ಮನಪಾ ಚುನಾವಣೆ: ಇಂದು ಮತ ಎಣಿಕೆ; ಮಧ್ಯಾಹ್ನದೊಳಗೆ ಫಲಿತಾಂಶ ಸಾಧ್ಯತೆ
Team Udayavani, Nov 14, 2019, 4:55 AM IST
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಚುನಾವಣೆಯ ಮತ ಎಣಿಕೆ ಗುರುವಾರ ನಗರದ ರೊಸಾರಿಯೋ ಶಾಲೆಯಲ್ಲಿ ನಡೆಯಲಿದ್ದು, ದ.ಕ. ಜಿಲ್ಲಾಡಳಿತದಿಂದ ಸರ್ವ ಸಿದ್ಧತೆ ಕೈಗೊಳ್ಳಲಾಗಿದೆ.
ಕಾಂಗ್ರೆಸ್ನ 60, ಬಿಜೆಪಿಯ 60, ಜೆಡಿಎಸ್ನ 12, ಸಿಪಿಎಂನ 7, ಸಿಪಿಐಯ 1, ಎಸ್ಡಿಪಿಐಯ 6, ಜೆಡಿಯುನ 2, ಡಬ್ಲೂಪಿಐಯ 3, ಕರ್ನಾಟಕ ರಾಷ್ಟ್ರಸಮಿತಿಯ 2 ಹಾಗೂ ಪಕ್ಷೇತರರು 27 ಸೇರಿದಂತೆ 180 ಅಭ್ಯರ್ಥಿಗಳು ಕಣದಲ್ಲಿದ್ದು, ಮತದಾರರ ತೀರ್ಪು ಯಾರ ಪರ ಎಂಬ ಕುತೂಹಲಕ್ಕೆ ಗುರುವಾರ ಉತ್ತರ ದೊರೆಯಲಿದೆ.
21 ವಾರ್ಡ್ಗಳಲ್ಲಿ ನೇರ ಸ್ಪರ್ಧೆ
(ಕಾಂಗ್ರೆಸ್-ಬಿಜೆಪಿ), 24 ವಾರ್ಡ್ಗಳಲ್ಲಿ ತ್ರಿಕೋನ ಸ್ಪರ್ಧೆ, 9 ವಾರ್ಡ್ಗಳಲ್ಲಿ ಚತುಷ್ಕೋನ ಸ್ಪರ್ಧೆ, 6 ಕ್ಷೇತ್ರಗಳಲ್ಲಿ ಪಂಚಕೋನ ಸ್ಪರ್ಧೆ ನಡೆದಿದೆ. ಗುರುವಾರ ಬೆಳಗ್ಗೆ 7.45ಕ್ಕೆ ಅಭ್ಯರ್ಥಿ/ಚುನಾವಣ ಏಜೆಂಟರ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರವು ಮಾಡಲಾಗುತ್ತದೆ. 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. 53 ಮೇಲ್ವಿಚಾರಕರು, 53 ಎಣಿಕೆ ಸಹಾಯಕರು ಸೇರಿದಂತೆ 183 ಸಿಬಂದಿ ನಿಯೋಜನೆ ಮಾಡಲಾಗಿದೆ. ಡಿಸಿ ಸಿಂಧೂ ಬಿ. ರೂಪೇಶ್ ಮತ ಎಣಿಕೆ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದರು. ಮತ ಎಣಿಕೆ ಕೇಂದ್ರ ಸುತ್ತಮುತ್ತ ತೀವ್ರ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ನಿಷೇಧಾಜ್ಞೆ
ನ. 14ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಪಾಂಡೇಶ್ವರ ರೊಸಾರಿಯೋ ಶಾಲೆಯ ಮತ ಎಣಿಕೆ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144ರ ಅನ್ವಯ ನಿರ್ಬಂಧಕ ಆಜ್ಞೆಯನ್ನು ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ