Mangaluru: ಭಯೋತ್ಪಾದಕರು, ರಾಷ್ಟ್ರವಿರೋಧಿಗಳಿಗೆ ಕಾಂಗ್ರೆಸ್‌ ಮೇಲೆ ವಿಶ್ವಾಸ: ಪೂಜಾರಿ


Team Udayavani, Mar 5, 2024, 9:25 AM IST

4-poojary

ಮಂಗಳೂರು: ರಾಷ್ಟ್ರ ವಿರೋಧಿಗಳು ಮತ್ತು ಭಯೋತ್ಪಾದಕ ರಿಗೆ ಕಾಂಗ್ರೆಸ್‌ ಮೇಲೆ ವಿಶ್ವಾಸ ಬಂದಿದೆ. ಹಾಗಾಗಿ ಅವರು ಬೀದಿಗಿಳಿದು ಕೆಲಸ ಮಾಡುತ್ತಾ ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಟೀಕಿಸಿದ್ದಾರೆ.

ರಾಷ್ಟ್ರ ವಿರೋಧಿ ಭಾವನೆ ಹೊಂದಿದ ವರು, ಭಯೋತ್ಪಾದಕರಿಗೆ ಇದುವರೆಗೆ ಹೆದರಿಕೆ ಇತ್ತು. ಈಗ ತಮ್ಮ ಬಗ್ಗೆ ಕಾಂಗ್ರೆಸ್‌ ಸರಕಾರ ಸಹಾನುಭೂತಿ ಹೊಂದಿದೆ. ಸರಕಾರ ನಮ್ಮನ್ನು ಮುಟ್ಟುವುದಿಲ್ಲ ಎಂಬ ವಿಶ್ವಾಸ ಅವರಲ್ಲಿ ಮೂಡಿದೆ. ವಿಧಾನಸೌಧದ ಒಳಗೆ ಪಾಕ್‌ ಪರ ಘೋಷಣೆ ಮಾಡಲಾಗಿದೆ. ರಾಜಾರೋಷವಾಗಿ ಹೊಟೇಲ್‌ನಲ್ಲಿ ಬಾಂಬ್‌ ಇಟ್ಟವರನ್ನು ಕೂಡ ಬಂಧಿಸಿಲ್ಲ. ರಾಜ್ಯದ ಜನರಲ್ಲಿ ಭಯ ಮೂಡಿದೆ. ಅಂಥವರ ಬಗ್ಗೆ ಸರಕಾರ ಮೃದು ಧೋರಣೆ ತಾಳಿದೆ ಎಂದು ಅವರು ಸೋಮವಾರ ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಅಧಿಕಾರ ತ್ಯಜಿಸಲಿ

ಮುಖ್ಯಮಂತ್ರಿಯವರು ಸಮೃದ್ಧ ಕರ್ನಾಟಕ ನಿರ್ಮಿಸುವುದಾಗಿ ಹೇಳುತ್ತಿ ದ್ದಾರೆ. ಪಾಕ್‌ ಪರ ಘೋಷಣೆ ಹಾಕು ವುದು, ಬಾಂಬ್‌ ಸ್ಫೋಟಿಸುವುದು ಸಮೃದ್ಧ ಕರ್ನಾಟಕದಲ್ಲಿ ಸೇರಿವೆಯೇ ಎಂದು ಅವರು ಸ್ಪಷ್ಟಪಡಿಸಬೇಕು. ಬಾಂಬ್‌ ಹಾಕುವವರು, ರಾಷ್ಟ್ರವಿರೋಧಿ ಗಳನ್ನು ನಿಯಂತ್ರಿಸಲಾಗದಿದ್ದರೆ ಅಧಿಕಾರ ತ್ಯಜಿಸಬೇಕು ಎಂದು ಶ್ರೀನಿವಾಸ ಪೂಜಾರಿ ಹೇಳಿದರು.

ರಾಷ್ಟ್ರವಿರೋಧಿಗಳಿಗೆ ಆಹ್ವಾನ

ಸರಕಾರ 10ರಿಂದ 20 ಕೋ. ರೂ. ಖರ್ಚು ಮಾಡಿ “ಸಂವಿಧಾನ ಉಳಿಸಿ’ ಕಾರ್ಯಕ್ರಮ ನಡೆಸಿತು. ಅದಕ್ಕೆ ರಾಷ್ಟ್ರವಿರೋಧಿ ಲೇಖಕಿಯನ್ನು ಕರೆಯಿಸಿ ಭಾಷಣ ಮಾಡಿಸಿದೆ. ಕಾಂಗ್ರೆಸ್‌ ಸರಕಾರದ ಯೋಚನೆ ಹೇಗಿರಬಹುದು ಎಂಬುದನ್ನು ಇದರ ಮೂಲಕ ಜನ ತಿಳಿದುಕೊಂಡಿದ್ದಾರೆ. ಸಂವಿಧಾನ, ಅಂಬೇಡ್ಕರ್‌ ಹೆಸರಿನಲ್ಲಿ ಪ್ರಚಾರ ಪಡೆಯಲು ಸರಕಾರ ಮುಂದಾಗಿದೆ. ಬಿಜೆಪಿ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದೆ. ಸಂವಿಧಾನಕ್ಕೆ ತೊಂದರೆಯಾದದ್ದು ತುರ್ತುಪರಿಸ್ಥಿತಿಯಿಂದ. ಆ ತುರ್ತು ಪರಿಸ್ಥಿತಿಗೆ ಕಾರಣ ಯಾರು ಎಂಬುದನ್ನು ಕಾಂಗ್ರೆಸ್‌ನವರು ಹೇಳಬೇಕು. ಹೊಸದಿಲ್ಲಿಯಲ್ಲಿ ಇಂದಿರಾ ಗಾಂಧಿ, ರಾಜೀವ್‌ ಗಾಂಧಿ, ನೆಹರೂ ಅವರ ಸ್ಮಾರಕಕ್ಕೆ 5 0ರಿಂದ 100 ಎಕರೆ ಜಾಗ ನೀಡಿದ್ದ ಕಾಂಗ್ರೆಸ್‌ ಸರಕಾರ ಅಂಬೇಡ್ಕರ್‌ ಸಂಸ್ಕಾರಕ್ಕೆ 10 ಅಡಿ ಜಾಗವನ್ನು ನೀಡದೆ ಅವರ ಪಾರ್ಥಿವ ಶರೀರವನ್ನು ಮುಂಬೈಗೆ ಕೊಂಡೊಯ್ಯುವಂತಾಗಿತ್ತು. ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿಯಿಂದ ಭಯೋತ್ಪಾದನೆ ನಿಂತಿರುವುದು ಮಾತ್ರವಲ್ಲದೆ ಅಲ್ಲಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಾತಿಯನ್ನು ಕೂಡ ನೀಡಿದೆ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.

ಪಕ್ಷದ ತೀರ್ಮಾನ ಅಂತಿಮ

ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗೋ ಬ್ಯಾಕ್‌ ಚಳವಳಿ ನಡೆದ ಕುರಿತು ಪ್ರತಿಕ್ರಿಯಿಸಿದ ಅವರು, ಇದೆಲ್ಲ ಪಕ್ಷದಲ್ಲಿ ಸಹಜ. ಕಾರ್ಯಕರ್ತರು ಅವರ ಅಭಿಪ್ರಾಯ ಹೇಳುವುದರಲ್ಲಿ ತಪ್ಪಿಲ್ಲ. ಆದರೆ ಪಕ್ಷ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ಹೆಗ್ಡೆ ಬಿಜೆಪಿಯಲ್ಲಿದ್ದಾರೆ

ಜಯಪ್ರಕಾಶ್‌ ಹೆಗ್ಡೆ ನಮ್ಮ ಪಕ್ಷಕ್ಕೆ ಬಂದಿದ್ದರು. ಅವರನ್ನು ಸಿಎಂ ಮೂರು ವರ್ಷದವರೆಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಿದರು. ಅವರು ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಅವರದ್ದು ಪಕ್ಷಾತೀತ ಹುದ್ದೆಯಾಗಿತ್ತು. ವರದಿ ನೀಡಿದ ಅನಂತರ ಅವರು ಆಯೋಗದಿಂದ ಮುಕ್ತರಾಗಿದ್ದಾರೆ. ಬಿಜೆಪಿಯಲ್ಲಿದ್ದಾರೆ. ಬೇರೆ ಪಕ್ಷಕ್ಕೆ ಹೋಗುವ ವಿಚಾರದ ಬಗ್ಗೆ ಏನೂ ಗೊತ್ತಿಲ್ಲ. ಅವರು ಬಿಜೆಪಿ ತೊರೆಯುವುದಿಲ್ಲ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.

ಪಕ್ಷದ ಮುಖಂಡರಾದ ಮಂಜುಳಾ ರಾವ್‌, ಮನೋಹರ್‌ ಕದ್ರಿ, ವಸಂತ್‌ ಜೆ. ಪೂಜಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.