ಮಂಗಳೂರು: ಕೆಲಸ ಸಿಗದೆ ಖಿನ್ನತೆ… ಎಂಜಿನಿಯರಿಂಗ್ ಪದವೀಧರ ನಾಪತ್ತೆ
Team Udayavani, Mar 7, 2023, 7:23 AM IST
ಮಂಗಳೂರು : ಎಂಜಿನಿಯರಿಂಗ್ ಪದವೀಧರ ರಂಜಾಳ ಆಶಿಶ್ ಪ್ರಭು (24) ಅವರು ಮಾ. 5ರಂದು ಮನೆ ಬಿಟ್ಟು ಹೋದವರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಲಾಗಿದೆ.
ಆಶಿಶ್ ಅವರು ಕೆಲಸ ಸಿಗದೆ ಖಿನ್ನತೆಯಿಂದ ಬಳಲುತ್ತಿದ್ದರು. ಕೆಲಸ ಹುಡುಕುವಂತೆ ತಂದೆ ಹೇಳಿದಾಗ ಮನೆ ಬಿಟ್ಟು ಹೋಗುವುದಾಗಿ ತಿಳಿಸಿ ಮೊಬೈಲ್ ಪೋನ್ ಅನ್ನು ಮನೆಯಲ್ಲಿಯೇ ಇಟ್ಟು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಾಧಾರಣ ಶರೀರ, ಎಣ್ಣೆಗಪ್ಪು ಮೈಬಣ್ಣ, ದುಂಡು ಮುಖ, 5.9 ಅಡಿ ಎತ್ತರ ಹೊಂದಿದ್ದು, ಕನ್ನಡ, ಇಂಗ್ಲಿಷ್, ಹಿಂದಿ, ಕೊಂಕಣಿ ಭಾಷೆ ಮಾತನಾಡುತ್ತಾರೆ. ಅವರ ಮಾಹಿತಿ ದೊರೆತವರು ಮಂಗಳೂರು ಪೂರ್ವ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ