ಮಂಗಳೂರು : ರೌಡಿ ಶೀಟರ್ ರಾಹುಲ್ ಹೊಯಿಗೆ ಬಜಾರ್ ಬರ್ಬರ ಹತ್ಯೆ
Team Udayavani, Apr 28, 2022, 7:15 PM IST
ಮಂಗಳೂರು : ಎಮ್ಮೆಕೆರೆ ಮೈದಾನ ದಲ್ಲಿ ರೌಡಿಶೀಟರ್ ರಾಹುಲ್ ಹೊಯಿಗೆ ಬಜಾರ್ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಗುರುವಾರ ಸಂಜೆ ನಡೆದಿದೆ
ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಾಲ್ಕು ಮಂದಿ ದುಷ್ಕರ್ಮಿಗಳು ಪೂರ್ವದ್ವೇಷ ದ ಹಿನ್ನೆಲೆಯಲ್ಲಿ ಚಾಕು, ಬಾಟಲಿಯಲ್ಲಿ ಹಲ್ಲೆಗೈದು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಹೆಚ್ಚಿನ ವಿವರಗಳನ್ನು ನೀರಿಕ್ಷಿಸಲಾಗುತ್ತಿದೆ.