ಮಂಗಳೂರು: ಲಾರಿಯ ಚಕ್ರಕ್ಕೆ ಸಿಲುಕಿದ ಸ್ಕೂಟರ್, ಸವಾರ ಸಾವು
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ ಯು.ಟಿ.ಖಾದರ್
Team Udayavani, Apr 25, 2022, 10:19 AM IST
ಮಂಗಳೂರು: ಟ್ರಕ್ನ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಜಪ್ಪಿನಮೊಗರು ಮತ್ತು ನಡುಮೊಗರು ನಡುವಿನ ರಾಷ್ಟ್ರೀಯ ಹೆದ್ದಾರಿ 66 ನಲ್ಲಿ ನಡೆದಿದೆ.
ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಕೊಣಾಜೆಯ ರೊನಾಲ್ಡ್(58 ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಜಾಗರೂಕತೆಯಿಂದ ಅತೀವೇಗವಾಗಿ ಬಂದ ಟ್ರಕ್ ಮೊದಲು ಕಾರೊಂದಕ್ಕೆ ಢಿಕ್ಕಿಯಾಗಿ ಬಳಿಕ ಸ್ಕೂಟರ್ ಗೆ ಗುದ್ದಿದೆ ಎಂದು ತಿಳಿದು ಬಂದಿದೆ.
ಮಂಗಳೂರು ಶಾಸಕ ಯು.ಟಿ.ಖಾದರ್ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.