ಮಾರುಕಟ್ಟೆ ಶುಲ್ಕ ಏರಿಕೆ ಖಂಡಿಸಿ ಮಂಗಳೂರು ಬಂದರು ಅಡಿಕೆ ವರ್ತಕರ ಪ್ರತಿಭಟನೆ


Team Udayavani, Dec 21, 2020, 4:18 PM IST

ಮಾರುಕಟ್ಟೆ ಶುಲ್ಕ ಏರಿಕೆ ಖಂಡಿಸಿ ಮಂಗಳೂರು ಬಂದರು ಅಡಿಕೆ ವರ್ತಕರ ಪ್ರತಿಭಟನೆ

ಸುರತ್ಕಲ್: ಸೆಸ್​ (ಮಾರುಕಟ್ಟೆ ಶುಲ್ಕ) ಏರಿಕೆ ಮಾಡಿ ಸರ್ಕಾರ ಹೊರಡಿಸಿರುವ ಆದೇಶವನ್ನು ವಿರೋಧಿಸಿ ಮಂಗಳೂರು ಬಂದರು ಅಡಿಕೆ ವರ್ತಕರು ತಮ್ಮ ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಶನಿವಾರದಿಂದ ವ್ಯಾಪಾರ ಸ್ಥಗಿತಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಶತ 35 ಪೈಸೆಯಿಂದ 1 ರೂಪಾಯಿಗೆ ಏರಿಕೆ ಮಾಡಿರುವ ಮಾರುಕಟ್ಟೆ ಶುಲ್ಕವನ್ನು ಮೊದಲಿನಂತೆ 35 ಪೈಸೆ ಗೆ ಇಳಿಸುವಂತೆ ಒತ್ತಾಯಿಸಿರುವ ವ್ಯಾಪಾರಸ್ಥರು ಬಂದ್​ನ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ.

ಕೇಂದ್ರ ಸರಕಾರ ತಂದಿರುವ ಎಪಿಎಂಸಿ ತಿದ್ದುಪಡಿ ಕಾಯಿದೆಯನ್ನು ವ್ಯಾಪಾರಿಗಳು ಸ್ವಾಗತಿಸಿದ್ದು ರೈತರಿಗೆ ಮುಕ್ತ ಮಾರುಕಟ್ಟೆಯಿಂದ ಲಾಭವಿದೆ.ವ್ಯಾಪಾರಿಗಳಿಗೂ ಅನುಕೂಲ.ಹೀಗಾಗಿ ಎಪಿಎಂಸಿಯ ಅವಶ್ಯಕತೆಯಿಲ್ಲ.ಅದನ್ನು ರದ್ದು ಪಡಿಸಬೇಕು ಎಂದು ವ್ಯಾಪಾರಸ್ಥರು ಒತ್ತಾಯಿಸಿದರು.

ಅಡಿಕೆ ಶಿಪ್ಪರ್ಸ್ ಆಂಡ್ ಬ್ರೋಕರ್ಸ್ ಎಸೋಸಿಯೆಷನ್ ಅಧ್ಯಕ್ಷ ದೇವಾನಂದ ಪೈ ಅವರು ಮಾತನಾಡಿ ಸರಕಾರ 0.35 ರಷ್ಟು ಇದ್ದ ಶುಲ್ಕವನ್ನು ಏಕಾಏಕಿ ಏರಿಸಿದೆ. ಇದರಿಂದ ರೈತರಿಗೆ, ವ್ಯಾಪರಸ್ಥರಿಗೆ ದೊಡ್ಡ ಹೊಡೆತಬಿದ್ದಿದೆ. ಕೇಂದ್ರ ಸರಕಾರ ಎಪಿಎಂಸಿ ಸಹಿತ ಕೃಷಿ ಕಾಯಿದೆಗೆ ತಿದ್ದು ಪಡಿ ಮಾಡಿದ್ದು ಸ್ವಾಗತಾರ್ಹ. ಆದರೆ ರಾಜ್ಯ ಸರಕಾರ ಶುಲ್ಕ ಏರಿಕೆಯಿಂದ ಸಮಸ್ಯೆಯಾಗಿದೆ. ಕೂಡಲೇ ಸಂಸದರು, ಶಾಸಕರು ಮಧ್ಯ ಪ್ರವೇಶಿಸಿ ಈ ಹಿಂದಿನಂತೆ ಶುಲ್ಕವನ್ನು ಕಡಿತಗೊಳಿಸಬೇಕು ಎಂದು ಆಗ್ರಹಿಸಿದರು.

ಬೈಕಂಪಾಡಿ ವರ್ತಕರ ಸಂಘದ ಕಾರ್ಯದರ್ಶಿ, ಉದ್ಯಮಿ ಪ್ರಕಾಶ್ ಕಲ್ಬಾವಿ ಅವರು ಸರಕಾರ ನಿರ್ಧಾರ ವ್ಯಾಪಾರಿಗಳಿಗೆ ಹೊಡೆತ ನೀಡಿದೆ. ಕೇರಳದಲ್ಲಿ ಎಪಿಎಂಸಿ ಇಲ್ಲದ ಕಾರಣ ವರ್ತಕರು ಆ ಕಡೆ ತೆರಳುತ್ತಿದ್ದಾರೆ. ಇಲ್ಲಿನ ಎಪಿಎಂಸಿ ರದ್ದು ಮಾಡಿ ರೈತರಿಗೆ ಉದ್ಯಮಿಗಳಿಗೆ ಅನುಕೂಲವಾದ ಕೇಂದ್ರದ ಕಾಯಿದೆ ಜಾರಿ ಮಾಡಿ ಎಂದು ಒತ್ತಾಯಿಸಿದರು.

ಸರಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಅನಿವಾರ್ಯ ಎಂದು ಎಚ್ಚರಿಸಿದರು.

ಮಂಗಳೂರು ಮರ್ಚೆಂಟ್ ಎಸೋಸಿಯೇಷನ್ ಕಾರ್ಯದರ್ಶಿ ಅಬ್ದುಲ್ ರೆಹಿಮಾನ್ ಮಾತನಾಡಿ, ಸರಕಾರ ರೈತರಿಗೆ ಅನುಕೂಲ ಮಾಡುವ ಬದಲು ಹೆಚ್ಚು ಶುಲ್ಕ ಪಾವತಿಸುವ ಕೆಲಸ ಮಾಡಿದೆ. ಎಪಿಎಂಸಿಯು ಕೇಂದ್ರದ ಹೊಸ ಕಾಯಿದೆಯಿಂದ ಮಹತ್ವ ಕಳೆದುಕೊಂಡಿದೆ. ರದ್ದು ಮಾಡಬೇಕು. ದೇಶದ ಇತರೆಡೆ ರದ್ದು ಮಾಡುವ ಕೆಲಸವನ್ನು ಆಯಾ ರಾಜ್ಯಗಳು ಮಾಡುತ್ತಿವೆ ಎಂದರು. ರಾಘವ ಶೆಟ್ಟಿ, ಅನ್ವರ್ ಹುಸೈನ್, ಸುನೀಲ್ ರತಿಲಾಲ್, ಕಲ್ಪೇಶ್, ರಮೇಶ್ ಪಟೇಲ್, ಅಡಿಕೆ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು, ವರ್ತಕರು ಉಪಸ್ಥಿತರಿದ್ದರು.

ಬೈಕಂಪಾಡಿ ಎಪಿಎಂಸಿಯಲ್ಲೂ ಅಡಿಕೆ ವರ್ತಕರು ತಮ್ಮ ವ್ಯಾಪಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.