ಮಂಗಳೂರು: ಎಂಟು ತಿಂಗಳ ಹೆಣ್ಣುಮಗುವನ್ನು ರಕ್ಷಿಸಿದ ಚೈಲ್ಡ್ ಲೈನ್ ತಂಡ
Team Udayavani, Jul 16, 2022, 9:30 AM IST
ಮಂಗಳೂರು: ನಗರದ ಸರ್ಕಾರಿ ಆಸ್ಪತ್ರೆಯೊಂದರ ಬಳಿ ಎಂಟು ತಿಂಗಳ ಮಗುವನ್ನು ಹಿಡಿದುಕೊಂಡು ಪಾನಮತ್ತಳಾಗಿ ತಿರುಗುತ್ತಿದ್ದ ಮಹಿಳೆಯ ಬಳಿಯಿದ್ದ ಮಗುವನ್ನು ದ.ಕನ್ನಡ ಜಿಲ್ಲಾ ಚೈಲ್ಡ್ ಲೈನ್ ತಂಡವು ಪಾಂಡೇಶ್ವರ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ರಕ್ಷಿಸಿದೆ.
ಮಹಿಳೆಯೋರ್ವಳು ಪಾನಮತ್ತಳಾಗಿದ್ದಾಳೆ ಈಕೆಯ ಬಳಿ ಹೆಣ್ಣುಮಗುವೊಂದಿದ್ದು ಮಗುವಿಗೆ ರಕ್ಷಣೆ ನೀಡುವಂತೆ ಸಾರ್ವಜನಿಕರು ಚೈಲ್ಡ್ ಲೈನ್ -1098ಕ್ಕೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚೈಲ್ಡ್ ಲೈನ್ ತಂಡವು ಜುಲೈ 15ರಂದು ಮಹಿಳೆಯ ಬಳಿಯಿದ್ದ 8 ತಿಂಗಳ ಮಗುವಿಗೆ ಸೂಕ್ತ ರಕ್ಷಣೆಯ ಅಗತ್ಯವಿದ್ದುದರಿಂದ ಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ಬಾಲಕಿಯರ ವಸತಿ ನಿಲಯದಲ್ಲಿ ಪುನರ್ವಸತಿಯನ್ನು ಕಲ್ಪಿಸಲಾಗಿದೆ.
ಇದನ್ನೂ ಓದಿ:ಮಳೆಯ ಅಬ್ಬರಕ್ಕೆ ನೆಲಕಚ್ಚಿದ ಭತ್ತದ ಬೆಳೆ: ಮರು ಬಿತ್ತನೆಗೆ ಮುಂದಾದ ರೈತರು; ಬೀಜದ ಕೊರತೆ
ಚೈಲ್ಡ್ ಲೈನ್ 1098 ದ.ಕನ್ನಡ ಜಿಲ್ಲೆಯ ಕೇಂದ್ರ ಸಂಯೋಜಕ ದೀಕ್ಷಿತ್ ಅಚ್ರಪ್ಪಾಡಿ, ಸದಸ್ಯ ಆಶಾಲತ ಕುಂಪಲ, ಸಿಬ್ಬಂದಿ ಸುಪ್ರಿತ್ ಆರ್ಲಪದವು, ಕವನ್ ಕಬಕ, ಕು.ಶೋಭಾ ಹಾಗೂ ಪಾಂಡೇಶ್ವರ ಪೊಲೀಸ್ ಠಾಣಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ