Mangaluru: ಡಿವೈಡರ್ ಗೆ ಢಿಕ್ಕಿ ಹೊಡೆದ ಸ್ಕೂಟರ್, ಸವಾರ ಮೃತ್ಯು
Team Udayavani, Jun 23, 2023, 4:43 PM IST
ಮಂಗಳೂರು: ನಗರದ ಯೆಯ್ಯಾಡಿ ಶರ್ಬತ್ ಕಟ್ಟೆ ಬಳಿ ನಾಯಿಯೊಂದು ರಸ್ತೆಯಲ್ಲಿ ಅಡ್ಡದಾಟಿದ ಪರಿಣಾಮ ಸ್ಕೂಟರ್ ಸವಾರ ಆಯತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ.
ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಮೃತರು. ಶುಕ್ರವಾರ ಬೆಳಗ್ಗೆ ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ನಾಯಿಯೊಂದು ಅಡ್ಡದಾಟಿದೆ. ಈ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್ ನಾಯಿಗೆ ಢಿಕ್ಕಿ ಹೊಡೆದಿದ್ದು, ಕೆಳಗೆ ಬೀಳುವಾಗ ಡಿವೈಡರ್ ತಲೆಗೆ ಬಡಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಈ ವೇಳೆ ದಾರಿಮಧ್ಯೆ ಮೃತಪಟ್ಟಿದ್ದಾರೆ.
ಸಂಸ್ಥೆಯೊಂದರ ಡೀಲರ್ ಶಿಪ್ ಪಡೆದುಕೊಂಡು ವ್ಯವಹಾರ ನಿರ್ವಹಿಸುತ್ತಿದ್ದ ನರಸಿಂಹ ಗಟ್ಟಿ ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಇದನ್ನೂ ಓದಿ: ವಿಮಾನ ಹೈಜಾಕ್ ಕುರಿತು ಮೊಬೈಲ್ ಸಂಭಾಷಣೆ… ವಿಮಾನ ಪ್ರಯಾಣಿಕ ಮುಂಬೈ ಪೊಲೀಸರ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ