆಗಿ ಮುಂಬಯಿಗೆ ಯಾನ ಕೈಗೊಳ್ಳುತ್ತಿದೆ. ಇಂಡಿಗೊ ಸಂಸ್ಥೆಯ ಎರಡು ಮತ್ತು ಸ್ಪೈಸ್ ಜೆಟ್‌ನ ಒಂದು ವಿಮಾನ ಮುಂಬಯಿಗೆ ನೇರ ಯಾನ ಕೈಗೊಳ್ಳುತ್ತಿದೆ. ಇದರ ಜತೆ ದರದಲ್ಲಿ ಏರಿಕೆ ಮಾಡಿರುವುದು ಪ್ರಯಾಣಿಕರಿಗೆ ಆಘಾತವಾಗಿದೆ. ಸದ್ಯ 15 ಸಾವಿರದಿಂದ 16 ಸಾವಿರ ರೂ. ದರ ತಲುಪಿದೆ. ದುಪ್ಪಟ್ಟು ದರ ನೀಡಿದರೂ ಅಗತ್ಯವಿದ್ದ ಸಮಯದಲ್ಲಿ ಮುಂಬಯಿಗೆ ಪ್ರಯಾಣಿಸಲು ಸಾಕಷ್ಟು ವಿಮಾನಯಾನ ವ್ಯವಸ್ಥೆ ಇಲ್ಲದ ಕಾರಣ ಪ್ರಯಾಣಿಕರು ಸುತ್ತು ಬಳಸಿ ಹೋಗಬೇಕಾದ ಅನಿವಾರ್ಯತೆಯಿದೆ. ಇದು ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಏರ್‌ ಇಂಡಿಯಾ ಸಂಸ್ಥೆ ಗಮನಿಸಲಿ
ನಷ್ಟದಲ್ಲಿರುವ ಏರ್‌ ಇಂಡಿಯಾ ಸಂಸ್ಥೆಯು ಮುಂಬಯಿಗೆ ನೇರ ಯಾನ ಕೈಗೊಳ್ಳುವ ಬದಲು ವಯಾ ಕೊಯಮುತ್ತೂರು ಆಗಿ ಯಾನ ಮಾಡುತ್ತಿದೆ. ಇದರಿಂದ ಸಮಯವೂ ವ್ಯರ್ಥ ಮತ್ತು ಪ್ರಯಾಣಿಕರ ಸಂಖ್ಯೆ ಇಳಿಮುಖವಾಗುತ್ತಿದೆ. ನೇರ ಯಾನದ ವೇಳೆ ಭರ್ತಿಯಾಗುತ್ತಿದ್ದ ವಿಮಾನದಲ್ಲಿ ಈಗ ಅರ್ಧದಷ್ಟೂ ಜನ ಇರುವುದಿಲ್ಲ.

ಮಂಗಳೂರು -ಮುಂಬಯಿ ನಡುವೆ ನೇರ ಯಾನ ಕೈಗೊಂಡರೆ ಹೆಚ್ಚಿನ ಪ್ರಯಾಣಿಕರು ಪ್ರಯಾಣಿಸಬಹುದು. ಆಗ ದರದಲ್ಲಿಯೂ ಕಡಿತವಾಗುವ ಸಾಧ್ಯತೆಯಿದೆ. ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿಯಲ್ಲಿ ವಿಮಾನಯಾನ ಸಂಸ್ಥೆಯವರು ಕ್ರಮಕೈಗೊಳ್ಳಲಿ ಎಂಬುದು ಪ್ರಯಾಣಿಕರ ನಿರೀಕ್ಷೆಯಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.