ಮಂಗಳೂರು: ಪಿಸ್ತೂಲ್‌ ತೋರಿಸಿ ಕಾರು, ಮೊಬೈಲ್‌ ಸುಲಿಗೆ… ಪರಿಚಯದ ವ್ಯಕ್ತಿಯಿಂದಲೇ ಕೃತ್ಯ


Team Udayavani, May 14, 2023, 7:20 AM IST

ಮಂಗಳೂರು: ಪಿಸ್ತೂಲ್‌ ತೋರಿಸಿ ಕಾರು, ಮೊಬೈಲ್‌ ಸುಲಿಗೆ… ಪರಿಚಯದ ವ್ಯಕ್ತಿಯಿಂದಲೇ ಕೃತ್ಯ

ಮಂಗಳೂರು: ತನ್ನ ಪರಿಚಯದ ವ್ಯಕ್ತಿಯೋರ್ವ ಪಿಸ್ತೂಲ್‌ ತೋರಿಸಿ ಕಾರು ಮತ್ತು ಮೊಬೈಲ್‌ಗ‌ಳನ್ನು ಸುಲಿಗೆ ಮಾಡಿರುವ ಬಗ್ಗೆ ಕೆ. ಮುಜೀಬ್‌ ಸೈಯದ್‌ ಮಂಗಳೂರು ದಕ್ಷಿಣ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.

ಮುಜೀಬ್‌ ಸೈಯದ್‌ ಮೇ 12ರಂದು ಬೆಳಗ್ಗೆ 10 ಗಂಟೆಗೆ ಮಗಳೊಂದಿಗೆ ಕಾರಿನಲ್ಲಿ ಕೊಡಿಯಾಲ್‌ಬೈಲ್‌ನಲ್ಲಿರುವ ಕ್ಲಿನಿಕ್‌ಗೆ ಹೋಗಿ ಬಳಿಕ ಅತ್ತಾವರದ ಅಪಾರ್ಟ್‌ಮೆಂಟ್‌ ಬಳಿ ತಿಂಡಿ ಖರೀದಿಸಿ ಕಾರಿನ ಬಳಿಗೆ ಬಂದಾಗ ಕಾರಿನ ಹಿಂದೆ ಇನ್ನೊಂದು ಕಾರು ನಿಂತಿತ್ತು. ಅವರ ಪರಿಚಯದ ನೌಫಾಲ್‌ ಎಂಬಾತ ಅದರಿಂದ ಇಳಿದು ಮುಜೀಬ್‌ ಸೈಯದ್‌ ಅವರ ಬಳಿಗೆ ಬಂದು ಅವರನ್ನು ತಡೆದು ನಿಲ್ಲಿಸಿ “ನಿಮ್ಮಲ್ಲಿ ಮಾತನಾಡಲು ಇದೆ. ಕಾರನ್ನು ಫಾಲೋ ಮಾಡಿ’ ಎಂದ. ಅದರಂತೆ ಮುಜೀಬ್‌ ಸೈಯದ್‌ ಅವರು ಕಾರನ್ನು ಫಾಲೋ ಮಾಡಿಕೊಂಡು ಹೋಗುತ್ತಾ ಎಸ್‌.ಎಲ್‌. ಮಥಾಯಿಸ್‌ ರಸ್ತೆಯಲ್ಲಿರುವ ಪಾರ್ಕ್‌ ತಲುಪಿದಾಗ ನೌಫಾಲ್‌ ಆತನ ಕಾರನ್ನು ನಿಲ್ಲಿಸಿ ಮುಜೀಬ್‌ ಸೈಯದ್‌ ಅವರ ಕಾರಿನ ಡ್ರೈವಿಂಗ್‌ ಸೀಟಿನಲ್ಲಿ ಕುಳಿತು ಅವರನ್ನು ಪಕ್ಕದ ಸೀಟ್‌ನಲ್ಲಿ ಕುಳ್ಳಿರಿಸಿ ಆತ ಡ್ರೈವ್‌ ಮಾಡಿದ. ಕಾರಿನಲ್ಲಿ ಹೋಗುತ್ತಾ “ನೀನು ದುಬಾೖಯಲ್ಲಿ ತುಂಬಾ ಹಣ ಸಂಪಾದನೆ ಮಾಡುತ್ತಿದ್ದಿ. ನನಗೆ 5 ಲ.ರೂ. ಹಾಗೂ ಒಂದು ಕಾರನ್ನು ನೀಡಬೇಕು’ ಎಂದು ಒತ್ತಾಯಿಸಿದ್ದ. ಅದಕ್ಕೆ ಮುಜೀಬ್‌ ನಿರಾಕರಿಸಿದಾಗ ನೌಫಾಲ್‌ ಆತನ ಬಳಿ ಇದ್ದ ಪಿಸ್ತೂಲ್‌ ತೆಗೆದು ಹೆದರಿಸಿ ಒತ್ತಾಯದಿಂದ ಮುಜೀಬ್‌ ಮತ್ತು ಅವರ ಮಗಳ ಬಳಿ ಇದ್ದ ಮೊಬೈಲ್‌ ಫೋನ್‌ಗಳನ್ನು ಹಾಗೂ 18,000 ರೂ. ನಗದು ಹಣವನ್ನು ಬಲಾತ್ಕಾರದಿಂದ ಕಿತ್ತುಕೊಂಡು ಪುಚ್ಚ ಎಂಬಾತನ ಜತೆ ವಿವಿಧ ಕಡೆ ಸುತ್ತಾಡಿಸಿದ್ದ.

ಬಳಿಕ ಫ್ಲ್ಯಾಟ್‌ ಬಳಿಗೆ ಬಂದು ಮುಜೀಬ್‌ ಅವರ ಪತ್ನಿ ಮಕ್ಕಳನ್ನು ಬಳಿಗೆ ಕರೆದು ಅವರನ್ನು ಕೂಡ ಕಾರಿನಲ್ಲಿ ಕುಳ್ಳಿರಿಸುವಂತೆ ಒತ್ತಾಯಿಸಿದ್ದ. ಅದಕ್ಕೆ ಅವರು ನಿರಾಕರಿಸಿದ್ದರು. ಮುಜೀಬ್‌ ಕೂಡಲೇ ಕಾರಿನಿಂದ ಇಳಿದು ಮಗಳನ್ನು ಕೂಡ ಕೆಳಗೆ ಇಳಿಸಿದ್ದರು. ಅನಂತರ ನೌಫಾಲ್‌ ಕೂಡಲೇ ಮುಜೀಬ್‌ ಅವರ ಕಾರಿನೊಂದಿಗೆ ಹಾಗೂ ಪುಚ್ಚ ಎಂಬಾತ ಇನ್ನೊಂದು ಕಾರಿನಲ್ಲಿ ಪರಾರಿಯಾಗಿದ್ದಾರೆ. ಆರೋಪಿಗಳು ಅಂದಾಜು ಒಟ್ಟು 6.58 ಲ.ರೂ. ಮೌಲ್ಯದ ಸೊತ್ತುಗಳನ್ನು ಸುಲಿಗೆ ಮಾಡಿಕೊಂಡು ಹೋಗಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕುಮಟಾದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಜಿದ್ದಾಜಿದ್ದಿ: ಜಯ ಕಂಡ ದಿನಕರ ಶೆಟ್ಟಿ

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.