‘ಸಮಸ್ಯೆಗಳಿಗೆ ಸ್ಪಂದಿಸದ ಸಂಸದರು’


Team Udayavani, Dec 14, 2018, 12:05 PM IST

14-december-8.gif

ಮಹಾನಗರ : ಜಿಲ್ಲೆಗೆ ಸಂಬಂಧಿಸಿದಂತೆ ಹತ್ತಾರು ಸಮಸ್ಯೆಗಳು ಜಿಲ್ಲೆಯ ಜನತೆಯನ್ನು ಬಾಧಿಸುತ್ತಿದ್ದರೂ ಎರಡು ಅವಧಿಗಳಲ್ಲಿ ಸಂಸದರಾಗಿರುವ ನಳಿನ್‌ ಕುಮಾರ್‌ ಕಟೀಲು ಅವರು ಎಳ್ಳಷ್ಟೂ ಕಾಳಜಿ ತೋರದೆ ಬೇಜವಾಬ್ದಾರಿಯಿಂದ ವರ್ತಿ ಸುತ್ತಿದ್ದಾರೆ ಎಂದು ಸಿಪಿಐ(ಎಂ) ಪಕ್ಷದ ಜಿಲ್ಲೆಯ ಹಿರಿಯ ಮುಖಂಡ ಕೆ.ಆರ್‌. ಶ್ರೀಯಾನ್‌ ಟೀಕಿಸಿದ್ದಾರೆ.

ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಕಾರ್ಯನಿರ್ವಹಣೆಯನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಿಪಿಐ(ಎಂ) ದ.ಕ. ಜಿಲ್ಲಾ ಸಮಿತಿಯ ವತಿಯಿಂದ ನಡೆದ ಪ್ರತಿಭಟನ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಪಕ್ಷವು ರಾಮ ಮಂದಿರ, ಶಬರಿಮಲೆ, ಹಿಂದುತ್ವದ ಪ್ರಚಾರ ಮಾಡಿ ಮತ ಗಳಿಕೆಗೆ ಪ್ರಯತ್ನಿಸುತ್ತಿದೆ. ಆದರೆ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಅವರಿಗೆ ಜಿಲ್ಲೆಯ ಜನರ ಸಮಸ್ಯೆಗಳ ಬಗ್ಗೆ ಕಾಳಜಿಯಿಲ್ಲ. ಜಿಲ್ಲೆಯ ಎರಡೂವರೆ ಲಕ್ಷ ಬೀಡಿ ಕಾರ್ಮಿಕರಿಗೆ ಮಾಲಕರು ಬಾಕಿ ಇರುವ ತುಟ್ಟಿ ಭತ್ತೆಯನ್ನಾಗಲೀ, ಕನಿಷ್ಠ ಕೂಲಿಯನ್ನಾಗಲಿ ಜಾರಿ ಮಾಡುತ್ತಿಲ್ಲ. ಆ ಬಗ್ಗೆ ಸಂಸದರು ಮಾತನಾಡುತ್ತಿಲ್ಲ. ಮರಳು ಕ್ಷಾಮದಿಂದ ಕಟ್ಟಡ ಕಾರ್ಮಿಕರಿಗೆ ಜಿಲ್ಲೆಯಲ್ಲಿ ಕೆಲಸವಿಲ್ಲ. ಮರಳು ಮಾಫಿಯಾ ಇದಕ್ಕೆ ಕಾರಣವೆಂದು ಸ್ಪಷ್ಟವಾಗಿದ್ದರೂ ಮರಳು ಕೊರತೆ ಪರಿಹರಿಸಲು ಅವರು ಕಾಳಜಿ ವಹಿಸಿಲ್ಲ. ಹೆದ್ದಾರಿಯಲ್ಲಿ ಮೇಲ್ಸೇತುವೆಗಳು, ಸರ್ವಿಸ್‌ ರಸ್ತೆಗಳು 8 ವರ್ಷಗಳಿಂದಲೂ ಪೂರ್ಣಗೊಳ್ಳದೆ ರಸ್ತೆ ಅಪಘಾತಗಳಿಗೆ ಕಾರಣವಾಗಿವೆ. ಆದರೆ ಗುತ್ತಿಗೆದಾರರು ಟೋಲ್‌ಗೇಟ್‌ ನಿರ್ಮಿಸಿ ಸುಂಕವಸೂಲಿ ಮಾಡುತ್ತಿದ್ದಾರೆ. ನಾಗರಿಕರು ಪ್ರತಿಭಟಿಸಿದರೂ ಸಂಸದರು ತಮ್ಮ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿ ಸಮಸ್ಯೆಯ ಬಗ್ಗೆ ಹಾರಿಕೆಯ ಮಾತುಗಳನ್ನಾಡುತ್ತಿದ್ದಾರೆ ಎಂದರು.

ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಸಿಪಿಐ(ಎಂ) ದ.ಕ.ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ, ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಜೆ. ಬಾಲಕೃಷ್ಣ ಶೆಟ್ಟಿ, ಯಾದವ ಶೆಟ್ಟಿ, ಜಿಲ್ಲೆಯ ಪಕ್ಷ ಮುಖಂಡರಾದ ಯು.ಬಿ. ಲೋಕಯ್ಯ. ಕೃಷ್ಣಪ್ಪ ಸಾಲ್ಯಾನ್‌ ಮಾತನಾಡಿದರು. ಸಿಪಿಐ(ಎಂ) ಜಿಲ್ಲಾ ಸಮಿತಿ ಸದಸ್ಯರಾದ ವಾಸುದೇವ ಉಚ್ಚಿಲ್‌, ಜಯಂತಿ ಶೆಟ್ಟಿ, ರಾಬರ್ಟ್‌ ಡಿ’ಸೋಜಾ, ಸದಾಶಿವ ದಾಸ್‌, ದಯಾನಂದ ಶೆಟ್ಟಿ, ಜಯಂತ ನಾಯ್ಕ, ರಾಮಣ್ಣ ವಿಟ್ಲ ಭಾಗವಹಿಸಿದ್ದರು. ಕೆ. ಯಾದವ ಶೆಟ್ಟಿ ಸ್ವಾಗತಿಸಿದರು.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.