94 ಕೋ.ರೂ. ವೆಚ್ಚದಲ್ಲಿ ಮಂಗಳೂರು ಹಳೆ ಬಂದರಿಗೆ ಕಾಯಕಲ್ಪ

ಕಾಮಗಾರಿ ಪ್ರಾರಂಭಕ್ಕೆ ಶೀಘ್ರ ಹಸುರು ನಿಶಾನೆ ನಿರೀಕ್ಷೆ

Team Udayavani, Jun 8, 2020, 11:40 AM IST

94 ಕೋ.ರೂ. ವೆಚ್ಚದಲ್ಲಿ ಮಂಗಳೂರು ಹಳೆ ಬಂದರಿಗೆ ಕಾಯಕಲ್ಪ

ಪ್ರಸ್ತುತ ಇರುವ ಹಳೆ ಬಂದರು ಪ್ರದೇಶ.

ಮಂಗಳೂರು: ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡು ಸರಕು ನಿರ್ವಹಣೆಯಲ್ಲಿ ಉಚ್ಛ್ರಯ ಸ್ಥಿತಿಯಲ್ಲಿದ್ದು, ಅನಂತರ ನಿರ್ಲಕ್ಷ್ಯಕ್ಕೊಳಗಾಗಿರುವ ಮಂಗಳೂರಿನ ಹಳೆ ಬಂದರಿಗೆ (ವಾಣಿಜ್ಯ) ಹೊಸ ರೂಪ ನೀಡಲು ರೂಪುರೇಷೆ ಸಿದ್ಧವಾಗಿದೆ. ಸಾಗರ ಮಾಲಾ ಯೋಜನೆಯಡಿ 94 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಟೆಂಡರ್‌ ಪ್ರಕ್ರಿಯೆ ಈಗ ಬಹುತೇಕ ಪೂರ್ಣಗೊಂಡಿದ್ದು ಫೈನಾನ್ಶಿಯಲ್‌ ಬಿಡ್‌ ಹಾಗೂ ಕಾರ್ಯಾದೇಶ ಮಾತ್ರ ಬಾಕಿಯಿದೆ. ಬಂದರು ಪ್ರದೇಶ ವ್ಯಾಪ್ತಿಯ ಕಸಬಾ ಬೆಂಗ್ರೆ ಭಾಗದಲ್ಲಿ 65 ಕೋ.ರೂ. ವೆಚ್ಚದಲ್ಲಿ 350 ಮೀಟರ್‌ ವಿಸ್ತಾರದ ಬರ್ತ್‌, 2 ಗೋದಾಮುಗಳು, ಒಂದು ಓವರ್‌ಹೆಡ್‌ ಟ್ಯಾಂಕ್‌, 400 ಮೀಟರ್‌ ಒಳರಸ್ತೆಗಳ ನಿರ್ಮಾಣ-ಅಭಿವೃದ್ಧಿ, ಶೌಚಾಲಯ ಇತ್ಯಾದಿ ಸೌಕರ್ಯ ಒದಗಿಸಲಾಗುವುದು. 29 ಕೋ.ರೂ. ವೆಚ್ಚದಲ್ಲಿ ಡ್ರೆಜ್ಜಿಂಗ್‌ ನಡೆಯಲಿದೆ.

ವಹಿವಾಟಿಗೆ ಬೇಡಿಕೆ ಹೆಚ್ಚಳ
ಹಲವು ಅನನುಕೂಲಗಳ ನಡು ವೆಯೂ ಹಳೆ ಬಂದರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಸರಕು ಸಾಗಾಟ ವ್ಯವಹಾರ ವೃದ್ಧಿಯಾಗುತ್ತಲೇ ಇದೆ. 2011-12ರಲ್ಲಿ ವಾರ್ಷಿಕ 87 ಸಾವಿರ ಮೆಟ್ರಿಕ್‌ ಟನ್‌ನಷ್ಟಿದ್ದ ವ್ಯವಹಾರ 2017-18ರಲ್ಲಿ ವರ್ಷಕ್ಕೆ 1.5 ಲಕ್ಷ ಮೆಟ್ರಿಕ್‌ ಟನ್‌ಗೆ ಏರಿದೆ. ಮುಂದಿನ 5 ವರ್ಷಗಳಿಗೆ 5 ಲಕ್ಷ ಮೆಟ್ರಿಕ್‌ ಟನ್‌ ಹಾಗೂ ಮುಂದಿನ 10 ವರ್ಷಗಳಿಗೆ 8 ಲಕ್ಷ ಮೆಟ್ರಿಕ್‌ ಟನ್‌ ವ್ಯವಹಾರದ ಗುರಿ ಹೊಂದಲಾಗಿದೆ.

ಈಗ ಇರುವ ತೊಡಕು
ಅಳಿವೆ ಬಾಗಿಲಿನಲ್ಲಿ (ಫ‌ಲ್ಗುಣಿ- ಗುರುಪುರ ನದಿ ಪ್ರದೇಶ) ಹೂಳಿನಿಂದಾಗಿ ಸರಕು ನೌಕೆಗಳ ಸಂಚಾರಕ್ಕೆ ಭಾರೀ ತೊಡಕಾಗಿದೆ. ಹಳೆ ಬಂದರು 7 ಎಕರೆಗೂ ಅಧಿಕ ಪ್ರದೇಶದಲ್ಲಿದೆ; ಆದರೆ ಆಳ 4 ಮೀಟರ್‌ಗಳಷ್ಟು ಮಾತ್ರ. ಉತ್ತರ ಧಕ್ಕೆಯ ಆಳ 3 ಮೀಟರ್‌ ಕೂಡ ಇಲ್ಲ. ಒಂದು ವೇಳೆ 7 ಮೀಟರ್‌ನಷ್ಟು ಆಳವಾದರೆ ಎನ್‌ಎಂಪಿಟಿಗೆ (ನವಮಂಗಳೂರು ಬಂದರು) ಬರುವಷ್ಟೇ ಸಾಮರ್ಥ್ಯದ ಹಡಗು  ಗಳು ಇಲ್ಲಿಗೂ ಬರಬಹುದು. ಪ್ರಸ್ತುತ ಲಕ್ಷದ್ವೀಪದೊಂದಿಗೆ ಮಾತ್ರ ಸರಕು ಸಾಗಾಟ ವ್ಯವಹಾರ ನಡೆಯುತ್ತಿದೆ. 2,000ದಿಂದ 2,500 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಯಾಂತ್ರೀಕೃತ ನೌಕೆಗಳು ಮಾತ್ರ ಸಂಚರಿಸುತ್ತಿವೆ.

ಈ ಬಂದರು ಅಭಿವೃದ್ಧಿಯಾದರೆ ಪ್ರವಾಸಿ ಹಡಗುಗಳೂ ಆಗಮಿಸ ಬಹುದಾಗಿದ್ದು, ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾಗಲಿದೆ. ಲಕ್ಷದ್ವೀ ಪಕ್ಕೆ ಇಲ್ಲಿಂದ ಪ್ರಯಾಣಿಕರ ಹಡಗು ಸಂಚರಿಸುತ್ತದೆಯಾದರೂ ಮಂಗಳೂರಿನಿಂದ ಅಲ್ಲಿಗೆ ಹೋಗಲು ಅವಕಾಶವಿಲ್ಲ. ಕೊಚ್ಚಿಯಿಂದಲೇ ಹೋಗಬೇಕು. ಇಲ್ಲಿಂದ ಅವಕಾಶ ನೀಡಿದರೆ ಅದು ಕೂಡ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾದೀತು.

ರಸ್ತೆ ಸಂಪರ್ಕ ಸವಾಲು
ಹಳೆ ಬಂದರು ಪ್ರದೇಶಕ್ಕೆ ಸರಕು ಕೊಂಡೊಯ್ಯುವ ವಾಹನಗಳು ಮಂಗ ಳೂರು ನಗರದ ನಡುವಿನಿಂದಲೇ ಸಂಚರಿಸುವ ಅನಿವಾರ್ಯ ಇದೆ. ತಣ್ಣೀರುಬಾವಿ-ಬೆಂಗ್ರೆ ರಸ್ತೆ ಅಭಿವೃದ್ಧಿ ಯಾದರೆ ಅದನ್ನು ಬದಲಿ ರಸ್ತೆಯಾಗಿ ಬಳಸಬಹುದು.

ಗೋವಾ, ಗುಜರಾತ್‌ ಹಡಗು ಸಂಚಾರ ಪುನರಾರಂಭ ನಿರೀಕ್ಷೆ
ಹಲವು ವರ್ಷಗಳ ಹಿಂದೆ 4,500ರಿಂದ 5,000 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಸರಕು ಹಡಗುಗಳು ಗುಜರಾತ್‌ನಿಂದ ಸೋಡಾ ಪುಡಿ ಮೊದಲಾದ ಸರಕು ಹೊತ್ತು ಬರುತ್ತಿದ್ದವು. ಗೋವಾದಿಂದ ಪ್ರಯಾಣಿಕ ಹಡಗು ಬರುತ್ತಿತ್ತು. ಒಂದು ವೇಳೆ ಬಂದರಿನ ಸಮಗ್ರ ಅಭಿವೃದ್ಧಿಯಾದರೆ ಆ ರಾಜ್ಯಗಳ ಹಡಗುಗಳು ಮತ್ತೆ ತಮ್ಮ ಸಂಚಾರ-ವ್ಯವಹಾರ ಆರಂಭಿಸಬಹುದು.

ಹಳೆ ಬಂದರು ಅಭಿವೃದ್ಧಿಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು ಫೈನಾನ್ಶಿಯಲ್‌ ಬಿಡ್‌ ಸರಕಾರದ ಮಟ್ಟದಲ್ಲಿ ನಡೆಯಲಿದೆ. ಅನಂತರ ಕಾರ್ಯಾದೇಶ ನೀಡಲಾಗುತ್ತದೆ. ಲಾಕ್‌ಡೌನ್‌ ಕಾರಣ ಪ್ರಕ್ರಿಯೆ ನಿಧಾನವಾಗಿತ್ತು. ಶೀಘ್ರ ಕಾರ್ಯಾ ದೇಶ ನೀಡುವ ನಿರೀಕ್ಷೆ ಇದೆ.
–  ಮಂಚೇಗೌಡ, ಕಾರ್ಯನಿರ್ವಾಹಕ ಎಂಜಿನಿಯರ್‌,  ಬಂದರು, ಒಳನಾಡು ಜಲ ಸಾರಿಗೆ ಇಲಾಖೆ

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.