ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ


Team Udayavani, May 1, 2024, 4:11 PM IST

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ ಅಗ್ನಿ ಆಕಸ್ಮಿಕ ಪ್ರಮಾಣ ಸ್ವಲ್ಪ ಇಳಿಮುಖವಾಗಿದೆ. ಅಲ್ಲಲ್ಲಿ ಗುಡ್ಡಗಳಿಗೆ, ಕುರುಚಲು ಪೊದೆಗಳಿಗೆ ಸಹಿತ ವಿವಿಧ ಸ್ಥಳಗಳಿಗೆ ಬೆಂಕಿ ಬೀಳುವ ಪ್ರಕರಣಗಳು ವರದಿಯಾಗುತ್ತಿದ್ದರೂ ಈ ಪ್ರಮಾಣ ಕಳೆದ ವರ್ಷದಷ್ಟಿಲ್ಲ.

2023ರಲ್ಲಿ ಈ ಅವಧಿಯಲ್ಲಿ ದ.ಕ. ಜಿಲ್ಲೆಯಲ್ಲಿ ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿತ್ತು. ಆದರೆ ಈ ಬಾರಿ 666 ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂದ ಕರೆಗಳಿಗೆ ಅಗ್ನಿ ಶಾಮಕದಳ ಸ್ಪಂದಿಸಿದೆ. ಪುತ್ತೂರಿನಲ್ಲಿ 137 ಮತ್ತು ಬಂಟ್ವಾಳದಲ್ಲಿ 112 ಪ್ರಕರಣಗಳು ವರದಿಯಾಗಿದ್ದು, ಕಳೆದ ವರ್ಷ ಸುಳ್ಯ ಹೊರತು ಪಡಿಸಿ ಇತರ ಠಾಣೆಗಳಲ್ಲಿ 100- 200ರಷ್ಟು ಪ್ರಕರಣಗಳು ದಾಖಲಾಗಿತ್ತು.

ಪ್ರಸ್ತುತ ದಿನಕ್ಕೆ ಜಿಲ್ಲೆಯಲ್ಲಿ ಸರಾಸರಿ 10-12 ಕರೆಗಳು ಬರುತ್ತಿದ್ದು, ಕೆಲವು ಸಣ್ಣ ಅಗ್ನಿ ಅವಘಡಗಳಲ್ಲಿ ಸ್ಥಳೀಯರೇ ಬೆಂಕಿ ನಂದಿಸುತ್ತಾರೆ. “ಗುಡ್ಡದಲ್ಲಿ ಮುಳಿ ಹುಲ್ಲಿಗೆ ಬೆಂಕಿ ಬಿದ್ದಿದೆ’ ಎನ್ನುವ ಕರೆಗಳೇ ಅಧಿಕ. ಕಳೆದ ವರ್ಷ ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕ ಪ್ರದೇಶದಲ್ಲಿಯೇ ನಾಲ್ಕೈದು ಬಾರಿ ಅಗ್ನಿ ಅವಘಡ ಸಂಭವಿಸಿತ್ತು. ಈ ಬಾರಿ ಒಮ್ಮೆ ಮಾತ್ರ ಬೆಂಕಿ ಆಕಸ್ಮಿಕ ಉಂಟಾಗಿದೆ.

ಕೆಲವು ಕಡೆಗಳಲ್ಲಿ ಸಾರ್ವಜನಿಕರೇ ಕಳೆ ಗಿಡ ನಾಶಮಾಡುವ ಉದ್ದೇಶಕ್ಕೆ ಬೆಂಕಿ ಹಚ್ಚುತ್ತಾರೆ. ಹೆಚ್ಚು ವ್ಯಾಪಿಸಿದಾಗ ಆರಿಸಲು ಸಾಧ್ಯವಾಗದೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ ಪ್ರಕರಣಗಳೂ ಇವೆ. ಗಾಳಿಗೆ ವಿದ್ಯುತ್‌ ತಂತಿಗಳು ಒಂದಕ್ಕೊಂದು ತಾಗಿ ಕಿಡಿ ಉಂಟಾಗಿ ಬೆಂಕಿ ಬೀಳುತ್ತವೆ ಎನ್ನುತ್ತಾರೆ ಅಧಿಕಾರಿಗಳು.

ಮಳೆಯಾದರೆ ಸಮಸ್ಯೆ ದೂರ
ಬೇಸಗೆ ಮಳೆ ಆರಂಭವಾದರೆ ಬೆಂಕಿ ಅವಘಡ ಪ್ರಕರಣಗಳಿಗೆ ಮುಕ್ತಿ ದೊರೆಯಲಿದೆ. ಒಂದೆರಡು ಮಳೆ ಯಾದರೆ ಒಣಗಿರುವ ಹುಲ್ಲು, ಪೊದೆಗಳು ಮತ್ತೆ ಚಿಗುರಿ ಬೆಂಕಿ ಅವಘಡಗಳು ಕಡಿಮೆಯಾಗುತ್ತವೆ. ಕಾಡಿಗೆ ಬೆಂಕಿ ಬೀಳುವ ಪ್ರಕರಣಗಳೂ ಇದರಿಂದ ಕಡಿಮೆಯಾಗುತ್ತದೆ ಎನ್ನುತ್ತಾರೆ ಠಾಣಾ ಸಿಬಂದಿ.

ಅಗ್ನಿಶಮನ ವಾಹನಗಳ ಸಂಖ್ಯೆ ಕಡಿಮೆ
ಕೇಂದ್ರ ಸರಕಾರದ ಗುಜರಿ ನೀತಿಯ ಅನ್ವಯ 15 ವರ್ಷಗಳ ಹಳೆಯ ಡೀಸೆಲ್‌ ವಾಹನಗಳನ್ನು ವಿವೇವಾರಿ ಮಾಡ ಬೇಕಾಗಿದ್ದು, ಇದರಿಂದಾಗಿ ವಾಹನಗಳ ಅಗ್ನಿಶಮನ ವಾಹನಗಳ ಸಂಖ್ಯೆ ಕಡಿಮೆಯಾಗಿದೆ. ಮಂಗಳೂರು ನಗರ ಹೊರತುಪಡಿಸಿ ಇತರ ಠಾಣೆಗಳಲ್ಲಿ ಒಂದೊಂದೇ ವಾಹನಗಳು ಇವೆ. ಪಾಂಡೇಶ್ವರದಲ್ಲಿ ಸದ್ಯ 2 ವಾಹನ ಇದೆ. ತುರ್ತು ಸಂದರ್ಭ ಬಂದಾಗ ಪಕ್ಕದ ಠಾಣೆಯಿಂದ ವಾಹನ ಪಡೆಯಲಾಗುತ್ತಿದೆ. ಹೊಸ ವಾಹನಗಳ ಖರೀದಿ ಪ್ರಕ್ರಿಯೆ ರಾಜ್ಯಮಟ್ಟದಲ್ಲಿ ನಡೆಯುತ್ತಿದ್ದು, ಶೀಘ್ರ ವಾಹನಗಳು ಬರುವ ನಿರೀಕ್ಷೆಯಿದೆ. ವಿಮಾನ ನಿಲ್ದಾಣ, ಎನ್‌ಎಂಪಿಎ, ಎಂಆರ್‌ಪಿಎಲ್‌, ಎಂಸಿಎಫ್‌, ಕೆಐಒಸಿಎಲ್‌ ಮೊದಲಾದ
ಸಂಸ್ಥೆಗಳಲ್ಲಿರುವ ಅತ್ಯಾಧುನಿಕ ವಾಹನ ಗಳನ್ನೂ ತುರ್ತು ಸಂದರ್ಭದಲ್ಲಿ ಪಡೆಯ ಲಾಗುತ್ತದೆ ಎಂದು ಅಧಿಕಾರಿಗಳು
ತಿಳಿಸಿದ್ದಾರೆ.

ಕಳೆದ ವರ್ಷ ಬೆಂಕಿ ದುಪ್ಪಟ್ಟು
ಕಳೆದ ವರ್ಷ ಇದೇ ಅವಧಿಯಲ್ಲಿ 1,180 ಪ್ರಕರಣಗಳು ದಾಖಲಾಗಿತ್ತು. ಪಾಂಡೇಶ್ವರ 161, ಕದ್ರಿ 232, ಮೂಡುಬಿದಿರೆ 161, ಬೆಳ್ತಂಗಡಿ 131, ಪುತ್ತೂರು 206, ಸುಳ್ಯ 82 ಪ್ರಕರಣಗಳು ವರದಿಯಾಗಿತ್ತು. 2022ರಲ್ಲಿ ಇಡೀ ವರ್ಷದಲ್ಲಿ 773 ಕರೆಗಳು, 2021ರಲ್ಲಿ 507 ಮತ್ತು 2020ರಲ್ಲಿ 823 ಕರೆಗಳು ದಾಖಲಾಗಿತ್ತು.

ಸ್ವಲ್ಪ ಕಡಿಮೆ
ಬಿಸಿಲ ಬೇಗೆ ಕಳೆದ ವರ್ಷಕ್ಕೆ ಹೋಲಿಸಿದರೆ ಇಲ್ಲಿಯವರೆಗೆ ಅಗ್ನಿ ಅವಘಡ ಪ್ರಕರಣಗಳು ಸ್ವಲ್ಪ ಕಡಿಮೆ ಇದೆ. ಪ್ರತೀ ದಿನ 10-12 ಪ್ರಕರಣಗಳು ಕರೆಗಳು ಬರುತ್ತಿವೆ. ಕಳೆದ ವರ್ಷ 30-40 ಕರೆಗಳು ಬರುತಿತ್ತು. ಗುಡ್ಡಗಳಲ್ಲಿ ಮುಳಿಹುಲ್ಲಿಗೆ ಬೆಂಕಿ ಬೀಳುವ ಪ್ರಕರಣಗಳು ಸ್ವಲ್ಪ ಹೆಚ್ಚಿವೆ.
ಭರತ್‌ ಕುಮಾರ್‌ ದ.ಕ. ಜಿಲ್ಲಾ
ಅಗ್ನಿಶಾಮಕ ಅಧಿಕಾರಿ, ಪಾಂಡೇಶ್ವರ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.