ಮಾಸ್ಕ್ ಧರಿಸುವ ನಿಯಮ ಪಾಲಿಸಿ: ಡಿಸಿ
ಜಿಲ್ಲಾದ್ಯಂತ ಮಾಸ್ಕ್ ದಿನಾಚರಣೆ, ಜನ ಜಾಗೃತಿ ಅಭಿಯಾನ
Team Udayavani, Jun 19, 2020, 5:22 AM IST
ಮಹಾನಗರ: ಕೋವಿಡ್-19 ನಿಯಂತ್ರಿಸುವ ಸಲುವಾಗಿ ಎಲ್ಲ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮನೆಯಿಂದ ಹೊರಬರುವ ಸಮಯದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಕರೆ ನೀಡಿದ್ದಾರೆ.
ಗುರುವಾರ ರಾಜ್ಯಾದ್ಯಂತ ಮಾಸ್ಕ್ ದಿನಾಚರಣೆ ಕೈಗೊಂಡ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತದ ವತಿಯಿಂದ ಜಾಗೃತಿ ಕಾರ್ಯಕ್ರಮ ನಗರದಲ್ಲಿ ಜರಗಿತು.
ಕೋವಿಡ್-19 ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಸರಕಾರದ ಕಾರ್ಯಗಳ ಜತೆಗೆ ನಾಗರಿ ಕರ ಪಾತ್ರವೂ ಅತ್ಯಂತ ಅಮೂಲ್ಯ. ಅದರಲ್ಲಿಯೂ ಮನೆಯಿಂದ ಹೊರಗೆ ಬರುವಾಗ ಎಲ್ಲ ನಾಗರಿಕರು ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಮೂಲಕ ನಾಗರಿಕರು ತಮ್ಮಿಂದಾಗುವಷ್ಟು ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ಕೈ ಜೋಡಿಸಿ ದಂತಾಗುತ್ತದೆ. ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಸ್ಕ್ ಡೇ ಆಚರಿಸಲಾಗುತ್ತಿದೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ಮಾತ ನಾಡಿದರು. ಮೇಯರ್ ದಿವಾಕರ ಪಾಂಡೇಶ್ವರ, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರ್, ಅಪರ ಜಿಲ್ಲಾಧಿಕಾರಿ ಎಂ.ಜಿ. ರೂಪಾ, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್, ನಿತಿನ್ ಕುಮಾರ್ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಕಚೇರಿಯಿಂದ ಹೊರಟ ಜಾಗೃತಿ ಮೆರವಣಿಗೆ ಸ್ಟೇಟ್ಬ್ಯಾಂಕ್ನ ಹ್ಯಾಮಿಲ್ಟನ್ ಸರ್ಕಲ್ ಮೂಲಕವಾಗಿ ತಿರುಗಿ ಮತ್ತೆ ಜಿಲ್ಲಾಧಿಕಾರಿ ಕಚೇರಿಗೆ ಬಂದು ಸಮಾಪ್ತಿಯಾಯಿತು.
“ಕೋವಿಡ್-19 ನಿಯಂತ್ರಣಕ್ಕೆ ಮಾಸ್ಕ್ ಧರಿಸಿ, ನಿಯಮ ಪಾಲಿಸಿ’
ಮೂಡುಬಿದಿರೆ: ಕೋವಿಡ್-19 ಸೋಂಕು ನಿಯಂತ್ರಿಸಲು ಎಲ್ಲರೂ ಮಾಸ್ಕ್ ಧರಿಸಬೇಕು; ಅಂತರ ಕಾಪಾಡಿಕೊಳ್ಳುವ ಜತೆಗೆ ಆಗಾಗ ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಕೈಗಳನ್ನು ತೊಳೆದುಕೊಳ್ಳುವುದು ಅಗತ್ಯ ಎಂದು ತಹಶೀಲ್ದಾರ್ ಅನಿತಾಲಕ್ಷ್ಮೀ ಹೇಳಿದರು.
ಮೂಡುಬಿದಿರೆ ತಾಲೂಕು ಆಡಳಿತ ವತಿಯಿಂದ ಪುರಸಭೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಗುರುವಾರ ತಾಲೂಕು ಕಚೇರಿ ಆವರಣದಲ್ಲಿ “ಮಾಸ್ಕ್ ದಿನ’ದ ಅಂಗವಾಗಿ ಏರ್ಪಡಿಸಲಾದ “ಜಾಗೃತಿ ಜಾಥಾ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶಶಿಕಲಾ ಮಾತನಾಡಿ, ಕೋವಿಡ್-19 ಸೋಂಕು ತಡೆಗಟ್ಟಲು ಸರಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ಎಲ್ಲರಿಗೂ ಒಳಿತಾಗುವುದು ಎಂದರು.
ಮೆರವಣಿಗೆ
ತಾಲೂಕು ಕಚೇರಿ ಆವರಣದಿಂದ ಹೊರಟ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಬಸ್ನಿಲ್ದಾಣ ಮೂಲಕ ಪುರಸಭೆ ಎದುರಿನ ರಸ್ತೆಯಲ್ಲಿ ಮುಂದುವರಿದು ತಹಶೀಲ್ದಾರ್ ಕಚೇರಿ ಎದುರು ಸಂಪನ್ನಗೊಂಡಿತು.
ಮಾಜಿ ಸಚಿವ ಅಭಯಚಂದ್ರ, ಜಿ.ಪಂ.ಸದಸ್ಯ ಕೆ.ಪಿ. ಸುಚರಿತ ಶೆಟ್ಟಿ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ತೋಡಾರು ದಿವಾಕರ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಇಂದೂ ಎಂ., ರೋಟರಿ ಕ್ಲಬ್ ಅಧ್ಯಕ್ಷ ಸಿ.ಎಚ್. ಅಬ್ದುಲ್ ಗಫೂರ್, ರೋಟರಿ ಶಾಲೆ ಸಂಚಾಲಕ ಡಾ| ಯತಿಕುಮಾರ್ ಸ್ವಾಮಿ ಗೌಡ, ಜವನೆರ್ ಬೆದ್ರದ ಸ್ಥಾಪಕ ಅಮರ್ ಕೋಟೆ, ಆಶಾ ಕಾರ್ಯಕರ್ತೆಯರು, ಪುರಸಭೆ ಸದಸ್ಯರು, ಗ್ರಾಮ ಲೆಕ್ಕಿಗರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ