ಮಳೆಕೊಯ್ಲು ಅಳವಡಿಸಿ ಮಾದರಿಯಾಗುತ್ತಿದ್ದಾರೆ ಹಲವರು

ಉದಯವಾಣಿಯ 'ಮನೆ ಮನೆಗೆ ಮಳೆಕೊಯ್ಲು' ಅಭಿಯಾನದ ಪರಿಣಾಮ

Team Udayavani, Jul 7, 2019, 5:00 AM IST

m-18

ಮಹಾನಗರ: ಜಲಸಂರಕ್ಷಣೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಉದಯವಾಣಿ ‘ಮನೆ ಮನೆಗೆ ಮಳೆಕೊಯ್ಲು’ ಅಭಿಯಾನ ಹಮ್ಮಿಕೊಂಡಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಉಳ್ಳಾಲ ಬಂಡಿಕೊಟ್ಯದ ಸುಧಾಕರ್‌ ಉಳ್ಳಾಲ ಅವರು ‘ಉದಯವಾಣಿ’ ನಡೆಸಿದ ‘ಮನೆಮನೆಗೆ ಮಳೆಕೊಯ್ಲು’ ಅಭಿಯಾನ ಮತ್ತು ಕಾರ್ಯಾಗಾರದಿಂದ ಪ್ರೇರಿತರಾಗಿ ತಮ್ಮ ಮನೆಯಲ್ಲಿ ಮಳೆಕೊಯ್ಲು ಅಳವಡಿಸಿದ್ದಾರೆ.

ಸುಧಾಕರ್‌ ಅವರ ಮನೆಯಲ್ಲಿ ನೀರಿಗೆ ಸಮಸ್ಯೆ ಇಲ್ಲದಿದ್ದರೂ ಬೇಸಗೆಯಲ್ಲಿ ನೀರಿನಲ್ಲಿ ಸ್ವಲ್ಪ ಪ್ರಮಾಣದ ಕಬ್ಬಿಣದ ಅಂಶವೂ ಬರುವುದರಿಂದ ತೊಂದರೆಯಾಗುತ್ತಿತ್ತು. ಅದನ್ನು ಮನಗಂಡು ಉದಯವಾಣಿಯ ಮನೆಮನೆಗೆ ಮಳೆಕೊಯ್ಲು ಶಿಬಿರದಲ್ಲಿ ಭಾಗವಹಿಸಿದರು. ಶಿಬಿರದಲ್ಲಿ ದೊರೆತ ಪ್ರೇರಣೆ ಹಾಗೂ ಮಾಹಿತಿಯಿಂದಾಗಿ ಸರಳವಾಗಿ ಮಳೆಕೊಯ್ಲು ಅಳವಡಿಸಿರುವುದಾಗಿ ಅವರು ತಿಳಿಸಿದ್ದಾರೆ.

ಬಾವಿಯ ಪಕ್ಕದಲ್ಲಿ ಪ್ಲಾಸ್ಟಿಕ್‌ ಡ್ರಮ್‌ ಇಟ್ಟು ದೊಡ್ಡ ಹಾಗೂ ಸಣ್ಣ ಗಾತ್ರದ ಜಲ್ಲಿ, ಮರಳನ್ನು ಹಾಕಲಾಗಿದೆ. ಬಳಿಕ ಸರಳವಾದ ಫಿಲ್ಟರ್‌ ವ್ಯವಸ್ಥೆ ಮಾಡಿದ್ದಾರೆ. ಮನೆಯ ಛಾವಣಿ ನೀರು ಫಿಲ್ಟರ್‌ ಆಗಿ ಬಾವಿಗೆ ಬೀಳುವಂತೆ ನೋಡಿಕೊಂಡಿದ್ದಾರೆ.

ಈ ವರ್ಷ ಮಳೆಗಾಲ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ. ನಮ್ಮ ಮನೆಯಲ್ಲಿ ಯಾವ ರೀತಿಯಲ್ಲಿ ‘ಮಳೆಕೊಯ್ಲು’ ನಿರ್ವಹಣೆ ಮಾಡಬಹುದೆಂದು ಕುಟುಂಬದವರೊಂದಿಗೆ ಚರ್ಚಿಸಿ ಈ ರೀತಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ ಎಂದು ಹೇಳುತ್ತಾರೆ ಅಲಂಕಾರು ಸತ್ಯನಾರಾಯಣ ಭಟ್.ತಮ್ಮ ಮನೆಯ, ದನದ ಕೊಟ್ಟಿಗೆಯ ಛಾವಣಿ ನೀರನ್ನು ಟ್ಯಾಂಕಿ, ಫಿಲ್ಟರ್‌ನ ಸಹಾಯದಿಂದ ಪೈಪ್‌ನ ಮೂಲಕ ನಮ್ಮ ಮನೆಯ ಅಂಗಳದಲ್ಲಿ ಇರುವ ನಿತ್ಯಉಪಯೋಗದ ಕೊಳವೆಬಾವಿಗೆ ಮರುಪೂರಣ ಮಾಡುತ್ತಿದ್ದೇವೆ. ಛಾವಣಿಯಿಂದ ಟ್ಯಾಂಕಿಗೆ ಬರುವ ನೀರಿನಲ್ಲಿರುವ ಕಸಕಡ್ಡಿ ತಡೆ ಹಿಡಿಯಲು ಕಬ್ಬಿಣದ ಮೆಶ್‌ ಅನ್ನು ಟ್ಯಾಂಕಿಗೆ ಅಳವಡಿಸಿದ್ದೇವೆ. ಮುಂದಿನ ವರ್ಷ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎನ್ನುವ ಭಾವನೆ ನಮ್ಮದು ಎಂದು ಅವರು ಪತ್ರಿಕೆಗೆ ತಿಳಿಸಿದ್ದಾರೆ.

ಬೋರ್‌ ವೆಲ್, ಬಾವಿಗೂ ಮಳೆಕೊಯ್ಲು

ಕಿನ್ನಿಗೋಳಿ ಪಕ್ಷಿಕೆರೆ ನಿವಾಸಿ ವಿನ್ಸೆಂಟ್ ಪತ್ರಾವೋ ಅವರು ತಮ್ಮ ಮನೆಯ ಟೆರೇಸ್‌ಗೆ ಬೀಳುವ ಮಳೆ ನೀರನ್ನು ಒಂಚೂರು ಪೋಲು ಮಾಡಲು ಅವಕಾಶ ನೀಡದೆ ಬಾವಿಗೆ ಹಾಗೂ ಬೋರ್‌ವೆಲ್ಗೆ ಅಳವಡಿಸಿದ್ದಾರೆ.

ನಮ್ಮ ಮನೆ 11 ಸೆಂಟ್ಸ್‌ ಜಾಗದಲ್ಲಿದ್ದು, ನೀರಿನ ಸಮಸ್ಯೆ ಅಷ್ಟಾಗಿ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ನೀರಿನ ಅಭಾವ ಕಾಡುವ ಭಯವಿತ್ತು. ಆ ಹಿನ್ನಲೆಯಲ್ಲಿ ಮಳೆಕೊಯ್ಲು ಅಳವಡಿಸಿದ್ದೇವೆ. ಟೆರೇಸ್‌ನ ಎರಡು ಬದಿಗಳಲ್ಲೂ ಪೈಪ್‌ ಅಳವಡಿಸಿ ಅಲ್ಲಿಂದ ಮಳೆ ನೀರನ್ನು ನೇರವಾಗಿ ಅಂಗಳದ ಬದಿಯಲ್ಲಿರುವ ಟ್ಯಾಂಕ್‌ಗೆ ಬಿಡಲಾಗಿದೆ. ಟ್ಯಾಂಕ್‌ಗೆ ಹೊಗೆ, ಜಲ್ಲಿ ಹಾಕಿ ಫಿಲ್ಟರ್‌ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಂದ ಎರಡು ಪೈಪ್‌ಗ್ಳಲ್ಲಿ ನೀರು ಬೋರ್‌ವೆಲ್ ಹಾಗೂ ಬಾವಿಗೆ ಹೋಗುತ್ತದೆ. ವಾರಗಳ ಹಿಂದೆ ಮೊಳೆಕೊಯ್ಲು ಅಳವಡಿಸಲಾಗಿದ್ದು, ನೀರಿನ ಸಮಸ್ಯೆ ಮುಂದೆ ಬರಲ್ಲ ಅನ್ನುವ ವಿಶ್ವಾಸವಿದೆ ಎಂದು ಅವರು ಹೇಳುತ್ತಾರೆ.

ಜಲಮರುಪೂರಣ ಹೊಂಡ
ಮನೆಯಲ್ಲಿ ಬಾವಿ, ಬೋರ್‌ವೆಲ್ ಇಲ್ಲ ಆದರೆ ಪಕ್ಕದ ಮನೆಯಲ್ಲಿ ಬಾವಿ ಇದೆ ಅಲ್ಲಿನ ನೀರಿನ ಮಟ್ಟ ಏರಿಕೆಯಾಗಲಿ, ಅಂತರ್ಜಲ ಮಟ್ಟ ವೃದ್ಧಿಸಲಿ ಎಂಬ ಕಾರಣಕ್ಕೆ ಮನೆ ಸಮೀಪದಲ್ಲಿ ಜಲಮರುಪೂರಣ ಹೊಂಡ ಮಾಡಿದ್ದೇನೆ ಎಂದು ಹೇಳುತ್ತಾರೆ ಶಕ್ತಿನಗರದ ನೇಜಿನ ಗುರಿ ನಿವಾಸಿ ರಾಕೇಶ್‌ ಕುಮಾರ್‌.

ಮೊದಲಿಗೆ 5 ಅಡಿ ಅಗಲ 5 ಅಡಿ ಉದ್ದದ ಹೊಂಡ ತೆಗೆದೆ. ಅದರ ಮೇಲೆ ದೊಡ್ಡ ಗಾತ್ರದ ಹಾಗೂ ಸಣ್ಣ ಗಾತ್ರದ ಕಲ್ಲು ಗಳನ್ನು ಹಾಕಿದೆ. ಬಳಿಕ 6 ಬುಟ್ಟಿ ಜಲ್ಲಿ ಸುರಿದೆ. ಇದೀಗ ಮನೆಯ ಟೆರೇಸ್‌ ನಿಂದ ಬೀಳುವ ಮಳೆ ನೀರು ನೇರವಾಗಿ ಆ ಹೊಂಡಕ್ಕೆ ಹೋಗುವಂತೆ ಮಾಡಿದೆ. ನೀರು ಹೊಂಡದ ಒಳಗೆ ಹೋಗುವ ಸದ್ದು ಕೇಳುತ್ತದೆ. ನಮಗೆ ಅಥವಾ ಅಕ್ಕಪಕ್ಕದ ಜನರಿಗೆ ಪ್ರಯೋಜನವಾಗಲಿ ಎಂಬ ಆಸೆ ನಮ್ಮದು. ಮಳೆಕೊಯ್ಲು, ಜಲಮರುಪೂರಣ ಮಾಡದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಸಮಸ್ಯೆಯಾಗಲಿದೆ ಎಂಬುದು ಎಲ್ಲರಿಗೂ ಅರಿವಾಗಲಿ ಎಂದು ಅವರು ಪತ್ರಿಕೆಗೆ ತಿಳಿಸಿದ್ದಾರೆ.

ಮಳೆ ವಿಳಂಬವೇ ಮಳೆಕೊಯ್ಲು ಅಳವಡಿಸಲು ಪ್ರೇರಣೆ
ಈ ವರ್ಷ ಮಳೆಗಾಲ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ. ನಮ್ಮ ಮನೆಯಲ್ಲಿ ಯಾವ ರೀತಿಯಲ್ಲಿ ‘ಮಳೆಕೊಯ್ಲು’ ನಿರ್ವಹಣೆ ಮಾಡಬಹುದೆಂದು ಕುಟುಂಬದವರೊಂದಿಗೆ ಚರ್ಚಿಸಿ ಈ ರೀತಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ ಎಂದು ಹೇಳುತ್ತಾರೆ ಅಲಂಕಾರು ಸತ್ಯನಾರಾಯಣ ಭಟ್.ತಮ್ಮ ಮನೆಯ, ದನದ ಕೊಟ್ಟಿಗೆಯ ಛಾವಣಿ ನೀರನ್ನು ಟ್ಯಾಂಕಿ, ಫಿಲ್ಟರ್‌ನ ಸಹಾಯದಿಂದ ಪೈಪ್‌ನ ಮೂಲಕ ನಮ್ಮ ಮನೆಯ ಅಂಗಳದಲ್ಲಿ ಇರುವ ನಿತ್ಯಉಪಯೋಗದ ಕೊಳವೆಬಾವಿಗೆ ಮರುಪೂರಣ ಮಾಡುತ್ತಿದ್ದೇವೆ. ಛಾವಣಿಯಿಂದ ಟ್ಯಾಂಕಿಗೆ ಬರುವ ನೀರಿನಲ್ಲಿರುವ ಕಸಕಡ್ಡಿ ತಡೆ ಹಿಡಿಯಲು ಕಬ್ಬಿಣದ ಮೆಶ್‌ ಅನ್ನು ಟ್ಯಾಂಕಿಗೆ ಅಳವಡಿಸಿದ್ದೇವೆ. ಮುಂದಿನ ವರ್ಷ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎನ್ನುವ ಭಾವನೆ ನಮ್ಮದು ಎಂದು ಅವರು ಪತ್ರಿಕೆಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.