
ಮಂಗಳೂರು: ಸರಕಾರದಿಂದ ಚಿತ್ರಾಪುರ ಕ್ಷೇತ್ರದ ಜೀರ್ಣೋದ್ಧಾರಕ್ಕೆ 2ಕೋಟಿ ರೂ.ಬಿಡುಗಡೆ
Team Udayavani, Sep 22, 2022, 10:54 AM IST

ಮಂಗಳೂರು: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಪ್ರಯುಕ್ತ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ. ಭರತ್ ಶೆಟ್ಟಿ ವೈ ಇವರ ನೇತೃತ್ವದಲ್ಲಿ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ನಿಯೋಗ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು.
ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ 2 ಕೋಟಿ ರೂಪಾಯಿ ಮಂಜೂರಾತಿಗೆ ಅನುಮತಿ ನೀಡಿದರು.
ಈ ಸಂದರ್ಭ ಸಮಿತಿ ಸಂಚಾಲಕರಾದ ಮತ್ಸ್ಯರಾಜ್ ಉಮೇಶ್ ಟಿ.ಕರ್ಕೇರ, ಪ್ರ.ಕಾ. ಗಣೇಶ್ ಹೊಸಬೆಟ್ಟು, ಕೃಷ್ಣಶೆಟ್ಟಿ, ಪುರುಷೋತ್ತಮ್ ಎನ್.ಆರ್ ಮತ್ತಿತರ ಪದಾಧಿಕಾರಿಗಳು ನಿಯೋಗದಲ್ಲಿದ್ದರು.
ಸರಕಾರದಿಂದ ಅನುದಾನ ಒದಗಿಸಿದ ಮುಖ್ಯಮಂತ್ರಿಗಳಿಗೆ, ಸಂಸದರಿಗೆ, ಶಾಸಕರಿಗೆ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಕೃತಜ್ಞತೆ ಅರ್ಪಿಸಲಾಯಿತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
