ಮಂಗಳೂರು: ರೌಡಿ ಶೀಟರ್ ರಾಹುಲ್ ಕಕ್ಕೆ ಕೊಲೆ ಕೇಸ್; 6 ಆರೋಪಿಗಳ ಬಂಧನ
Team Udayavani, May 9, 2022, 12:54 PM IST
ಮಂಗಳೂರು: ಎಮ್ಮೆಕೆರೆಯಲ್ಲಿ ನಡೆದಿದ್ದ ರಾಹುಲ್ ಕಕ್ಕೆ ಕೊಲೆ ಪ್ರಕರಣದ ಆರು ಆರೋಪಿಗಳನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಮಹೇಂದ್ರ ಶೆಟ್ಟಿ(27), ಅಕ್ಷಯ್ ಕುಮಾರ್(25), ಸುಶಿತ್(20), ಧಿಲ್ಲೇಶ್ ಬಂಗೇರ (20)ಎನ್ನುವವರು ಪ್ರಮುಖ ಆರೋಪಿಗಳಾಗಿದ್ದು, ಕೃತ್ಯಕ್ಕೆ ಸಹಕರಿಸಿದ ಶುಭಂ (26) ಮತ್ತು ವಿಷ್ಣು(20) ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಎಲ್ಲಾ ಆರೋಪಿಗಳು ಮಂಗಳೂರಿನವರೆ ಆಗಿದ್ದಾರೆ. ಬಂಧಿತರಿಂದ ತಲವಾರುಗಳು, ಕತ್ತಿ ಮತ್ತು ಮಾರಕಾಯುಧಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ : ಮಂಗಳೂರು : ಮಸೀದಿ ಬಳಿ ಮೊಳಗಿದ ಕೊರಗಜ್ಜನ ಭಕ್ತಿ ಗೀತೆ
ಇದುವರೆಗಿನ ತನಿಖೆಯಲ್ಲಿ ಪ್ರಕರಣದಲ್ಲಿ ಒಟ್ಟು 13 ಮಂದಿ ಭಾಗಿಯಾಗಿರುವುದಾಗಿ ತಿಳಿದು ಬಂದಿದ್ದು, ಆ ಪೈಕಿ 8 ಮಂದಿ ಅಪರಾಧ ಹಿನ್ನಲೆಯುಳ್ಳವರಾಗಿದ್ದರೆ. ಬಂಧಿತ ಸುಶೀತ್ ಮೇಲೆ ಒಂದು ಕೊಲೆ ಯತ್ನ ಪ್ರಕರಣ , ಅಕ್ಷಯ್ ಕುಮಾರ್ ಮೇಲೆ ಹಲ್ಲೆ ಪ್ರಕರಣ ಈಗಾಗಲೇ ದಾಖಲಾಗಿತ್ತು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಎಮ್ಮೆಕೆರೆ ಮೈದಾನ ದಲ್ಲಿ ರೌಡಿಶೀಟರ್ ರಾಹುಲ್ ಹೊಯಿಗೆ ಬಜಾರ್ ನನ್ನು ಹತ್ಯೆಗೈಯಲಾಗಿತ್ತು. ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ