Mangaluru ಧರ್ಮ ಅವಹೇಳನ ಪ್ರಕರಣ; ಜೀವ ಬೆದರಿಕೆ ಕರೆ ಬಗ್ಗೆ ಮಹಿಳೆಯಿಂದ ದೂರು
Team Udayavani, Feb 20, 2024, 12:05 PM IST
ಮಂಗಳೂರು: ನಗರದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಿಂದ ಧರ್ಮದ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಮಹಿಳೆಯೊಬ್ಬರು ತನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಕವಿತಾ ಎನ್ನುವವರ ದೂರು ನೀಡಿದ ಮಹಿಳೆ. ಅವರು ಮಗಳು ಖಾಸಗಿ ಶಾಲೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿದ್ದರು. ಧರ್ಮದ ಅವಹೇಳನಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ಜತೆ ಡಿಡಿಪಿಐ ಕಚೇರಿಗೆ ಭೇಟಿ ನೀಡಿದ್ದ ಅವರು ಶಿಕ್ಷಕಿಯ ವಿರುದ್ಧ ಕ್ರಮ ವಹಿಸುವಂತೆ ಒತ್ತಾಯಿಸಿದ್ದರು. ಈ ವೇಳೆ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.
ಇದೇ ವೇಳೆ ಅವರು ಕೆಲಸ ಮಾಡುತ್ತಿದ್ದ ತೊಕ್ಕೊಟ್ಟಿನ ಖಾಸಗಿ ಶಾಲೆಯಿಂದ ಅವರನ್ನು ಕೆಲಸದಿಂದ ತೆಗೆದು ಹಾಕಿದೆ ಎಂದು ಕವಿತಾ ತಿಳಿಸಿದ್ದಾರೆ.
ಮೊಬೈಲ್ ಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದೆ. ರಾತ್ರಿ ವೇಳೆ ಕತಾರ್ ದೇಶದಿಂದಲೂ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಕಂಕನಾಡಿ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ