ಕದ್ರಿ ಪಾರ್ಕ್: ಮಾವಿನ ಮೇಳಕ್ಕೆ ಸಂಭ್ರಮದ ತೆರೆ
Team Udayavani, May 27, 2019, 11:19 AM IST
ಮಹಾನಗರ: ತೋಟಗಾರಿಕೆ ಇಲಾಖೆ ದ.ಕ., ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ಮಂಡಳಿ ಸಹಯೋಗದಲ್ಲಿ ಕದ್ರಿ ಉದ್ಯಾನವನದಲ್ಲಿ ಶುಕ್ರವಾರದಿಂದ ಆರಂಭವಾದ ಬೆಳೆಗಾರಿಂದ ಬಳಕೆದಾರರಿಗೆ ನೇರ ಮಾವು ಮಾರಾಟ ಮೇಳಕ್ಕೆ ರವಿವಾರ ಸಂಭ್ರಮದ ತೆರೆ ಬಿದ್ದಿದೆ.
ಮೇಳದಲ್ಲಿ ಮಲ್ಗೊವಾ, ದಶಹರಿ, ಸಕ್ಕರೆಗುತ್ತಿ, ಪೈರಿ, ಮುಂಡಾ, ಬೇಗನ್ಪಲ್ಲಿ, ಸಿಂಧೂರ, ಶುಗರ್ ಬೇಬಿ, ಕೇಸರ್, ಆಪೂಸ್, ಹಿಮಾಯತ್, ಮಲ್ಲಿಕಾ, ರಸಪೂರಿ, ಬಾದಾಮಿ, ಸೇಂದೂರು, ಸೋತಾಪುರಿ, ಸುವರ್ಣರೇಖ ಸೇರಿದಂತೆ 10ರಿಂದ 15ಕ್ಕೂ ಅಧಿಕ ವೈವಿಧ್ಯಮಯ ತಳಿಯ ಮಾವುಗಳನ್ನು ಗ್ರಾಹಕರು ಖರೀದಿಸಿ ಮಾವಿನ ರುಚಿ ಸವಿದರು. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಮಾವು ಬೆಳೆಗಾರರಿಗೆ ಉತ್ತಮ ಬೆಲೆ ನೀಡುವ ಉದ್ದೇಶದಿಂದ, ಮಾವು ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಕಾರಣದಿಂದ ಹಾಗೂ ನೈಸರ್ಗಿಕವಾಗಿ ಮಾಗಿಸಿದ ಮಾವುಗಳನ್ನು ಗ್ರಾಹಕರಿಗೆ ನೀಡುವ ಉದ್ದೇಶದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಾವು ಮೇಳಗಳನ್ನು ಆಯೋಜಿಸಲಾಗುತ್ತಿದೆ.
ರಜಾದಿನ ಮೇಳಕ್ಕೆ ಉತ್ತಮ ಸ್ಪಂದನೆ
ರವಿವಾರ ರಜಾದಿನವಾದ್ದರಿಂದ ಮಾವು ಮೇಳಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಮುಂಜಾನೆಯಿಂದಲೇ ಮಾವು ಮೇಳದತ್ತ ಆಗಮಿಸಿದ ಜನರು ತಮಗೆ ಇಷ್ಟವಾದ ತಳಿಯ ಮಾವುಗಳನ್ನು ಖರೀದಿಸಿದರು. ಕಳೆದ ಎರಡು ದಿನಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದ ಮೇಳಕ್ಕೆ ರವಿವಾರ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ