Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!


Team Udayavani, Apr 17, 2024, 4:42 PM IST

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

ಮಹಾನಗರ:ಸ್ವಚ್ಛತೆ ಎನ್ನುವುದು ಮಂಗಳೂರು ನಗರ ಭಾಗದಲ್ಲಿ ಮಾತ್ರವಲ್ಲ, ಹೊರವಲಯದ ಗ್ರಾಮೀಣ ಭಾಗದಲ್ಲೂ
ಸ್ಥಳೀಯಾಡಳಿತಗಳಿಗೆ ಸವಾಲಾಗಿದೆ. ನಗರ ವ್ಯಾಪ್ತಿಯಲ್ಲಿ ಹಾದು ಹೋಗುವ ಹೆದ್ದಾರಿ ಬದಿ, ಮುಖ್ಯ ರಸ್ತೆ-ಒಳರಸ್ತೆಗಳ ಬದಿಯಲ್ಲಿ ತ್ಯಾಜ್ಯ ಸುರಿಯಲಾಗುತ್ತಿದೆ. ನಗರದಿಂದ ಹೊರಗೆ ಗ್ರಾಮೀಣ ಪ್ರದೇಶದತ್ತ ಸಾಗಿದರೆ ಬಹುತೇಕ ರಸ್ತೆ ಬದಿಯಲ್ಲಿ ಉದ್ದಕ್ಕೂ ಪ್ಲಾಸ್ಟಿಕ್‌ ಪೊಟ್ಟಣಗಳಲ್ಲಿ ಕಟ್ಟಿ ಎಸೆಯುವುದು ಕಂಡು ಬರುತ್ತಿದೆ. ಇದರಿಂದ ಸ್ಥಳದಲ್ಲಿ ಅಸಹ್ಯ ವಾತಾವರಣದ ಮಾತ್ರವಲ್ಲದೆ, ರಸ್ತೆ ಯಲ್ಲಿ ಸಾಗುವವರಿಗೆ ವಾಸನೆ ಬರುತ್ತಿದೆ. ರೋಗ ಹರಡುವ ತಾಣಗಳಾಗಿಯೂ ಇವು ಮಾರ್ಪಾಡಾಗುತ್ತಿವೆ.

ಕೆಲವು ಕಡೆಗಳಲ್ಲಿ “ಕಸ ಎಸೆಯ ಬಾರದು’ ಎಂದು ಸೂಚನ ಫ‌ಲಕ ಅಳವಡಿಸಿದರೂ ಪ್ರಯೋಜನ ವಾಗುವುದಿಲ್ಲ. ನಗರದ ಹೊರವಲ ಯದ ಗುರುಪುರ, ಮೂಡುಶೆಡ್ಡೆ, ಅಡ್ಯಾರು ಮೊದಲಾದ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದವರನ್ನು ಪತ್ತೆಹಚ್ಚಿ ದಂಡ ವಿಧಿಸಿರುವ ಉದಾಹರಣೆಗಳೂ ಇವೆ. ಆದರೆ ಇದರಿಂದ ತ್ಯಾಜ್ಯ ಬೀಳುವುದು ನಿಂತಿಲ್ಲ. ಕೆಮರಾ ಅಳವಡಿಸಿದರೆ ಆ ಸ್ಥಳವನ್ನು ಬಿಟ್ಟು ಇನ್ನೊಂದು ಸ್ಥಳದಲ್ಲಿ ಎಸೆಯುತ್ತಾರೆ!

ಪ್ರಸ್ತುತ ಗ್ರಾಮೀಣ ಭಾಗದ ಎಲ್ಲ ಪಂಚಾಯತ್‌ ವ್ಯಾಪ್ತಿಯಲ್ಲಿ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹ ವ್ಯವಸ್ಥೆ ಜಾರಿಯಲ್ಲಿದೆ. ಕೆಲವು ಪಂಚಾಯತ್‌ ಹಸಿ – ಒಣ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಿದರೆ, ಕೆಲವು ಪಂಚಾಯತ್‌ ಗಳು ಒಟ್ಟಾಗಿ ಸಂಗ್ರಹಿಸಿ ವಿಲೇವಾರಿ ಮಾಡುತ್ತವೆ. ತ್ಯಾಜ್ಯವನ್ನು ನೇರವಾಗಿ ಮಹಾನಗರ ಪಾಲಿಕೆಯ ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕೆಲವು ಪಂಚಾಯತ್‌ಗಳು ಸಾಗಿಸುತ್ತವೆ. ಸ್ವಂತ ಘಟಕಗಳನ್ನು ಹೊಂದಿರುವ ಪಂಚಾಯತ್‌ಗಳು ಇವೆ.

ಜಿಲ್ಲೆಯಲ್ಲಿ 141 ಗ್ರಾ.ಪಂ.ಗಳು ಹೊಸ ಪೂರ್ಣ ಪ್ರಮಾಣದ ಘನತ್ಯಾಜ್ಯ ಘಟಕಗಳನ್ನು ಹೊಂದಿವೆ. 18 ಬಹುಗ್ರಾಮ ಮಾದರಿಯಲ್ಲಿ ಘಟಕಗಳಿವೆ. 48 ಗ್ರಾ.ಪಂ.ಗಳಲ್ಲಿ ಹಳೆ ಕಟ್ಟಡ, 16 ತಾತ್ಕಾಲಿಕ ಕಟ್ಟಡದಲ್ಲಿ ಘಟಕಗಳು ಕಾರ್ಯಾಚರಿಸುತ್ತಿವೆ. ಗ್ರಾಮ ಮಟ್ಟದಲ್ಲಿ ಹಸಿ ಕಸ ಶೇ.90ರಷ್ಟು ಮನೆಯಲ್ಲೇ ವಿಲೇವಾರಿಯಾಗುತ್ತದೆ. ಒಣ ಹಸ ಮಾತ್ರ ಹೆಚ್ಚು ಸಂಗ್ರಹ ವಾಗುತ್ತದೆ. ಎಂಆರ್‌ಎಫ್‌ ಕೇಂದ್ರ ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ಆರಂಭಿಸಿದರೆ ತ್ಯಾಜ್ಯ ಬೀಳುವುದು ಸ್ಥಗಿತಗೊಳ್ಳಲಿದೆ ಎನ್ನುವುದು ಅಧಿಕಾರಿಗಳ ಮಾತು.

ಎಂಆರ್‌ಎಫ್‌ ಘಟಕ
ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಸಮಗ್ರ ಘನ ತ್ಯಾಜ್ಯ,ನಿರ್ವಹಣ ಕೇಂದ್ರ (ಮೆಟೀರಿಯಲ್‌.ರಿಕವರಿ ಫೆಸಿಲಿಟಿ – ಎಂಆರ್‌ಎಫ್‌).ಘಟಕಗಳು ಜಿಲ್ಲೆಯ ವಿವಿಧ ತಾಲೂಕು. ಗಳಲ್ಲಿ ನಿರ್ಮಾಣವಾಗುತ್ತಿವೆ.
ತೆಂಕ ಎಡಪದವಿನಲ್ಲಿ ಈಗಾಗಲೇ ನಿರ್ಮಾಣ ವಾಗಿರುವ ಘಟಕದಲ್ಲಿ ಮಂಗಳೂರು, ಮೂಡುಬಿದಿರೆ, ಮೂಲ್ಕಿ, ಬಂಟ್ವಾಳ ತಾಲೂಕಿನ ಕೆಲವು ಗ್ರಾ.ಪಂ.ಗಳು ಸಹಿತ ಒಟ್ಟು 51 ಗ್ರಾಮ ಪಂಚಾಯತ್‌ಗಳ ತ್ಯಾಜ್ಯವನ್ನು ಇಲ್ಲಿ ಸಂಸ್ಕರಿಸಲಾಗುತ್ತಿದೆ. ಕೆಲವು ಗ್ರಾ.ಪಂ.ಗಳಲ್ಲಿ ತ್ಯಾಜ್ಯ ವಿಂಗಡನೆ ಸಮರ್ಪಕವಾಗಿ ನಡೆಯದ ಹಿನ್ನೆಲೆಯಲ್ಲಿ ತ್ಯಾಜ್ಯ ಬರುತ್ತಿಲ್ಲ.

ತ್ಯಾಜ್ಯ ವಿಲೇವಾರಿಗೆ ಆದ್ಯತೆ
ಗ್ರಾಮೀಣ ಭಾಗದಲ್ಲಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹ ವ್ಯವಸ್ಥೆ ಗ್ರಾಪಂಗಳಲ್ಲಿ ಜಾರಿಯಲ್ಲಿ. ಎಂಆರ್‌ಎಫ್‌ ಘಟಕಗಳ ಮೂಲಕವೂ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ಸಂಸ್ಕರಣೆಯನ್ನೂ ಮಾಡಲಾಗುತ್ತಿದೆ. ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯುವವರಿಗೆ ದಂಡ ವಿಧಿಸುವ ಕೆಲಸವೂ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದೆ. ಜನರು ಕೂಡ ಪರಿಸರ ಕಾಳಜಿಯನ್ನು ಹೊಂದುವ ಮೂಲಕ ಸುತ್ತಮುತ್ತಲಿನ ಪರಿಸರ ಸಂರಕ್ಷಿಸುವ ಕೆಲಸವನ್ನೂ ಮಾಡಬೇಕು.
*ಡಾ| ಆನಂದ್‌ ಕೆ., ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ

*ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

karch

Forbes Adviser list; ಪಾಕಿಸ್ತಾನದ ಈ ನಗರ ಪ್ರವಾಸಿಗರಿಗೆ ಅತ್ಯಂತ ಅಪಾಯಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (6) copy

Mangaluru: ಬಗೆಹರಿಯದ ಬಜಾಲ್‌ ಅಂಡರ್‌ಪಾಸ್‌ ಅವ್ಯವಸ್ಥೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

6-bng

Bengaluru: ರೈಲ್ವೆ ನಿಲ್ದಾಣದಲ್ಲಿ ನಾಯಿ ಮಾಂಸ ಗಲಾಟೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.