ಮಂಗಳೂರು: ಹೋಟೆಲ್ ನಲ್ಲಿ ದಾಂಧಲೆ ನಡೆಸಿದ ದುಷ್ಕರ್ಮಿಗಳು, ಇಬ್ಬರಿಗೆ ಗಾಯ
Team Udayavani, Oct 30, 2020, 7:15 PM IST
ಮಂಗಳೂರು: ನಗರದ ಫಲ್ನೀರ್ ಬಳಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ಸಂಜೆ (ಅ.30) ತಿಂಡಿ ಕೇಳಲು ಬಂದ ನಾಲ್ವರ ತಂಡ ಹೋಟೆಲ್ ಸಿಬ್ಬಂದಿ ಜೊತೆಗೆ ಜಗಳವಾಡಿ ದಾಂಧಲೆ ನಡೆಸಿದ ಘಟನೆ ವರದಿಯಾಗಿದೆ.
ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫಳ್ನೀರ್ ಬಳಿಯ ಸಿದ್ದಿಕ್ ಎಂಬವರಿಗೆ ಸೇರಿದ ಹೋಟೇಲ್ ಗೆ ನಾಲ್ವರು ಯುವಕರ ತಂಡ ಬಂದು, ಇಬ್ಬರು ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ ಹೊಟೇಲ್ ನ ಗಾಜು, ಪೀಠೋಪಕರಣ ಧ್ವಂಸಗೈದಿದ್ದಾರೆ.
ಪೂರ್ವದ್ವೇಷದ ಹಿನ್ನೆಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ