ಮಂಗಳೂರು ಐಟಿ ಕಚೇರಿ ಎತ್ತಂಗಡಿ; ಜಿಲ್ಲೆಯ ಆರ್ಥಿಕತೆ ಸರ್ವನಾಶ ಯತ್ನ: ಜೆ.ಆರ್‌. ಲೋಬೋ


Team Udayavani, Sep 6, 2020, 5:18 AM IST

ಮಂಗಳೂರು ಐಟಿ ಕಚೇರಿ ಎತ್ತಂಗಡಿ; ಜಿಲ್ಲೆಯ ಆರ್ಥಿಕತೆ ಸರ್ವನಾಶ ಯತ್ನ: ಜೆ.ಆರ್‌. ಲೋಬೋ

ಮಂಗಳೂರು: ಆದಾಯ ತೆರಿಗೆಯ ಮಂಗಳೂರು ಪ್ರಧಾನ ಆಯುಕ್ತರ ಕಚೇರಿ(ಪಿಸಿಐಟಿ)ಯನ್ನು ಗೋವಾ ಕಚೇರಿ ಜತೆ ವಿಲೀನಕ್ಕೆ ಮುಂದಾಗಿ ಬಿಜೆಪಿ ಸರಕಾರವು ದ.ಕ. ಜಿಲ್ಲೆಯ ಆರ್ಥಿಕತೆಯನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ಮಾಜಿ ಶಾಸಕ ಲೋಬೋ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಶ್ರೀನಿವಾಸ ಮಲ್ಯ, ಟಿಎಂಎ ಪೈ, ಜನಾರ್ದನ ಪೂಜಾರಿ, ಆಸ್ಕರ್‌, ಜಾರ್ಜ್‌, ವೀರಪ್ಪ ಮೊಲಿ ಅವರಂತಹ ಜನಪ್ರತಿನಿಧಿಗಳು ಕಾರ್ಯ ನಿರ್ವಹಿಸಿದ್ದಾರೆ. ಆದರೆ ಬಿಜೆಪಿ ಸರಕಾರ ನಗರದ ಅಭಿವೃದ್ಧಿಗೆ ಪೂರಕವಾಗಿದ್ದ ಐಟಿ ಕಚೇರಿಯನ್ನೇ ಸ್ಥಳಾಂತರಿಸುತ್ತಿದೆ ಎಂದರು.

ಜಿಲ್ಲೆಗೆ ನಿರಂತರ ಅನ್ಯಾಯ
ದ.ಕ. ಜಿಲ್ಲೆ ಅಭಿವೃದ್ಧಿಯಾಗಬೇಕಾದರೆ ಐಟಿ ಕಚೇರಿ ವಿಭಾಗ ಮಂಗಳೂರಿನಲ್ಲೇ ಇರಬೇಕು. ಗೋವಾಕ್ಕೆ ಹೋಲಿಕೆ ಮಾಡಿದರೆ ದ.ಕ. ಜಿಲ್ಲೆ ಕೈಗಾರಿಕೆ, ವ್ಯಾಪಾರದಲ್ಲಿ ಮುಂದಿದೆ. ಕೇಂದ್ರ ಸರಕಾರದ ಆರ್ಥಿಕ ಸಚಿವಾಲಯದಿಂದ ನಮ್ಮ ಜಿಲ್ಲೆಗೆ ನಿರಂತರ ಅನ್ಯಾಯವಾಗುತ್ತಿದೆ. ಜಿಲ್ಲೆಯ ಪ್ರಮುಖ ಬ್ಯಾಂಕ್‌ಗಳಾಗಿದ್ದ ವಿಜಯ ಬ್ಯಾಂಕ್‌, ಕಾರ್ಪೊರೇಶನ್‌ ಬ್ಯಾಂಕ್‌, ಸಿಂಡೀಕೇಟ್‌ ಬ್ಯಾಂಕ್‌ ಮೊದಲಾದವುಗಳನ್ನು ವಿಲೀನಗೊಳಿಸಿ ಹಿರಿಯರು ಕಟ್ಟಿ ಬೆಳೆಸಿದ ವಾಣಿಜ್ಯ ಕೇಂದ್ರಗಳನ್ನೇ ಸಂಪೂರ್ಣ ನಾಶ ಮಾಡಲಾಗಿದೆ ಎಂದು ಆರೋಪಿಸಿದರು.

ಮಂಗಳೂರು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಬದಲು ಅದಾನಿಗೆ ಮಾರಾಟ ಮಾಡಲಾಗಿದೆ. ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣವನ್ನು ಅತ್ಯಂತ ಕಡಿಮೆಗೊಳಿಸುವ ಸುರಂಗ ಮಾರ್ಗದ ಬಗ್ಗೆ ಮಾಜಿ ಸಚಿವ ಆಸ್ಕರ್‌ ಫೆರ್ನಾಂಡಿಸ್‌ ರೂಪಿಸಿದ್ದ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ. ಮಂಗಳೂರು ಕೇಂದ್ರ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಭರವಸೆಯನ್ನು ಹುಸಿಗೊಳಿಸಲಾಗಿದೆ. ಹೀಗಿರುವಾಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದರೂ ದ.ಕ. ಜಿಲ್ಲೆಗೆ ನೀಡಿರುವ ಕೊಡುಗೆ ಏನು? ಎಂದು ಪ್ರಶ್ನಿಸಿದರು.  ಕಾಂಗ್ರೆಸ್‌ ನಾಯಕರಾದ ಪ್ರಭಾಕರ ಶ್ರೀಯಾನ್‌, ಪ್ರಕಾಶ್‌ ಸಾಲ್ಯಾನ್‌, ವಿಶ್ವಾಸ್‌ ಕುಮಾರ್‌ದಾಸ್‌, ಟಿ.ಕೆ. ಸುಧೀರ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಕೆಸಿಸಿಐ ವಿರೋಧ
ಮಂಗಳೂರು: ಆದಾಯ ತೆರಿಗೆ ಪ್ರಧಾನ ಆಯುಕ್ತರ ಕಚೇರಿಯನ್ನು ಯಾವುದೇ ಕಾರಣಕ್ಕೂ ಗೋವಾ ಕಚೇರಿಯೊಂದಿಗೆ ವಿಲೀನ ಮಾಡಬಾರದು ಎಂದು ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ವತಿಯಿಂದ ಹೊಸದಿಲ್ಲಿಯ ಸೆಂಟ್ರಲ್‌ ಬೋರ್ಡ್‌ ಆಫ್‌ ಡೈರೆಕ್ಟ್ ಟ್ಯಾಕ್ಸ್‌ನ ಅಧ್ಯಕ್ಷ ಪ್ರಮೋದ್‌ ಚಂದ್ರ ಎಂ. ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸಚಿವರಾದ ನಿರ್ಮಲಾ, ಡಿ.ವಿ., ಸಂಸದರಾದ ನಳಿನ್‌, ಶೋಭಾ, ಅನಂತ್‌ ಕುಮಾರ್‌ ಹೆಗಡೆ, ದ.ಕ. ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೂ ಮನವಿ ಸಲ್ಲಿಸಲಾಗಿದೆ.

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮನವಿ
ಉಡುಪಿ, ಸೆ. 5: ಪಿಸಿಐಟಿ ಕಚೇರಿಯನ್ನು ಮಂಗಳೂರಿನಲ್ಲೇ ಉಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ರಾಸಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. , ಸಂಸದರಾದ ನಳಿನ್‌, ಶೋಭಾ ಕರಂದ್ಲಾಜೆ ಅವರಿಗೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ವಿನಂತಿಸಿದ್ದಾರೆ.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.