ಮಹಾನಗರ ಪಾಲಿಕೆ: “ಇ ಖಾತಾ’ ಚುರುಕು; ಸಮಸ್ಯೆಗಳೂ ಅಧಿಕ !


Team Udayavani, Oct 16, 2020, 4:16 AM IST

 ಮಹಾನಗರ ಪಾಲಿಕೆ: “ಇ ಖಾತಾ’ ಚುರುಕು; ಸಮಸ್ಯೆಗಳೂ ಅಧಿಕ !

ಮಹಾನಗರ: ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲಕರ ಅಧಿಕೃತ ಹಾಗೂ ಅನಧಿಕೃತವಲ್ಲದ ನಿವೇಶನ, ಕಟ್ಟಡಗಳ ಆಸ್ತಿ ಹಕ್ಕಿಗೆ ಸಂಬಂಧಿಸಿದ ಸಮಗ್ರ ಮಾಹಿತಿ ವಿವರವನ್ನು ದಾಖಲಿಸಿದ ಇ ಖಾತಾ ಯೋಜನೆಗೆ ವೇಗ ದೊರಕಿದೆ. ಆದರೆ, ಇ ಖಾತಾ ಪಡೆಯಲು ಪಾಲಿಕೆಯಲ್ಲಿ ಸಮಸ್ಯೆಗಳ ಸವಾಲು ಕೂಡ ಅಧಿಕವಿದೆ!

ಪಾಲಿಕೆಯ ಮಾಹಿತಿ ಪ್ರಕಾರ ಇಲ್ಲಿಯವರೆಗೆ 1,716 ಆಸ್ತಿಗಳಿಗೆ ಇ-ಖಾತಾ ನೀಡಲಾಗಿದ್ದು, ರಾಜ್ಯದಲ್ಲಿಯೇ ಇದು ಗಮನೀಯ ಸಾಧನೆ ಎನ್ನಲಾಗುತ್ತಿದೆ. ಆದರೆ ಇ ಖಾತಾ ಪಡೆಯಲು ಸಾರ್ವಜನಿಕರಿಗೆ ಕೆಲವು ಸಮಸ್ಯೆಗಳು, ತಾಂತ್ರಿಕವಾದ ಸವಾಲುಗಳು ಎದುರಾಗುತ್ತಿದೆ.

“ಪ್ರಾಪರ್ಟಿ ಐಡಿ’ಯದ್ದೇ ಗಡಿಬಿಡಿ
ಪಾಲಿಕೆ ವ್ಯಾಪ್ತಿಯ ಪ್ರತೀ ಭೂಮಿಯನ್ನು ಪಾಲಿಕೆಯು ಸರ್ವೇ ಮಾಡಿ ನಿಗದಿತ ಐಡಿಯನ್ನು ನೀಡಲಾಗುತ್ತದೆ. 2002ರಲ್ಲಿ ಕೇಂದ್ರ ಸರಕಾರದ ನಿರ್ಮಲ ನಗರ ಯೋಜನೆಯಲ್ಲಿ ಐಡಿ ನೀಡುವ ಪ್ರಕ್ರಿಯೆ ಆರಂಭವಾಯಿತಾದರೂ ಇದು ಶೇ. 50ರಷ್ಟು ಪ್ರದೇಶಕ್ಕೆ ಮಾತ್ರ ಆಗಿದೆ. ಉಳಿದ ಭೂಮಿಗೆ ಪ್ರಾಪರ್ಟಿ ಐಡಿ ಆಗಿಲ್ಲ. ಸದ್ಯ ಇ-ಖಾತಾ ಮಾಡುವ ವೇಳೆಯಲ್ಲಿ ಪ್ರಾಪರ್ಟಿ ಐಡಿ ಕೂಡ ನಮೂದು ಮಾಡಬೇಕಾದ ಹಿನ್ನೆಲೆಯಲ್ಲಿ ಬಹುತೇಕ ಮಂದಿಗೆ ಈ ಐಡಿ ಇಲ್ಲದೆ ಸಮಸ್ಯೆ ಆಗಿದೆ. ಸದ್ಯ ಐಡಿ ಇಲ್ಲದವರಿಗೆ ಹತ್ತಿರದ ಭೂಮಿಯ ಐಡಿಗೆ ಸರಿ ಹೊಂದುವ ಹೊಸ ಐಡಿ ಹಾಕಲಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಮತ್ತೂಂದು ಸಮಸ್ಯೆಗೆ ಕಾರಣವಾಗಲೂಬಹುದು ಎಂಬ ಆತಂಕವೂ ಇದೆ. ಇ ಖಾತಾಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಅದು ಅನುಮೋದನೆಯಾಗಿ ಇ ಖಾತಾ ದೊರೆಯಲು ಕೆಲವು ಸಮಯ ಕಾಯಬೇಕಾಗುತ್ತದೆ. ಹೀಗಾಗಿ ಪಾಲಿಕೆಗೆ ಅಲೆದಾಡುವಂತಾಗುವುದು ಎಂಬ ದೂರು ಕೂಡ ಇದೆ.

ಈ ಎಲ್ಲ ಸಮಸ್ಯೆಗಳ ಬಗ್ಗೆ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್‌ ಅವರು ಇತ್ತೀಚೆಗೆ ಪಾಲಿಕೆಯಲ್ಲಿ ಸಭೆ ನಡೆಸಿ ಸಮಸ್ಯೆ ಪರಿಹಾರದ ಬಗ್ಗೆ ಭರವಸೆ ನೀಡಿರುವುದು ಗಮನೀಯ ಸಂಗತಿ.

“ಐಡಿ’ಗಾಗಿ ಆ್ಯಪ್‌!
ನಗರಾಭಿವೃದ್ಧಿ ಇಲಾಖೆಯು “ಆ್ಯಪ್‌’ ಜಾರಿಗೆ ಮುಂದಾಗಿದೆ. ಇದರ ಪ್ರಕಾರ ಕಂದಾಯ ಇಲಾಖೆಯ ಬಿಲ್‌ ಕಲೆಕ್ಟರ್‌ ಇ-ಖಾತಾಕ್ಕೆ ಅರ್ಜಿ ಹಾಕಿದವರ ಜಾಗಕ್ಕೆ ಹೋಗಿ ಅಲ್ಲಿ ಆ್ಯಪ್‌ ಆನ್‌ ಮಾಡಿದಾಗ ಸ್ವಯಂಚಾಲಿತವಾಗಿಯೇ ಹೊಸ ಪಾಪರ್ಟಿ ಐಡಿ ಸಿಗಲಿದೆ. ಸದ್ಯ ಈ ಪ್ರಕ್ರಿಯೆ ಚಿಂತನೆಯ ಹಂತದಲ್ಲಿದೆ.

ಏನಿದು ಇ ಖಾತಾ?
ಗ್ರಾಮಾಂತರ ಭಾಗದಲ್ಲಿ ಆರ್‌ಟಿಸಿ ಇದ್ದ ಹಾಗೆ, ಪಾಲಿಕೆ ವ್ಯಾಪ್ತಿಯಲ್ಲಿ ಈ ಹಿಂದೆ ಖಾತಾ ನೀಡಲಾಗುತ್ತಿತ್ತು. ಬಳಿಕ ಕರ್ನಾಟಕ ಮುನಿಸಿಪಲ್‌ ಡಾಟಾ ಸೊಸೈಟಿ, ರಾಷ್ಟ್ರೀಯ ಸೂಚ್ಯಂಕ ಕೇಂದ್ರದ ಸಹಯೋಗದೊಂದಿಗೆ ಆಸ್ತಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಇ-ಖಾತಾ ಅನುಷ್ಠಾನಿಸಲಾಗಿದೆ. ತಂತ್ರಾಂಶದ ಮೂಲಕ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತವಲ್ಲದ, ಅಕ್ರಮ ಆಸ್ತಿಗಳ ಮಾಹಿತಿಯನ್ನು ದಾಖಲಿಸಲು/ತಿದ್ದುಪಡಿ ಮಾಡಲು ಆಸ್ತಿಗಳ ಮಾಲಕತ್ವ ಹಕ್ಕು ವರ್ಗಾವಣೆ ಮಾಡಲು, ಆಸ್ತಿ ತೆರಿ ಗೆಯ ನಕಲನ್ನು ಡಿಜಿಟಲ್‌ ಸಹಿಯೊಂದಿಗೆ ತಂತ್ರಾಂಶದಿಂದ ಪಡೆಯಲು ಅವಕಾಶ ನೀಡ ಲಾಗಿದೆ. ಇದರಂತೆ ಮಂಗಳೂರಿನಲ್ಲಿ ಇಲ್ಲಿಯವರೆಗೆ 1,716 ಆಸ್ತಿಗಳಿಗೆ ಇ-ಖಾತಾ ನೀಡಲಾಗಿದೆ.

ಇ-ಖಾತಾ ನೋಂದಣಿಗೆ ವೇಗ
ಮಂಗಳೂರಿನಲ್ಲಿ ಇ-ಖಾತಾ ನೋಂದಣಿ ವೇಗ ದೊರಕಿದೆ. ಬೆಂಗಳೂರನ್ನು ಹೊರತುಪಡಿಸಿ ಮಂಗಳೂರಿನಲ್ಲಿಯೇ ಇ-ಖಾತಾ ನೋಂದಣಿ ಆಗುತ್ತಿದೆ. ಜಾಗದ ಕುರಿತ ಪೂರ್ಣ ದಾಖಲಾತಿಯನ್ನು ನೀಡುವ ಮುಖೇನ ಇ-ಖಾತಾ ಮಾಡಿಸಲು ಅವಕಾಶ ನೀಡಲಾಗಿದೆ. ಇ-ಖಾತಾ ಮಾಡಿಸುವಲ್ಲಿ ಜನರಿಗೆ ಸಮಸ್ಯೆ ಆಗದಂತೆ ಪಾಲಿಕೆಯಲ್ಲಿ ವ್ಯವಸ್ಥೆ ಮಾಡಲಾಗಿದೆ.
-ಸಂತೋಷ್‌ ಕುಮಾರ್‌, ಉಪ ಆಯುಕ್ತರು, ಮನಪಾ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.