ಪಡೀಲ್‌ ಅಂಡರ್‌ಪಾಸ್‌ ಕಾಮಗಾರಿ ಮುಗಿಯುತ್ತಿದ್ದಂತೆ ರಸ್ತೆಯೇ ಕುಸಿತ !


Team Udayavani, Jun 10, 2020, 5:24 PM IST

10-June-24

ಪಡೀಲ್‌ನ ರೈಲ್ವೇ ಅಂಡರ್‌ಪಾಸ್‌ನಲ್ಲಿ ನಿರ್ಮಾಣವಾದ ಹೊಂಡ

ಮಹಾನಗರ: ರಾಷ್ಟ್ರೀಯ ಹೆದ್ದಾರಿ ಪಡೀಲ್‌ನಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ಧಗೊಳ್ಳುತ್ತಿದ್ದ ಎರಡನೇ ರೆಲ್ವೇ ಅಂಡರ್‌ಪಾಸ್‌ನ ಮಧ್ಯಭಾಗದಲ್ಲಿಯೇ ಧಿಡೀರ್‌ ಕುಸಿತ ಕಾಣಿಸಿಕೊಂಡಿದ್ದು, ಇದೀಗ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದೆ. ಉದ್ಘಾಟನೆ ಮೊದಲೇ ಈ ಲೋಪ ಗೋಚರಿಸಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ ಎನ್ನಬಹುದು.

ಕಳೆದ ಎರಡು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದ್ದ ಕಾಮಗಾರಿ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳುವ ಹಂತದಲ್ಲಿತ್ತು. ಕೊನೆಯ ಹಂತದಲ್ಲಿ ರೋಲರ್‌ನಲ್ಲಿ ಡಾಮರು ಸಮತಟ್ಟುಗೊಳಿಸುವ ವೇಳೆ ವೇಳೆ ಡಾಮರು ರಸ್ತೆ ಕುಸಿದು ಸುಮಾರು 3 ಅಡಿ ಆಳದಷ್ಟು ದೊಡ್ಡದಾದ ಗುಂಡಿಯಾಗಿದೆ. ಈ ಅಂಡರ್‌ಪಾಸ್‌ನ ಒಳಗಡೆ ಒಳಚರಂಡಿ ಹರಿದುಹೋಗುತ್ತಿದ್ದು, ಕಾಮಗಾರಿ ನಡೆಯುವ ವೇಳೆ ವೇಳೆ ಈ ವಿಷಯ ಅರಿಯದೆ ಕಾಮಗಾರಿ ನಡೆಸಿದ್ದರಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಡಾಮರು ಕೆಲಸ ಪೂರ್ಣಗೊಂಡ ಬಳಿಕ ಕಳೆದ ಕೆಲವು ದಿನಗಳ ಹಿಂದೆ ಮಳೆಯಾಗಿದ್ದು, ಇದರಿಂದ ಮಣ್ಣು ಹದವಾಗಿತ್ತು. ಡಾಮರು ಹದಗೊಳಿಸುವ ವೇಳೆ ಒತ್ತಡ ಬಿದ್ದು ಕುಸಿತ ಉಂಟಾಗಿರಬಹುದು. ಕೆಲವು ದಿನದಲ್ಲಿಯೇ ಪಡೀಲ್‌ ಅಂಡರ್‌ಪಾಸ್‌ ಉದ್ಘಾಟನೆಯಾಗುವುದಿತ್ತು. ಆದರೆ ಇದೀಗ ಡಾಮರು ಕುಸಿತ ಉಂಟಾದ ಕಾರಣ, ಈ ಒಳಚರಂಡಿಯ ಮೂಲ ಪತ್ತೆ ಮಾಡಬೇಕಿದೆ. ಡಾಮರು ಅಗೆದು ಒಳಚರಂಡಿಗೆ ಸ್ಲ್ಯಾಬ್‌ ಅಳವಡಿಸಿ ಬಳಿಕ ಮರು ಡಾಮರು ಕಾಮಗಾರಿ ಆಗಬೇಕು. ಮಳೆಗಾಲ ಆದ ಕಾರಣ ಸದ್ಯದಲ್ಲೇ ಕಾಮಗಾರಿ ಕಷ್ಟ. ಹೀಗಿದ್ದಾಗ ಉದ್ಘಾಟನೆಗೆ ಇನ್ನೂ ಕೆಲವು ದಿನಗಳು ತಗಲುವ ನಿರೀಕ್ಷೆ ಇದೆ.

5 ಕೋಟಿ ರೂ. ಕಾಮಗಾರಿ
ರಾ.ಹೆ.75ರ ಪಡೀಲ್‌ನಲ್ಲಿ 5 ಕೋ. ರೂ. ವೆಚ್ಚದಲ್ಲಿ ಅಂಡರ್‌ಪಾಸ್‌ ನಿರ್ಮಾಣವಾಗುತ್ತಿದೆ. ಮಳೆ ನೀರು ಹರಿದು ಹೋಗುವ ಪ್ರದೇಶವಾದ್ದರಿಂದ ನೆಲಮಟ್ಟದಿಂದ ಸುಮಾರು 1.5 ಮೀ. ಎತ್ತರ ಮಣ್ಣು ಹಾಕಿ ರೈಲ್ವೇ ಇಲಾಖೆ ಸೇತುವೆ ಕಾಮಗಾರಿ ನಿರ್ವಹಿಸಿದೆ. ಭಾರತೀಯ ರೋಡ್‌ ಕಾಂಗ್ರೆಸ್‌ ನಿಯಮಾವಳಿಯಂತೆ 5.50 ಮೀ. ಎತ್ತರವಿದೆ. ಆರ್‌ಟಿಒ ನಿಯಮದಂತೆ ಕಂಟೈನರ್‌ ಸಹಿತ ಒಂದು ವಾಹನವು ಗರಿಷ್ಠ 4.8 ಮೀ. ಎತ್ತರವನ್ನು ಮಾತ್ರ ಹೊಂದಿರಬಹುದಾಗಿದೆ ಎಂಬುದು ಹೆದ್ದಾರಿ ಇಲಾಖೆಯ ಅಧಿಕಾರಿಗಳ ಲೆಕ್ಕಾಚಾರ. ಪಾದಚಾರಿಗಳಿಗೆ ಸಂಚರಿಸಲು ಅನುವಾಗುವಂತೆ ಹೊಸ ಅಂಡರ್‌ಪಾಸ್‌ನಲ್ಲಿ ಸೌಕರ್ಯವಿದೆ. ಮಳೆ ನೀರು ನಿಲ್ಲದಂತೆ, ಮಳೆಗಾಲದಲ್ಲಿ ಸಮಸ್ಯೆ ಆಗದಂತೆ ಚರಂಡಿ ಕಾಮಗಾರಿ ಮಾಡಲಾಗಿದೆ.

ಕಾಮಗಾರಿ ಯಾರು ಮಾಡಿದ್ದು ?
ಈ ಕಾಮಗಾರಿ ಮಾಡಿರುವುದು ಯಾರು ಎಂಬುವುದರ ಬಗ್ಗೆ ಹೆದ್ದಾರಿ ಇಲಾಖೆ ಮತ್ತು ರೈಲ್ವೇ ಇಲಾಖೆ ಪರಸ್ಪರ ಬೆರಳು ತೋರಿಸುವ ಮೂಲಕ ಘಟನೆಯಿಂದ ಜಾರಿಕೊಳ್ಳಲು ಪ್ರಯತ್ನಿಸುತ್ತಿದೆ. ಈ ಕಾಮಗಾರಿ ರೈಲ್ವೇ ಮಾಡಿದ್ದು ಎಂದು ಹೆದ್ದಾರಿ ಇಲಾಖೆ ಮುಖ್ಯಸ್ಥರು ಹೇಳಿದರೆ, ಹೆದ್ದಾರಿಯವರು ಮಾಡಿದ್ದು ಎಂದು ರೈಲ್ವೇ ಇಲಾಖೆಯವರು ತಿಳಿಸಿದ್ದಾರೆ. ಹೀಗಾಗಿ ಈ ಕೆಲಸ ಯಾರು ಮಾಡಿದ್ದು ಎಂಬುವುದು ಪ್ರಶ್ನೆಯಾಗಿಯೇ ಉಳಿದಿದೆ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.