ಮಾ.19: ಪ್ರಥಮ ಪಿಯು ಫಲಿತಾಂಶ
Team Udayavani, Mar 17, 2019, 3:05 AM IST
ಮಂಗಳೂರು / ಉಡುಪಿ: ಈ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮಾ. 19ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಪ್ರಕಟಿಸಲಾಗುವುದು. ದ.ಕ. ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟ ಪದವಿಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಆನ್ಲೈನ್ನಲ್ಲಿ ಪಡೆಯಲು ಅವಕಾಶ ಇದೆ. ಮಾ. 19ರ ಬೆಳಗ್ಗೆ 7ರಿಂದ results.dkpucpa.comನಲ್ಲಿ ವಿದ್ಯಾರ್ಥಿಯು ತನ್ನ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸಿ ಪಡೆದುಕೊಳ್ಳಬಹುದು. ಉತ್ತೀರ್ಣರಾದ ವಿದ್ಯಾರ್ಥಿಗಳು ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವಿದೆ.
ಉಡುಪಿ ಜಿಲ್ಲೆಯಲ್ಲಿ ಆನ್ಲೈನ್ ಫಲಿತಾಂಶಕ್ಕೆ ಅನುಮತಿ ಸಿಗದ ಕಾರಣ ಕಾಲೇಜುಗಳಲ್ಲಿ ಫಲಿತಾಂಶ ಪಡೆದುಕೊಳ್ಳಬೇಕು.
ಅನುತ್ತೀರ್ಣಗೊಂಡ ವಿದ್ಯಾರ್ಥಿ ಗಳಿಗೆ ಎ.28ರಿಂದ ಮೇ 10ರ ವರೆಗೆ ಪೂರಕ ಪರೀಕ್ಷೆಯನ್ನು ದ.ಕ. ಜಿಲ್ಲೆಯ 7 ಮತ್ತು ಉಡುಪಿ ಜಿಲ್ಲೆಯ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು. ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಎಂಸಿಎ (ಮಾರ್ಕ್ಸ್ ಕಮ್ ಅಪ್ಲಿಕೇಶನ್) ಡೌನ್ಲೋಡ್ ಮಾಡಿಕೊಂಡು ಮಾ. 30ರೊಳಗಾಗಿ ನಿಗದಿತ ಶುಲ್ಕದೊಂದಿಗೆ ಸಂಬಂಧಪಟ್ಟ ಕಾಲೇಜಿಗೆ ಸಲ್ಲಿಸಬೇಕು. ಪೂರಕ ಪರೀಕ್ಷೆಯ ಫಲಿತಾಂಶವನ್ನು ಮೇ 15ರಂದು ಪ್ರಕಟಿಸಲು ಇಲಾಖೆಯು ಆದೇಶಿಸಿದೆ ಹಾಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿಗೆ ದಾಖಲಾಗಲು ಅವಕಾಶವಿದೆ ಎಂದು ಡಿಡಿಪಿಯು ತಿಳಿಸಿದ್ದಾರೆ.
ದ್ವಿತೀಯ ಪಿಯು ಪರೀಕ್ಷೆ: 374 ಗೈರು
ಮಂಗಳೂರು/ಉಡುಪಿ: ದ್ವಿತೀಯ ಪಿಯುಸಿಗೆ ಶನಿವಾರ ಕನ್ನಡ ಪರೀಕ್ಷೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 23,226 ಮಂದಿ ವಿದ್ಯಾರ್ಥಿಗಳ ಪೈಕಿ 22,958 ಮಂದಿ ಹಾಜರಾಗಿದ್ದಾರೆ. 268 ಮಂದಿ ಗೈರು ಹಾಜರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 9,489 ವಿದ್ಯಾರ್ಥಿಗಳಲ್ಲಿ 106 ಮಂದಿ ಗೈರುಹಾಜರಾಗಿ 9,383 ಮಂದಿ ಹಾಜರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…