ಬಹುಕೋಟಿ ಹವಾಲಾ ಜಾಲ ಭೇದಿಸಿದ ಮಂಗಳೂರು ಪೊಲೀಸರು: ಐವರ ಬಂಧನ
Team Udayavani, Mar 26, 2021, 4:10 PM IST
ಮಂಗಳೂರು: ದರೋಡೆ ಪ್ರಕರಣವೊಂದನ್ನು ತನಿಖೆ ಮಾಡಲು ಹೊರಟ ಮಂಗಳೂರು ಪೊಲೀಸರು ಬಹುಕೋಟಿ ಹವಾಲಾ ಜಾಲವನ್ನು ಪತ್ತೆ ಮಾಡಿದ್ದಾರೆ. ಮಧ್ಯ ಪ್ರಾಚ್ಯ ರಾಷ್ಟ್ರದಿಂದ ಬರುತ್ತಿದ್ದ ಹಣವನ್ನು ನಗರದಲ್ಲಿ ಸಾಗಾಟ ಮಾಡುತ್ತಿದ್ದ ಐವರನ್ನು ಬಂಧಿಸಲಾಗಿದೆ.
ಬಂಧಿತರನ್ನು ಮೊಹಮ್ಮದ್ ರಿಫಾತ್ ಅಲಿ, ಅಸ್ಫಕ್ ಯಾನೆ ಜುಟ್ಟು, ಜಾಫರ್ ಸಾಧಿಕ್, ಮೊಹಮ್ಮದ್ ಇಸ್ಮಾಯಿಲ್ ಮತ್ತು ಮಯ್ಯದಿ ಎಂದು ಗುರುತಿಸಲಾಗಿದೆ.
ಘಟನೆ ವಿವರ: ಮಾ.4ರಂದು ಅಬ್ದುಲ್ ಸಲಾಮ್ ಎಂಬಾತ ‘ತನಗೆ ದುಷ್ಕರ್ಮಿಗಳು ಚೂರಿ ತೋರಿಸಿ ಬೆದರಿಸಿ ಸ್ಕೂಟರ್ ಸುಲಿಗೆ ಮಾಡಿದ್ದಾರೆ’ ಎಂದು ಮಂಗಳೂರು ದಕ್ಷಿಣಾ ಠಾಣೆಯಲ್ಲಿ ದೂರು ನೀಡಿದ್ದರು. 10 ದಿನಗಳ ಬಳಿಕ ಅಬ್ದುಲ್ ಸಲಾಂ ಮತ್ತೆ ಠಾಣೆಗೆ ಬಂದು, ಆರೋಪಿಗಳು ತಮ್ಮ ಹಣವನ್ನೂ ಕಳವು ಮಾಡಿದ್ದಾರೆ ಎಂದು ದೂರು ನೀಡಿದ್ದರು.
ಇದನ್ನೂ ಓದಿ:ರಾಷ್ಟ್ರಪತಿ ಕೋವಿಂದ್ ಗೆ ಎದೆನೋವು, ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಪ್ರಧಾನಿ
ಪೊಲೀಸರು ಪ್ರಕರಣದ ತನಿಖೆ ನಡೆಸಿದಾಗ, ಇದು ಹವಾಲ ಹಣವಾಗಿದ್ದು, ದೂರುದಾರನು ದರೋಡೆ ನಾಟಕವಾಡಿದ್ದು ಬೆಳಕಿಗೆ ಬಂದಿದೆ. ಇದು ಬಹುಕೋಟಿ ಹವಾಲಾ ಜಾಲವಾಗಿದ್ದು ದೂರುದಾರ ಅಬ್ದುಲ್ ಸಲಾಮ್, ಹವಾಲಾ ಹಣ ಸಾಗಿಸುವ ಏಜೆಂಟ್ ಆಗಿದ್ದ. 16.20 ಲಕ್ಷ ರೂ ಹಣವನ್ನು ಅವರು ಸಾಗಾಟ ಮಾಡುತ್ತಿದ್ದರು ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಐವರನ್ನು ಬಂಧಿಸಲಾಗಿದ್ದು, ದೂರುದಾರ ಅಬ್ದುಲ್ ಸಲಾಮ್ ಸೇರಿದಂತೆ ಇನ್ನೂ 7-8 ಜನರನ್ನು ಬಂಧಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ