ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿ: ಎಲ್ಲ ಠಾಣೆಗಳಲ್ಲಿಯೂ ಯುವ ಸಮಿತಿ ಅಸ್ತಿತ್ವಕ್ಕೆ 

ಪೊಲೀಸರೊಂದಿಗೆ ಕೈಜೋಡಿಸಲು 600 ಮಂದಿ ಸಿದ್ಧ

Team Udayavani, Jun 26, 2022, 4:38 PM IST

16

ಮಹಾನಗರ: ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು, ಕಾನೂನು ಸುವ್ಯವಸ್ಥೆ ಕಾಪಾಡಲು ಪೂರಕವಾಗಿ ಪೊಲೀಸರೊಂದಿಗೆ ಕೈಜೋಡಿಸಲು ಸ್ಥಳೀಯ ಕ್ರಿಯಾಶೀಲ ಯುವಕ – ಯುವತಿಯರನ್ನೊಳಗೊಂಡ ಯುವ ಸಮಿತಿ (ಯೂತ್‌ ಕಮಿಟಿ) ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯ ಎಲ್ಲ ಪೊಲೀಸ್‌ ಠಾಣಾ ಮಟ್ಟದಲ್ಲಿಯೂ ಅಸ್ತಿತ್ವಕ್ಕೆ ಬಂದಿದೆ.

ಪ್ರತಿಯೊಂದು ಸಮಿತಿ ತಲಾ ಸುಮಾರು 30- 50 ಮಂದಿಯನ್ನು ಒಳಗೊಂಡಿದೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ 15 ಪೊಲೀಸ್‌ ಠಾಣೆಗಳಿದ್ದು ಸರಾಸರಿ 40 ಸದಸ್ಯರಂತೆ ಒಟ್ಟು ಸುಮಾರು 600 ಮಂದಿ ಸದಸ್ಯರು ಯುವ ಸಮಿತಿಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಈ ಸದಸ್ಯರೊಂದಿಗೆ ಈಗಾಗಲೇ ಪೊಲೀಸರು ಸಂವಹನ ಸಾಧಿಸಿದ್ದಾರೆ.

ಉತ್ತಮ ಹಿನ್ನೆಲೆಯವರಿಗೆ ಆದ್ಯತೆ ಸಾಮಾಜಿಕವಾಗಿ, ಸೇವಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಯುವ ಸಮಿತಿಯಲ್ಲಿ ಆದ್ಯತೆ ನೀಡಲಾಗಿದೆ. ಕ್ರಿಮಿನಲ್‌ ಹಿನ್ನೆಲೆಯುಳ್ಳವರನ್ನು ಸಮಿತಿಯಿಂದ ಸಾಧ್ಯವಾದಷ್ಟು ದೂರ ಇಡಲಾಗಿದೆ. ಯಾವುದೇ ಧರ್ಮ, ಪಕ್ಷ ಅಥವಾ ಇತರ ಯಾವುದೇ ವರ್ಗ ಭೇದ ಮಾಡದೆ ಸಮಿತಿಯನ್ನು ರಚಿಸಲಾಗಿದ್ದು, ಒಂದು ಸಮಿತಿಯಲ್ಲಿ ಸರಾಸರಿ 4ರಿಂದ 5 ಮಂದಿ ಮಹಿಳೆಯರೂ ಇದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಯುವ ಸಮಿತಿಯ ಸದಸ್ಯರೊಂದಿಗೆ ಸ್ಥಳೀಯ ಪೊಲೀಸರು ತಿಂಗಳಿಗೆ ಕನಿಷ್ಠ 2 ಬಾರಿ ಸಂಪರ್ಕ ಸಾಧಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಅಗತ್ಯ ಸಂದರ್ಭದಲ್ಲಿ ಈ ಸಮಿತಿಯ ಸದಸ್ಯರೊಂದಿಗೆ ಸಂಪರ್ಕ-ಸಂವಹನ ನಡೆಸಬಹುದಾಗಿದೆ.

ಭೌತಿಕವಾಗಿ ಯುವ ಸಮಿತಿಯ ಸದಸ್ಯರು ಒಂದೆಡೆ ಸೇರುವುದಿಲ್ಲ. ಆದರೆ ಆ ಸಮಿತಿಯ ಸದಸ್ಯರು ನೇರವಾಗಿ ಪೊಲೀಸರೊಂದಿಗೆ ಸಂಪರ್ಕ ಹೊಂದಿರುತ್ತಾರೆ.

ಸಮಿತಿ ಸದಸ್ಯರಿಗೆ ಬದ್ಧತೆ

ಕೆಲವು ಮಂದಿ ಯುವಕ-ಯುವತಿ ತಾವಾಗಿಯೇ ಒಲವು ವ್ಯಕ್ತಪಡಿಸಿ ಸಮಿತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಕೆಲವು ಮಂದಿ ಪೊಲೀಸರ ಸಲಹೆ ಮೇರೆಗೆ ಸಮಿತಿಯ ಸದಸ್ಯತ್ವ ಪಡೆದಿದ್ದಾರೆ. ಇದು ಖಾಯಂ ಸದಸ್ಯತನವಾಗಿರುವುದಿಲ್ಲ. ಗುರುತಿನ ಕಾರ್ಡ್‌ ಕೂಡ ನೀಡುವುದಿಲ್ಲ. ಸ್ಥಳೀಯವಾದ ಸಂವಹನಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಆದರೆ ಸಮಿತಿ ಸದಸ್ಯರಿಗೆ ಹೆಚ್ಚಿನ ಬದ್ಧತೆ ಇರುತ್ತದೆ. ಉತ್ತಮ ಸಮಾಜಕ್ಕಾಗಿ ಅವರು ಕೊಡುಗೆ ನೀಡಿದಂತಾಗುತ್ತದೆ ಎನ್ನುತ್ತಾರೆ ಪೊಲೀಸ್‌ ಅಧಿಕಾರಿಗಳು.

ಉತ್ತಮ ಸಂವಹನಕ್ಕೆ ಸಹಕಾರಿ:  ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯವರ ಸೂಚನೆಯಂತೆ ಎಲ್ಲ ಪೊಲೀಸ್‌ ಠಾಣಾ ಮಟ್ಟದಲ್ಲಿಯೂ ಯುವ ಸಮಿತಿಗಳನ್ನು ರಚಿಸಲಾಗಿದೆ. ಅಪರಾಧ ಹಿನ್ನೆಲೆಯುಳ್ಳವರಿಗೆ ಅವಕಾಶ ನೀಡದಂತೆ ಸೂಚಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರೊಂದಿಗೆ ಈ ಸಮಿತಿಯ ಸದಸ್ಯರು ಪರೋಕ್ಷವಾಗಿ ಕೈಜೋಡಿಸಲಿದ್ದಾರೆ. ಸಮಾಜದೊಂದಿಗಿನ ಉತ್ತಮ ಸಂವಹನ-ಸಮನ್ವಯಕ್ಕೆ ಇದು ನೆರವಾಗಲಿದೆ. –ಹರಿರಾಂ ಶಂಕರ್‌, ಡಿಸಿಪಿ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗ, ಮಂಗಳೂರು ಪೊಲೀಸ್‌

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.