ಮಂಗಳೂರು: ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವು
Team Udayavani, Mar 18, 2022, 1:49 PM IST
ಮಂಗಳೂರು: ಕರ್ತವ್ಯದ ವೇಳೆ ಬುಲೆಟ್ ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ, ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಮೃತ ಪಟ್ಟ ಘಟನೆ ಶುಕ್ರವಾರ ನಡೆದಿದೆ.
ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಸದಾಶಿವ ಮೃತ ದುರ್ದೈವಿ.
ಇದನ್ನೂ ಓದಿ:ರೈತರಿಂದ ವಿದ್ಯುತ್ ಕಚೇರಿಗೆ ಮುತ್ತಿಗೆ-ಆಕ್ರೋಶ
ಕರ್ತವ್ಯದ ವೇಳೆ ಬುಲೆಟ್ನಲ್ಲಿ ತೆರಳುತ್ತಿರುವ ಸಂದರ್ಭ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.