ಆರಂಭದಲಿಯೇ ಕ್ಷೀಣಿಸಿದ್ದ ಮುಂಗಾರು; ಮಂಗಳೂರಿನಲ್ಲಿ ಇನ್ನೂ ಸುರಿದಿಲ್ಲ ವಾಡಿಕೆ ಮಳೆ!


Team Udayavani, Jun 27, 2022, 12:22 PM IST

3

ಮಹಾನಗರ: ರಾಜ್ಯ ಕರಾವಳಿ ಭಾಗದಲ್ಲಿ ಆರಂಭದಲ್ಲೇ ಮುಂಗಾರು ಕ್ಷೀಣಿಸಿದ್ದ ಪರಿಣಾಮ ಸದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರಿನಲ್ಲಿ ವಾಡಿಕೆಗಿಂತ ಅತೀ ಕಡಿಮೆ ಮಳೆ ಸುರಿದಿದೆ.

ಮೇ ಅಂತ್ಯದಲ್ಲಿ ಕೇರಳ ಕರಾವಳಿಗೆ ಕಾಲಿಟ್ಟ ಮುಂಗಾರು ಜೂನ್‌ 1ರಂದು ರಾಜ್ಯ ಕರಾವಳಿಗೆ ತಲುಪಿತ್ತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ದಿನ ಬಿರುಸಿನ ಮಳೆಯಾದ ಬಳಿಕ ಮತ್ತೆ ಮಳೆ ತಗ್ಗಿತ್ತು. ಇದೀಗ ಕಳೆದ ಒಂದು ವಾರಗಳ ಹಿಂದೆಯಷ್ಟೇ ಮಳೆ ಬಿರುಸು ಪಡೆದಿದೆ. ಆದರೆ, ತಿಂಗಳ ಲೆಕ್ಕಾಚಾರದ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೆಚ್ಚಿನ ಮಳೆ ಕೊರತೆ ಇದೆ.

ಜೂನ್‌ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 732.4 ಮಿ.ಮೀ. ವಾಡಿಕೆ ಮಳೆಯಲ್ಲಿ 407.4 ಮಿ.ಮೀ. ಮಳೆಯಾಗಿದೆ. ಬಂಟ್ವಾಳ ತಾಲೂಕಿನಲ್ಲಿ 768.4 ಮಿ.ಮೀ. ವಾಡಿಕೆ ಮಳೆಯಲ್ಲಿ 338.2 ಮಿ.ಮೀ., ಮಂಗಳೂರಿನಲ್ಲಿ 837.7 ಮಿ.ಮೀ.ನಲ್ಲಿ 362.3 ಮಿ.ಮೀ., ಪುತ್ತೂರು ತಾಲೂಕಿನಲ್ಲಿ 761.2 ಮಿ.ಮೀ.ನಲ್ಲಿ 324.9 ಮಿ.ಮೀ., ಸುಳ್ಯ ತಾಲೂಕಿನಲ್ಲಿ 610.6 ಮಿ.ಮೀ.ನಲ್ಲಿ 283.4 ಮಿ.ಮೀ., ಮೂಡುಬಿದಿರೆಯಲ್ಲಿ 810 ಮಿ.ಮೀ.ನಲ್ಲಿ 361 ಮಿ.ಮೀ. ಮತ್ತು ಕಡಬ ತಾ|ನಲ್ಲಿ 675 ಮಿ.ಮೀ. ವಾಡಿಕೆ ಮಳೆಯಲ್ಲಿ 445 ಮಿ.ಮೀ. ಮಳೆಯಾಗಿದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಸುರಿದರೆ ಮುಂದೆ ಅಪ್ಪಳಿಸುವ ಮುಂಗಾರು ಮಾರುತದ ಪ್ರಭಾವ ಕಡಿಮೆ ಇರುವ ಸಾಧ್ಯತೆ ಇರುತ್ತದೆ.

ಅಲ್ಲದೆ, ಮೇ ತಿಂಗಳಲ್ಲಿ “ಅಸಾನಿ’ ಎಂಬ ಚಂಡಮಾರುತ ಉದ್ಭವಿಸಿದ್ದು, ಈ ಚಂಡಮಾರುತ ಕ್ಷೀಣಿ ಸಿದ ಬಳಿಕ ಮುಂಬರುವ ಮುಂಗಾರು ಮಳೆಯಲ್ಲೂ ಪ್ರಭಾವ ಬೀರಿತ್ತು. ಕಳೆದ ವರ್ಷವೂ ಒಟ್ಟಾರೆ ಮುಂಗಾರು ವೇಳೆ ಶೇ.13ರಷ್ಟು ಮಳೆ ಕೊರತೆ ಉಂಟಾಗಿತ್ತು. ಆದರೆ ಐಎಂಡಿ ಹೇಳಿಕೆಯ ಪ್ರಕಾರ ಒಟ್ಟಾರೆ ಮುಂಗಾರು ಅವಧಿಯಲ್ಲಿ ವಾಡಿಕೆ ಮಳೆ ಸುರಿಯುತ್ತದೆ ಎಂದು ಅಂದಾಜಿಸಲಾಗಿದೆ.

ಉಷ್ಣಾಂಶದಲ್ಲೂ ಏರು ಪೇರು

ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ದಾಖಲಾಗುವ ಉಷ್ಣಾಂಶದಲ್ಲೂ ಏರು ಪೇರಾಗುತ್ತಿದೆ. ಕೆಲವು ದಿನಗಳ ಕಾಲ ಉರಿ ಬಿಸಿಲು, ಸೆಕೆ ಇದ್ದರೆ ಕೆಲವು ದಿನ ಬೆಳಗ್ಗೆಯೇ ಮಳೆ ಇರುತ್ತಿದೆ. ಹೀಗಿದ್ದಾದ ದಾಖಲಾಗುವ ಉಷ್ಣಾಂಶಲ್ಲಿಯೂ ಏರಿಳಿತ ಕಂಡು ಬಂದಿದೆ. ಜಿಲ್ಲೆಯಲ್ಲಿ ಜೂ.26 ರಂದು 29.4 ಡಿ.ಸೆ. ಗರಿಷ್ಠ 24 ಡಿ.ಸೆ. ಕನಿಷ್ಠ, ಜೂ.25ರಂದು 28.1 ಡಿ.ಸೆ. ಮತ್ತು 23.3 ಡಿ.ಸೆ., ಜೂ.24ರಂದು 28.1 ಡಿ.ಸೆ ಮತ್ತು 23.3 ಡಿ.ಸೆ., ಜೂ.23ರಂದು 26.3 ಡಿ.ಸೆ. ಮತ್ತು 23.5 ಡಿ.ಸೆ., ಜೂ.22ರಂದು 27.8 ಡಿ.ಸೆ. ಮತ್ತು 22.7 ಡಿ.ಸೆ., ಜೂ.21ರಂದು 30.5 ಡಿ.ಸೆ. ಮತ್ತು 22.4 ಡಿ.ಸೆ., ಜೂ.20ರಂದು 31.2 ಡಿ.ಸೆ. ಗರಿಷ್ಠ ಮತ್ತು 23.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

ಕರಾವಳಿ ಭಾಗದಲ್ಲಿ ಮುಂಗಾರು ಮಾರುತ ಅಪ್ಪಳಿಸಿದ ಕೆಲವೇ ದಿನಗಳಲ್ಲಿ ಕ್ಷೀಣಿಸಿತ್ತು. ಕಳೆದ ಕೆಲ ದಿನಗಳಿಂದ ಮತ್ತೆ ಬಿರುಸು ಪಡೆದಿದ್ದು, ಕೆಲವು ಕಡೆ ಉತ್ತಮ ಮಳೆ ಸುರಿದಿದೆ. ಮುಂದಿನ ಕೆಲವು ದಿನಗಳ ಕಾಲ ಕರಾವಳಿಯಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಈಗಾಗಲೇ ಭಾರತೀಯ ಹವಾಮಾನ ಇಲಾಖೆ ನೀಡಿದ ಮಾಹಿತಿಯಂತೆ ಈ ಬಾರಿಯ ಮುಂಗಾರು ಅವಧಿಯಲ್ಲಿ ವಾಡಿಕೆಯಂತೆ ಮಳೆಯಾಗುವ ಸಾಧ್ಯತೆ ಇದೆ. –ಡಾ| ರಾಜೇಗೌಡ,, ಕೃಷಿ ವಿ.ವಿ. ಹವಾಮಾನ ವಿಜ್ಞಾನಿ

„ ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.